ಸುಬ್ರಹ್ಮಣ್ಯ ದೇವಾಲಯದ ಹೆಸರು ಬಳಕೆ ತಡೆದು ಆದೇಶ ಹೊರಡಿಸಿದ ಸುಳ್ಯ ನ್ಯಾಯಾಲಯ
ಮಂಗಳೂರು, ನವೆಂಬರ್.06:ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಹಾಗೂ ಸಂಪುಟ ನರಸಿಂಹ ಮಠದ ನಡುವೆ ಸೃಷ್ಟಿಯಾಗಿರುವ ವಿವಾದ ಮತ್ತಷ್ಟು ಜಟಿಲಗೊಳ್ಳುತ್ತಲೇ ಇದೆ. ಈ ವಿವಾದ ಬಗೆಹರಿಯುವ ಯಾವುದೇ ಲಕ್ಷಣಗಳು ಕಂಡು ಬರುತ್ತಿಲ್ಲ.
ಈಗ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಹಾಗೂ ಮಠದ ಕುರಿತು ಸುಳ್ಯ ನ್ಯಾಯಾಲಯ ಹೊರಡಿಸಿರುವ ನಿರ್ಬಂಧಕಾಜ್ಞೆ ಈ ವಿವಾದವನ್ನು ಮತ್ತಷ್ಟು ಜಟಿಲಗೊಳಿಸಿದೆ. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಚಿತ್ರ, ಸೇವೆ, ದೇವರ ಫೋಟೋ ಹಾಗೂ ಕ್ಷೇತ್ರದ ಹೆಸರನ್ನು ಶ್ರೀ ಸಂಪುಟ ನರಸಿಂಹ ಮಠ ಬಳಸದಂತೆ ಸುಳ್ಯ ನ್ಯಾಯಾಲಯ ಆದೇಶ ಹೊರಡಿಸಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ದೇವಳದ ಸೇವಾ ಪಟ್ಟಿಯಲ್ಲಿರುವ ಸರ್ಪ ಸಂಸ್ಕಾರ, ನಾಗ ಪ್ರತಿಷ್ಠೆ, ಆಶ್ಲೇಷಾ ಬಲಿ ಹಾಗೂ ಇನ್ನಿತರ ಯಾವುದೇ ಸೇವೆಗಳನ್ನು ಸ್ಥಳೀಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ನಡೆಸದಂತೆಯೂ ಹಾಗೂ ದೇವರ ಫೋಟೋ, ಆಲ್ಬಂಗಳು, ರಥ ಉತ್ಸವಾದಿಗಳು, ರಥೋತ್ಸವಗಳು ಮತ್ತು ಕ್ಷೇತ್ರದ ಹೆಸರನ್ನು ಯಾವುದೇ ಮಾಧ್ಯಮಗಳಲ್ಲಿ, ರಶೀದಿಗಳಲ್ಲಿ, ಫಲಕ ಇತ್ಯಾದಿಗಳಲ್ಲಿ ಮಠಾಧಿಪತಿಗಳು ಮತ್ತು ಸಂಬಂಧಿಸಿದ ಟ್ರಸ್ಟ್ ಗಳು ಬಳಸದಂತೆ ಸುಳ್ಯ ಕೋರ್ಟ್ ನಿರ್ಬಂಧಕಾಜ್ಞೆ ಹೊರಡಿಸಿದೆ.

ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯ ಸರಕಾರದ ಅಧೀನಕ್ಕೆ ಒಳಪಟ್ಟಿದ್ದು ಧಾರ್ಮಿಕ ದತ್ತಿ ಕಾಯಿದೆ ಅನ್ವಯಿಸುತ್ತದೆ. ಆ ಕಾರಣ ದೇವಾಲಯದ ಹೆಸರಿನಲ್ಲಿ ವೈಯಕ್ತಿಕ ಸೇವೆ, ಕಾಣಿಕೆ ಅಥವಾ ದೇಣಿಗೆ ಸಂಗ್ರಹ ಮಾಡುವುದು ಅಪರಾಧವಾಗುತ್ತದೆ ಎಂದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿದೆ.

ದೇವಾಲಯದಲ್ಲಿ ನಡೆಯುತ್ತಿರುವ ಸೇವೆಗಳು ಸುಬ್ರಹ್ಮಣ್ಯ ಮಠದ್ದು ಆದರೆ ಸಂಪುಟ ನರಸಿಂಹ ಮಠದಲ್ಲಿ ನಡೆಸಲಾಗುತ್ತಿದೆ ಎಂದು ದೂರಿ ಸುಳ್ಯ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು. ಈ ಕುರಿತು ಎರಡು ಕಡೆಯ ವಾದ ಆಲಿಸಿರುವ ನ್ಯಾಯಾಲಯ ತಾತ್ಕಾಲಿಕ ತೀರ್ಪು ನೀಡಿದೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications