ಸುಳ್ಯ ಕೆ.ಎಸ್.ಆರ್.ಟಿ.ಸಿ ಡಿಪೋ ಕಾಮಗಾರಿ ಪೂರ್ಣಗೊಳ್ಳುವುದೆಂದು?
ಮೂರುವರೆ ಕೋಟಿ ವೆಚ್ಚದಲ್ಲಿ 2014ರಲ್ಲಿ ಸುಳ್ಯ ನಗರದ ಮುಖ್ಯ ಬಸ್ ನಿಲ್ದಾಣದಿಂದ ಒಂದು ಕಿ.ಮೀ. ದೂರದಲ್ಲಿರುವ ಉಬರಡ್ಕ ರಸ್ತೆಯ ಕಾಯರ್ತೋಡಿನಲ್ಲಿ ನೂತನ ಕೆಎಸ್ಆರ್ಟಿಸಿ ಬಸ್ ಡಿಪೋ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು.
ಮಂಗಳೂರು, ಎಪ್ರಿಲ್ 18: ಕಾಮಗಾರಿ ಆರಂಭವಾಗಿ ವರ್ಷ ಮೂರು ಕಳೆಯಿತು. ಹೀಗಿದ್ದೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕೆಎಸ್ಆರ್ಟಿಸಿ ಡಿಪೋದ ನಿರ್ಮಾಣ ಮಾತ್ರ ಇನ್ನೂ ಮುಗಿದಿಲ್ಲ. ಹೀಗಾಗಿ ಲೋಕಾರ್ಪಣೆ ಮತ್ತಷ್ಟು ವಿಳಂಬವಾಗುತ್ತಿದೆ.
ಮೂರುವರೆ ಕೋಟಿ ವೆಚ್ಚದಲ್ಲಿ ಸುಳ್ಯ ನಗರದ ಮುಖ್ಯ ಬಸ್ ನಿಲ್ದಾಣದಿಂದ ಒಂದು ಕಿ.ಮೀ. ದೂರದಲ್ಲಿರುವ ಉಬರಡ್ಕ ರಸ್ತೆಯ ಕಾಯರ್ತೋಡಿನಲ್ಲಿ ನೂತನ ಕೆಎಸ್ಆರ್ಟಿಸಿ ಬಸ್ ಡಿಪೋ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಟೆಂಡರ್ ಅವಧಿ ಮುಗಿದರೂ ಕಾಮಗಾರಿ ಮಾತ್ರ ಮುಗಿದಿಲ್ಲ. ಆಮೆ ನಡಿಗೆಯಲ್ಲಿ ಸಾಗುತ್ತಿರುವ ಕಾಮಗಾರಿಯಿಂದಾಗಿ ಡಿಪೋ ಉದ್ಘಾಟನೆ ಮತ್ತೆ ಮತ್ತೆ ವಿಳಂಬವಾಗುತ್ತಿದೆ.[ಮಂಗಳೂರಿನ ವೀರಯೋಧ ಸಂತೋಷ್ ಮನೆಗೆ ಗಣ್ಯರ ಭೇಟಿ]

ಈ ಹಿಂದೆ ಡಿಪೋ ನಿರ್ಮಾಣವಾಗುತ್ತಿರುವ ಸ್ಥಳ ವಿವಾದ ಸೃಷ್ಟಿಸಿತ್ತು. ಈ ಸ್ಥಳದ ಭೂ ಹಕ್ಕು ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ವಿವಾದಗಳಿದ್ದವು. ಇದು ಕೋರ್ಟ್ ಮೆಟ್ಟಿಲೇರಿತ್ತು. ಕೊನೆಗೂ ಈ ವಿವಾದಕ್ಕೆ ಇತಿಶ್ರೀ ಸಿಕ್ಕಿತು.
ಇದೀಗ 7 ಎಕರೆ ಜಾಗದಲ್ಲಿ ಡಿಪೋ ನಿರ್ಮಾಣವಾಗುತ್ತಿದೆ. 2014 ರಲ್ಲಿ ಕಾಮಗಾರಿ ಆರಂಭಗೊಂಡಿದ್ದು, ಈ ಜಾಗ ಬೆಟ್ಟ ಪ್ರದೇಶವಾಗಿದ್ದರಿಂದ ಇದನ್ನ ಸಮತಟ್ಟು ಮಾಡಲು ತಿಂಗಳುಗಳೇ ಬೇಕಾಯಿತು.[ಖುರೇಷಿ ಮೇಲೆ ಪೊಲೀಸ್ ದೌರ್ಜನ್ಯ: ಸಿಐಡಿ ತನಿಖೆಗೆ ಆದೇಶ]
ಮೈಸೂರು ಬೆಂಗಳೂರು ಕಡೆಯಿಂದ ಕೊಡಗು ಮೂಲಕ ಬರುವವರು ಕುಕ್ಕೆ ಸುಬ್ರಹ್ಮಣ್ಯ ಮುಂತಾದ ಕಡೆ ಹೋಗಲು, ಅದೇ ರೀತಿ ಇಲ್ಲಿನವರು ಮೈಸೂರು, ಮಡಿಕೇರಿಗೆ ಹೋಗಬೇಕೆಂದರೆ ಸುಳ್ಯ ಮೂಲಕವೇ ಹೋಗಬೇಕು. ಹೀಗಾಗಿ ದಿನಾಲೂ ಇಲ್ಲಿ ಜನ ಸಂಚಾರ ಹೆಚ್ಚಾಗಿರುತ್ತವೆ.
ಈ ನೂತನ ಬಸ್ ಡಿಪೋ ನಿರ್ಮಾಣವಾದಲ್ಲಿ ಇಲ್ಲಿನ ಗ್ರಾಮೀಣ ಭಾಗದ ಜನರಿಗೆ ಪ್ರಯಾಣ ಮಾಡಲು ಮತ್ತಷ್ಟು ಸುಲಭವಾಗುತ್ತದೆ.
ಸದ್ಯ ಇಲ್ಲಿ ಬಸ್ ನಿಲ್ಲುವ ಸ್ಥಳದ ಕಾಮಗಾರಿ, ಪೆಟ್ರೋಲ್ ಪಂಪ್ ಅಳವಡಿಸುವ ಕಾಮಗಾರಿ ಸೇರಿ ಕೆಲ ಕಾಮಗಾರಿಗಳು ಬಾಕಿ ಇವೆ. ಕೂಡಲೇ ಇವನ್ನ ಪೂರ್ಣಗೊಳಿಸಬೇಕಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications