ವಿಷಪ್ರಸಾದ: ಪೋಷಕರ ಕಳೆದುಕೊಂಡ ಮಕ್ಕಳ ದತ್ತು ಪಡೆಯಲಿದೆ ಆಳ್ವಾಸ್
ಮಂಗಳೂರು ಡಿಸೆಂಬರ್ 17: ಚಾಮರಾಜನಗರದ ಕಿಚ್ಚುಗುತ್ತಿಯ ಸುಳ್ವಾಡಿ ಮಾರಮ್ಮನ ದೇವಸ್ಥಾನದಲ್ಲಿ ಪ್ರಸಾದ ತಿಂದು 14 ಮಂದಿ ಮೃತಪಟ್ಟಿದ್ದು, ಸರ್ಕಾರ ಈಗಾಗಲೇ ಪರಿಹಾರ ಘೋಷಿಸಿದೆ, ಜೊತೆಗೆ ಶಿಕ್ಷಣ ಸಂಸ್ಥೆ ಆಳ್ವಾಸ್ ಕೂಡ ನೊಂದವರ ಕಷ್ಟಕ್ಕೆ ಸಹಾಯ ಮಾಡಲು ಮುಂದೆ ಬಂದಿದೆ.
ಸುಳ್ವಾಡಿಯ ಮಾರಮ್ಮ ದೇಗುಲ ಪ್ರಸಾದ ದುರಂತ ಪ್ರಕರಣದಲ್ಲಿ ತಂದೆ, ತಾಯಿ ಕಳಕೊಂಡ ಮೂವರು ಮಕ್ಕಳಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆ ನೆರವು ನೀಡುವುದಾಗಿ ಘೋಷಿಸಿದೆ. ಮಕ್ಕಳ ದತ್ತು ಪಡೆದು ಉಚಿತ ಶಿಕ್ಷಣ ಕೊಡಿಸುವುದಾಗಿ ಆಳ್ವಾಸ್ ಘೋಷಣೆ ಮಾಡಿದೆ. ಮಕ್ಕಳು ಒಪ್ಪಿದಲ್ಲಿ ಮೂಡುಬಿದಿರೆಯ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡುವುದಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಮೋಹನ್ ಆಳ್ವ ಹೇಳಿದ್ದಾರೆ.
ಬಿಎ ಓದುತ್ತಿರುವ ರಾಣಿ, ನರ್ಸಿಂಗ್ ಕಲಿಯುತ್ತಿರುವ ಪ್ರಿಯಾ ಮತ್ತು ಪಿಯುಸಿ ವಿದ್ಯಾರ್ಥಿ ರಾಜೇಶ್ ಅವರನ್ನು ಆಳ್ವಾಸ್ ಶಿಕ್ಷಣ ಸಂಸ್ಥೆ ದತ್ತು ಪಡೆದು ಅವರಿಗೆ ಉಚಿತ ಶಿಕ್ಷಣ ನೀಡಲು ಮುಂದೆ ಬಂದಿದೆ. ಅವರು ಒಪ್ಪಿದ್ದರೆ ಅವರಿಗೆ ಶಿಕ್ಷಣ, ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಅವರ ಸ್ನಾತಕೋತ್ತರ ವ್ಯಾಸಂಗದವರೆಗೆ ನೀಡಲು, ಆ ಬಳಿಕ ಅವರಿಗೆ ಸೂಕ್ತವಾದ ಉದ್ಯೋಗದ ಅವಕಾಶವನ್ನು ಕಲ್ಪಿಸಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ನಿರ್ಧರಿಸಿದ್ದಾರೆ.

ವಿಷಪ್ರಸಾದ ಪ್ರಕರಣ: ಸಾಲೂರು ಮಠದ ಶ್ರೀಗಳು ಹೇಳಿದ್ದೇನು ?
ಮೂವರು ಮಕ್ಕಳಲ್ಲಿ ಅವರ ಅಭಿಪ್ರಾಯವನ್ನು ಕೇಳಿ, ಅವರಿಗೆ ಒಪ್ಪಿಗೆ ಇದ್ದರೆ ಮುಂದಿನ ವ್ಯವಸ್ಥೆ ಕಲ್ಪಿಸುತ್ತೇವೆ. ಮಕ್ಕಳ ಉತ್ತಮ ಭವಿಷ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಸ್ಪಂದಿಸಲು ನಿರ್ಧಾರ ಮಾಡಿದ್ದೇವೆ ಎಂದು ಮೋಹನ್ ಆಳ್ವಾ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications