ತೊಕ್ಕೊಟ್ಟು ಕರ್ಣಾಟಕ ಬ್ಯಾಂಕ್ ಗೆ ಬೆಂಕಿ, ದಾಖಲೆ ಸುಡುವುದೇ ಉದ್ದೇಶವಾ?
ತೊಕ್ಕೊಟ್ಟು ಒಳಪೇಟೆಯಲ್ಲಿರುವ ಕರ್ಣಾಟಕ ಬ್ಯಾಂಕ್ ಗೆ ಬೆಂಕಿ ಹಾಕಿದವರ ಉದ್ದೇಶ ಏನಿತ್ತು ಎಂಬ ಬಗ್ಗೆ ಪೊಲೀಸರು ಸಮಗ್ರವಾದ ತನಿಖೆ ಮಾಡಬೇಕಿದೆ. ಮಂಗಳವಾರ ರಾತ್ರಿ ಈ ಕೃತ್ಯದಲ್ಲಿ ಭಾಗಿಯಾದವರನ್ನು ಕಾನೂನು ವ್ಯಾಪ್ತಿಯೊಳಗೆ ತರಬೇಕು.
ಮಂಗಳೂರು, ಮಾರ್ಚ್ 1: ತೊಕ್ಕೊಟ್ಟು ಒಳಪೇಟೆಯಲ್ಲಿರುವ ಕರ್ಣಾಟಕ ಬ್ಯಾಂಕ್ ಕಚೇರಿಗೆ ಕಿಡಿಗೇಡಿಗಳು ಕಿಟಕಿ ಮೂಲಕ ಬೆಂಕಿ ಹಾಕಿದ್ದು, ಸ್ಥಳೀಯರು ಸಮಯಪ್ರಜ್ಞೆಯಿಂದ ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಕಳೆದ ವಾರವಷ್ಟೇ ಕರ್ಣಾಟಕ ಬ್ಯಾಂಕ್ ಹತ್ತಿರದಲ್ಲೇ ಇರುವ ಸಿಪಿಎಂ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದು, ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಕರ್ಣಾಟಕ ಬ್ಯಾಂಕ್ ನ ಒಳಗೆ ಬೆಂಕಿ ಹಾಕಿದ್ದು, ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸಿದ್ದಾರೆ.

ಮಂಗಳವಾರ ರಾತ್ರಿ ಸುಮಾರು 10.30ರ ವೇಳೆಗೆ ಬ್ಯಾಂಕ್ ಒಳಗೆ ಬೆಂಕಿ ಹೊತ್ತಿಕೊಂಡಿದ್ದನ್ನು ಕಂಡ ಸ್ಥಳೀಯರು ಬ್ಯಾಂಕ್ ಅಧಿಕಾರಿಗಳಿಗೆ ಫೋನ್ ಮೂಲಕ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ಅಗ್ನಿಶಾಮಕದಳದವರಿಗೆ ವಿಷಯ ಮುಟ್ಟಿಸಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.[ಬದುಕು ಬೆಂದು ಹೋಗುವಂತೆ ಮಾಡಿದ ಬಂಡೀಪುರದ ಬೆಂಕಿ ಅನಾಹುತ]

ಕಿಡಿಗೇಡಿಗಳು ಬ್ಯಾಂಕ್ ನ ಕಿಟಕಿ ಬಾಗಿಲು ತೆರೆದು ಒಳಗೆ ಬೆಂಕಿ ಹಾಕಿದ್ದು, ಮಹತ್ವದ ಅನೇಕ ಕಡತಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ. ಬ್ಯಾಂಕ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಉಳ್ಳಾಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಒಂದೇ ವಾರದೊಳಗೆ ತೊಕ್ಕೊಟ್ಟು ಪರಿಸರದಲ್ಲಿ ಮೂರು ಕಡೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಮೊದಲಿಗೆ ಸಿಪಿಎಂ ಕಚೇರಿ, ತೊಕ್ಕೊಟ್ಟಿನ ಗೂಡಂಗಡಿಗಳಿಗೆ, ಇದೀಗ ಬ್ಯಾಂಕಿಗೂ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications