ತಹಶೀಲ್ದಾರ್ ಶ್ರಮದಿಂದ ನಿರ್ಗತಿಕ ಕುಟುಂಬಕ್ಕೆ ಸಿಕ್ಕಿತು 'ಬೆಳಕು'
ಮಂಗಳೂರು, ಆಗಸ್ಟ್ 30: ಸರ್ಕಾರಿ ಅಧಿಕಾರಿ ಹಾಗೂ ಕೆಲ ಉತ್ಸಾಹಿ ತರುಣರ ಶ್ರಮ, ಸೇವೆಯಿಂದ ರಸ್ತೆ ಬದಿ ಜೀವನ ಸಾಗಿಸುತ್ತಿದ್ದ ನಿರ್ಗತಿಕ ಕುಟುಂಬವೊಂದಕ್ಕೆ ಸೂರೊಂದು ದೊರಕಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ದಾನಿಗಳ ಸಹಕಾರ, ಯುವ ಸಂಘಟನೆಗಳ ಶ್ರಮದಾನದಿಂದ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಮನೆ ನಿರ್ಮಾಣಗೊಂಡಿದೆ.
ಕಳೆದ ಕೆಲ ವರ್ಷಗಳಿಂದ ಇಲ್ಲಿನ ರಾಮಣ್ಣ ನಾಯ್ಕ ಮತ್ತು ಲಲಿತಾ ದಂಪತಿ ರಸ್ತೆ ಬದಿ ಜೋಪಡಿಯಲ್ಲಿ ವಾಸವಾಗಿದ್ದರು. ಆದರೆ ಇತ್ತೀಚೆಗೆ ಸುರಿದ ಭಾರೀ ಮಳೆ ಗಾಳಿಗೆ ಗುಡಿಸಲು ಕುಸಿದು ಬಿದ್ದಿತ್ತು. ಈ ಕುರಿತು ಮಾಹಿತಿ ಪಡೆದ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸ್ಥಳಕ್ಕೆ ತೆರಳಿ ಈ ಕುಟುಂಬವನ್ನು ಬೇರೆಡೆಗೆ ಸ್ಥಳಾಂತರಿಸಿದ್ದರು.
ಬಳಿಕ ತಹಶೀಲ್ದಾರ್ ಸಮಾನ ಮನಸ್ಕರೊಂದಿಗೆ ಚರ್ಚಿಸಿ ಈ ಕುಟುಂಬಕ್ಕೆ ಒಂದು ಮನೆ ನಿರ್ಮಿಸಿ ಕೊಡುವ ಯೋಜನೆ ರೂಪಿಸಿದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ದಾನಿಗಳಿಂದ ಸಹಾಯ ಹಸ್ತ ಚಾಚುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಆ ನಿರ್ಗತಿಕ ಕುಟುಂಬಕ್ಕೆ ನೆರವಿನ ಮಹಾಪೂರವೇ ಹರಿದು ಬಂದಿತ್ತು.

ಮನೆ ನಿರ್ಮಾಣಕ್ಕೆ ಅಗತ್ಯವಾದ ಕಲ್ಲು, ಸಿಮೆಂಟ್, ಇಟ್ಟಿಗೆ, ಮರಳು, ಶೀಟ್, ಪೇಯಿಂಟ್, ಬಾಗಿಲು, ಕಿಟಕಿ ಹೀಗೆ ಎಲ್ಲವನ್ನೂ ಸುಳ್ಯದ ದಾನಿಗಳು ಉಚಿತವಾಗಿ ಒದಗಿಸಿಕೊಟ್ಟರು. ನಿರ್ಮಾಣ ಕಾರ್ಯಕ್ಕೆ ಯುವ ಬ್ರಿಗೇಡ್, ಎಸ್ಕೆಎಸ್ಎಸ್ಎಫ್ ವಿಖಾಯ ತಂಡ, ಎಸ್ಎಸ್ಎಫ್, ಎಸ್ವೈಎಸ್ ಇತ್ಯಾದಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಕೈ ಜೋಡಿಸಿದರು.

ಕೆಲ ದಾನಿಗಳು ಮನೆ ನಿರ್ಮಾಣ ಸಾಮಗ್ರಿಗಳನ್ನು ನೀಡಿದರೆ, ವಿವಿಧ ಸಂಘಟನೆಗಳ ಕಾರ್ಯಕರ್ತರು ನಿರ್ಮಾಣ ಕಾರ್ಯದಲ್ಲಿ ಭಾಗಿಯಾದರು. ಈಗ ಕೇವಲ 13 ದಿನದಲ್ಲಿ ಪುಟ್ಟ ಮನೆಯೊಂದು ತಲೆ ಎತ್ತಿ ನಿಂತಿದೆ.
ಪ್ರತಿದಿನ ಒಂದೊಂದು ಸಂಘಟನೆಗಳ ಕಾರ್ಯಕರ್ತರು ಮಳೆ ಬಿಸಿಲು ಲೆಕ್ಕಿಸದೆ ನಿರಂತರ ಕೆಲಸ ಮಾಡಿದ್ದರಿಂದ 13 ದಿನದಲ್ಲೇ ಶ್ರಮಧಾಮ ಪೂರ್ಣಗೊಂಡಿತು. ಮನೆ ನಿರ್ಮಾಣಕ್ಕಾಗಿ ಎರಡು ಲಕ್ಷ ರೂ. ವೆಚ್ಚದ ಸಾಮಗ್ರಿಗಳನ್ನು ದಾನಿಗಳು ಕೊಡುಗೆಯಾಗಿ ನೀಡಿದ್ದರು. ರಾಮಣ್ಣ ನಾಯ್ಕ ಕುಟುಂಬಕ್ಕಾಗಿ ನಿರ್ಮಿಸಿದ ಈ ಮನೆಗೆ 'ಬೆಳಕು' ಎಂದು ಹೆಸರಿಡಲಾಗಿದೆ. ತಹಶೀಲ್ದಾರ್ ಕುಂಞಿ ಅಹಮ್ಮದ್ ಇಂದು ಮನೆ ಹಸ್ತಾಂತರ ಮಾಡಲಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications