ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು

|
Google Oneindia Kannada News

ಮಂಗಳೂರು, ಮೇ 08; ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜನಪದ ಕಲಾವಿದೆ ಸುಕ್ರಿ ಬೊಮ್ಮಗೌಡ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಗೇರಿ ಗ್ರಾಮದ ಸುಕ್ರಿ ಬೊಮ್ಮಗೌಡ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ.

ಸುಕ್ರಿ ಬೊಮ್ಮಗೌಡ, ಸಾಕ್ಷಿ ಮಲಿಕ್ ಸೇರಿ ಐವರಿಗೆ ಚುಂಚಶ್ರೀ ಪ್ರಶಸ್ತಿಸುಕ್ರಿ ಬೊಮ್ಮಗೌಡ, ಸಾಕ್ಷಿ ಮಲಿಕ್ ಸೇರಿ ಐವರಿಗೆ ಚುಂಚಶ್ರೀ ಪ್ರಶಸ್ತಿ

Sukri Bommagouda Admitted To Mangaluru Hospital

ಬುಡಕಟ್ಟು ಸಮುದಾಯವಾದ ಹಾಲಕ್ಕಿ ಒಕ್ಕಲಿಗ ಪಂಗಡಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಹಾಲಕ್ಕಿ ಸಮುದಾಯವನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಹೋರಾಟವನ್ನು ಸಹ ಮಾಡುತ್ತಿದ್ದಾರೆ.

ಸುಕ್ರಿ ಬೊಮ್ಮಗೌಡ ಸೇರಿದಂತೆ 89 ಸಾಧಕರಿಗೆ ಪದ್ಮ ಪ್ರಶಸ್ತಿ ಸುಕ್ರಿ ಬೊಮ್ಮಗೌಡ ಸೇರಿದಂತೆ 89 ಸಾಧಕರಿಗೆ ಪದ್ಮ ಪ್ರಶಸ್ತಿ

ಸುಕ್ರಿ ಬೊಮ್ಮಗೌಡ ಹಾಲಕ್ಕಿ ಸಮಾಜದ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾಗಿದ್ದಾರೆ. ಸಮಾಜದ ಸಾಂಸ್ಕೃತಿಕ ಪರಂಪರೆಯನ್ನು ರಾಷ್ಟ್ರದ ರಾಜಧಾನಿ ತನಕ ತಲುಪಿಸಿದ್ದಾರೆ 83 ವರ್ಷದ ಸುಕ್ರಜ್ಜಿ.

ಶಿವಮೊಗ್ಗ ದಸರಾ ಹಬ್ಬಕ್ಕೆ ಚಾಲನೆ ನೀಡಿದ ಸುಕ್ರಿ ಬೊಮ್ಮಗೌಡಶಿವಮೊಗ್ಗ ದಸರಾ ಹಬ್ಬಕ್ಕೆ ಚಾಲನೆ ನೀಡಿದ ಸುಕ್ರಿ ಬೊಮ್ಮಗೌಡ

ಕರ್ನಾಟಕ ವಿಶ್ವವಿದ್ಯಾಲಯದ ಜನಪದ ವಿಭಾಗದಲ್ಲಿ 5 ವರ್ಷಗಳ ಕಾಲ ಹಾಲಕ್ಕಿ ಸಮುದಾಯ ಆಹಾರ, ಉಡುಪು, ಹಾಡು ಮುಂತಾದ ಸಾಂಸ್ಕೃತಿಕ ವಿಷಯಗಳನ್ನು ಸಾವಿರಾರು ವಿದ್ಯಾರ್ಥಿಗಳಿಗೆ ಸುಕ್ರಿ ಬೊಮ್ಮಗೌಡ ತಿಳಿಸಿಕೊಟ್ಟಿದ್ದಾರೆ.

English summary
Padma awardee social activist Sukri Bommagouda admitted to a private hospital in Mangaluru after complaining breathlessness. Her condition is stable said doctors.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X