ಡಿ. ಕೆ. ಶಿವಕುಮಾರ್ ವಿರುದ್ಧ ವಾರೆಂಟ್ ಜಾರಿ; ಪ್ರಕರಣದ ವಿವರ
ಮಂಗಳೂರು, ಸೆಪ್ಟೆಂಬರ್ 15; ಮಾಜಿ ಸಚಿವ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ವಾರೆಂಟ್ ಜಾರಿಯಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂದು ಐಜಿಪಿ ಮತ್ತು ಡಿಐಜಿಗೂ ನೋಟಿಸ್ ನೀಡಲಾಗಿದೆ. ಡಿ. ಕೆ. ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ದಾಖಲಾದ ದೂರಿನ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯ ಡಿ. ಕೆ. ಶಿವಕುಮಾರ್ ವಿರುದ್ಧ ವಾರೆಂಟ್ ಜಾರಿಗೊಳಿಸಿದೆ. ನ್ಯಾಯಾಲಯಕ್ಕೆ ಹಲವು ಬಾರಿ ಸಾಕ್ಷಿ ಹೇಳಲು ಗೈರಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದೆ.
ಹಲವು ಬಾರಿ ಸಮನ್ಸ್ ನೀಡಿದರೂ ಸಾಕ್ಷಿ ಹೇಳಲು ಡಿ. ಕೆ. ಶಿವಕುಮಾರ್ ಹಾಜರಾಗಿರಲಿಲ್ಲ. ಆದ್ದರಿಂದ ವಾರೆಂಟ್ ಜಾರಿಗೊಳಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಲಾಗಿದೆ. ಸೆಪ್ಟೆಂಬರ್ 29ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.
ಡಿ. ಕೆ. ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ಬೆಳ್ಳಾರೆ ವರ್ತಕರ ಸಂಘದ ಮಾಜಿ ಅಧ್ಯಕ್ಷ ಸಾಯಿ ಗಿರಿಧರ ರೈ ದೂರವಾಣಿ ಕರೆ ಮಾಡಿದ್ದರು. ನಿರಂತರವಾಗಿ ಎದುರಾಗುತ್ತಿರುವ ವಿದ್ಯುತ್ ಸಮಸ್ಯೆ ಬಗ್ಗೆ ದೂರಿದ್ದರು. ಆಗ ಗಿರಿಧರ ರೈ ಮತ್ತು ಇಂಧನ ಸಚಿವ ಡಿ. ಕೆ. ಶಿವಕುಮಾರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರು ನೀಡಿದ್ದ ಡಿ. ಕೆ. ಶಿವಕುಮಾರ್
ಇಂಧನ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ 2016ರ ಫೆಬ್ರವರಿ 28ರಂದು ಮಾತಿನ ಚಕಮಕಿ ನಡೆದ ಕುರಿತು ಸಾಯಿ ಗಿರಿಧರ ರೈ ವಿರುದ್ಧ ಮೆಸ್ಕಾಂ ಎಂಡಿ ಹಾಗೂ ಸುಳ್ಯ ಕಚೇರಿಯ ಅಂದಿನ ಪ್ರಭಾರ ಎಇಇ ಹರೀಶ್ ನಾಯ್ಕ್ ಮೂಲಕ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಸಾಯಿ ಗಿರಿಧರ ರೈ ಬಂಧನವಾಗಿತ್ತು. ಈ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಸಾಕ್ಷಿಯಾಗಿದ್ದಾರೆ.

ಸಾಕ್ಷಿ ಹೇಳಲು ಆಗಮಿಸಿಲ್ಲ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದಲ್ಲಿ ಈಗ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಪ್ರಕರಣದ ಸಾಕ್ಷಿಯಾದ ಡಿ. ಕೆ. ಶಿವಕುಮಾರ್ಗೆ ಹಲವು ಬಾರಿ ಸಾಕ್ಷಿ ಹೇಳಲು ಆಗಮಿಸುವಂತೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಆದರೆ ಹಾಜರಾಗದ ಕಾರಣ ವಾರೆಂಟ್ ಜಾರಿಗೊಳಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಲು ಐಜಿಪಿ ಮತ್ತು ಡಿಐಜಿಗೂ ನೋಟಿಸ್ ನೀಡಲಾಗಿದೆ.

ಅವಾಚ್ಯ ಶಬ್ದಗಳ ಬಳಕೆ
2016ರ ಫೆಬ್ರವರಿ 28ರಂದು ರಾತ್ರಿ ಡಿ. ಕೆ. ಶಿವಕುಮಾರ್ಗೆ ಕರೆ ಮಾಡಿದಾಗ ಸಾಯಿ ಗಿರಿಧರ ರೈ ಮತ್ತು ಡಿ. ಕೆ. ಶಿವಕುಮಾರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಅವಾಚ್ಯ ಶಬ್ದಗಳನ್ನು ಸಹ ಬಳಕೆ ಮಾಡಲಾಗಿತ್ತು. ಅಂದು ರಾತ್ರಿಯೇ ಸುಳ್ಯ ಪೊಲೀಸರು ಬೆಳ್ಳಾರೆಗೆ ಹೋಗಿ ಸಾಯಿ ಗಿರಿಧರ ರೈ ಬಂಧಿಸಿದ್ದರು. ಸಚಿವರ ಜೊತೆಗಿನ ಮಾತುಕತೆಯ ಆಡಿಯೋ ವೈರಲ್ ಆಗಿತ್ತು. ಈ ಪ್ರಕರಣದಲ್ಲಿ ಸಾಕ್ಷಿ ಹೇಳಲು ಬರುವಂತೆ ಸುಳ್ಯ ಕೋರ್ಟ್ ಡಿ. ಕೆ. ಶಿವಕುಮಾರ್ಗೆ 3 ಬಾರಿ ಸಮನ್ಸ್ ನೀಡಿತ್ತು.

ಬಂಧಿಸಲು ಹೋದಾಗ ಹೈಡ್ರಾಮ ನಡೆದಿತ್ತು
ಸುಳ್ಯ ಪೊಲೀಸರು ಸಾಯಿ ಗಿರಿಧರ ರೈ ಬಂಧಿಸಲು ಹೋದಾಗ ಹೈಡ್ರಾಮ ನಡೆದಿತ್ತು. ತಾಯಿ, ಪತ್ನಿ, ಮಗಳ ಜೊತೆ ಇದ್ದ ಸಾಯಿ ಗಿರಿಧರ ರೈ ಪೊಲೀಸರ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮನೆಯ ಬಾಗಿಲು ತೆರೆಯಲು ನಿರಾಕರಿಸಿದ್ದರು. ಪೊಲೀಸರು ಮನೆಯ ಛಾವಣಿ ಏರಿ, ಹೆಂಚುಗಳನ್ನು ಒಡೆದು ಮನೆಯೊಳಗೆ ಹೋಗಿ ಸಾಯಿ ಗಿರಿಧರ ರೈ ಬಂಧಿಸಿದ್ದರು. ಈಗ ಪ್ರಕರಣದ ವಿಚಾರಣೆ ಕೋರ್ಟ್ ನಡೆಯುತ್ತಿದೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ












Click it and Unblock the Notifications