ಮಂಗಳೂರಿನಲ್ಲಿ ತೆಂಗಿನ ಮರದೆತ್ತರಕ್ಕೇರಿದ ಎಳನೀರು ಬೆಲೆ!
ಮಂಗಳೂರಿನಲ್ಲಿ ಆರೋಗ್ಯಕರ ಪಾನೀಯ ಎಳನೀರಿನ ಬೆಲೆ ತೆಂಗಿನ ಮರದಷ್ಟೇ ಎತ್ತರಕ್ಕೇರಿರುವುದರಿಂದ ಕೊಂಡುಕೊಳ್ಳಲು ಗ್ರಾಹಕರು ಹಿಂದೇಟು ಹಾಕುವ ಪರಿಸ್ಥಿತಿ ಎದುರಾಗಿದೆ.
ಮಂಗಳೂರು, ಎಪ್ರಿಲ್ 6: ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆ ಬಾಯಾರಿಕೆಯೂ ಜೋರಾಗುತ್ತಿದೆ. ಕರಾವಳಿಯಲ್ಲಿ ಹನ್ನೊಂದು ಘಂಟೆಯಾದರೆ ಸಾಕು, ಬಿಸಿಲ ನರ್ತನ ಶುರುವಾಗುತ್ತದೆ. ಅಬ್ಬಬ್ಬಾ...ಬಿಸಿಲಿನ ತಾಪದಿಂದ ಕಾಪಾಡು ದೇವ ಎನ್ನುವವರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಜ್ಯೂಸ್ ಸೆಂಟರ್ ಗಳ ಮಾಲೀಕರಿಗೆ ಭರ್ಜರಿ ವ್ಯಾಪಾರ.
ಆದರೆ ಆರೋಗ್ಯಕರ ಪಾನೀಯ ಎಳನೀರಿನ ಬೆಲೆ ಮಾತ್ರ ತೆಂಗಿನ ಮರದಷ್ಟೇ ಎತ್ತರಕ್ಕೇರಿರುವುದರಿಂದ ಕೊಂಡುಕೊಳ್ಳಲು ಗ್ರಾಹಕರು ಹಿಂದೇಟು ಹಾಕುವ ಪರಿಸ್ಥಿತಿ ಎದುರಾಗಿದೆ. ಕರಾವಳಿ ಪ್ರದೇಶದಲ್ಲಿ ಎಳನೀರಿಗೆ ಹೆಚ್ಚು ಬೇಡಿಕೆಯಿದ್ದು, ಈ ವರ್ಷ ಎಳನೀರಿನ ಬೆಳೆ ಕಡಿಮೆಯಿರುವುದರಿಂದ ಮಾರಾಟಗಾರರು ಗ್ರಾಹಕರಿಂದ ಬೇಕಾಬಿಟ್ಟಿ ಹಣ ಕೀಳುತ್ತಿದ್ದಾರೆ.[ಮಲ್ಟಿಪ್ಲೆಕ್ಸ್ ನಲ್ಲಿ ಎಳೆನೀರು ಮಾರಾಟಕ್ಕೆ ಬಿಜೆಪಿ ಆಗ್ರಹ]

ಚಿಕ್ಕದಾದರೆ 20 ರಿಂದ 25 ರೂಪಾಯಿ, ದೊಡ್ಡದಾದರೆ 30 ರಿಂದ 35 ರೂಪಾಯಿ! ಕೇರಳ ಹಾಗೂ ಮಂಗಳೂರಿನ ಸುತ್ತಮುತ್ತ ಹೆಚ್ಚಾಗಿ ಬೆಳೆಯುತ್ತಿದ್ದ ತೆಂಗು ಬೆಳೆ, ಇಂದು ನುಸಿಪೀಡೆ ರೋಗದಿಂದಾಗಿ ಕುಂಠಿತವಾಗಿದೆ. ಬೆಲೆ ಏರಿಕೆಗೂ ಇದೇ ಕಾರಣವೆನ್ನಲಾಗಿದೆ.
ಎಳನೀರಿನ ಬೇಡಿಕೆ ಹೆಚ್ಚಿರುವುದರಿಂದ ಈಗೀಗ ರಾಮನಗರ, ಚನ್ನಪಟ್ಟಣ, ಹಾಸನ, ಸಕಲೇಶಪುರದಿಂದ ಮಂಗಳೂರಿಗೆ ಎಳನೀರು ತರಿಸಲಾಗುತ್ತಿದೆ. ಆದರೂ ಬೇಡಿಕೆಗನುಗುಣವಾಗಿ ಎಳನೀರು ಪೂರೈಸಲು ಸಾಧ್ಯವಾಗುತ್ತಿಲ್ಲ
"ದರ ಏರಿಕೆಯಿಂದ ಎಳನೀರು ಪೂರೈಕೆಯಲ್ಲಿ ವ್ಯತ್ಯಯವುಂಟಾಗಿದೆ. ಜೊತೆಗೆ ಬಿಸಿಲಿನ ಧಗೆಯಿಂದಾಗಿ ಬೇಡಿಕೆಯೂ ಹೆಚ್ಚಿದೆ. ತಾಪಮಾನ ಹೆಚ್ಚಾದರೆ ತೆಂಗಿನ ಫಸಲು ಹಾಳಾಗುತ್ತದೆ. ಬರಗಾಲದ ಜೊತೆಗೆ ಎಳನೀರಿಗೂ ಕರಾವಳಿಯಲ್ಲಿ ' ಬರ' ಬಂದಿದೆ" ಎನ್ನುತ್ತಾರೆ ಮಂಗಳೂರು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಯೋಗೀಶ್ ಕುಮಾರ್.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications