ಬಾಳಿಗಾ ಹತ್ಯೆ ಪ್ರಕರಣ: ನರೇಶ್ ಶೆಣೈಗೆ ಸುಪ್ರೀಂನಿಂದ ನೋಟಿಸ್!
ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಪ್ರಮುಖ ಆರೋಪಿ ನರೇಶ್ ಶೆಣೈಗೆ ಮತ್ತೆ ಹಿನ್ನಡೆಯಾಗಿದೆ. ನರೇಶ್ ಶೆಣೈಗೆ ಸುಪ್ರೀಂಕೋರ್ಟಿನಿಂದ ಸೋಮವಾರ ನೋಟಿಸ್ ಜಾರಿ, ಜಾಮೀನು ಪ್ರಶ್ನಿಸಿ ಹಾಕಿದ್ದ ಅರ್ಜಿ
ನವದೆಹಲಿ, ನವೆಂಬರ್ 28: ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಪ್ರಮುಖ ಆರೋಪಿ ನರೇಶ್ ಶೆಣೈಗೆ ಮತ್ತೆ ಹಿನ್ನಡೆಯಾಗಿದೆ. ನರೇಶ್ ಶೆಣೈಗೆ ಸುಪ್ರೀಂಕೋರ್ಟಿನಿಂದ ಸೋಮವಾರ ನೋಟಿಸ್ ಜಾರಿಯಾಗಿದೆ.
ಶೆಣೈಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಬಾಳಿಗಾ ಕುಟುಂಬವು ಸುಪ್ರೀಂ ಕೋರ್ಟ್ಗೆ ಹಾಕಿದ್ದ ಅರ್ಜಿ ಹಾಕಿದ್ದರು.
ವಿನಾಯಕ್ ಬಾಳಿಗ ಅವರ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗ ಪ್ರಮುಖ ಆರೋಪಿಗೆ ಜಾಮೀನು ನೀಡಿದ್ದರಿಂದ ತನಿಖೆಗೆ ತಡೆಯಾಗುತ್ತದೆ. ತಮ್ಮ ಕುಟುಂಬಕ್ಕೂ ಅಪಾಯ ಹಾಗೂ ಸಾಕ್ಷಿ ನಾಶಕ್ಕೂ ಸಹಕಾರಿಯಾಗಲಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ. [ಶೆಣೈಗೆ ಜಾಮೀನು ನೀಡಿದ್ದೇಕೆ, ಬಾಳಿಗಾ ಕುಟುಂಬದಿಂದ ಸುಪ್ರೀಂಗೆ ಅರ್ಜಿ]

ಈ ಮಧ್ಯೆ ನಾರ್ಕೊ ಅನಾಲಿಸಿಸ್ಗೆ ಆರೋಪಿ ನರೇಶ್ ಶೆಣೈ ನಿರಾಕರಿಸಿರುವುದನ್ನು ಮಂಗಳೂರು ಸೆಷನ್ಸ್ ಕೋರ್ಟ್ ಎತ್ತಿಹಿಡಿದಿದೆ. ಈ ತೀರ್ಪಿನ ವಿರುದ್ಧವೂ ಹೈಕೋರ್ಟ್ನಲ್ಲಿ ಮನವಿ ಸಲ್ಲಿಸಲಾಗಿದೆ ಎಂದು ಹೈಕೋರ್ಟ್ನ ನ್ಯಾಯವಾದಿ ರವೀಂದ್ರ ಕಾಮತ್ ತಿಳಿಸಿದ್ದಾರೆ.
ಆರೋಪಿಗೆ ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯಾಂಶ ಹೊರಬೀಳುವ ಸಾಧ್ಯತೆ ಇದೆ. ಆದ್ದರಿಂದ ಮಂಪರು ಪರೀಕ್ಷೆಗೆ ಸಮ್ಮತಿ ನೀಡುವಂತೆ ಕೋರಿ ಬಾಳಿಗಾ ಕುಟಂಬ ಹೈಕೋರ್ಟ್ಗೆ ಮನವಿ ಸಲ್ಲಿಸಿದೆ. ತನ್ನನ್ನು ತಾನು ಅಮಾಯಕನೆಂದು ಹೇಳಿಕೊಳ್ಳುತ್ತಿರುವ ನರೇಶ್ ಶೆಣೈಗೆ ಮಂಪರು ಪರೀಕ್ಷೆಗೆ ಒಳಪಡಲು ಆತಂಕ ಯಾಕೆ ಎಂದು ವಿಚಾರವಾದಿ ಸಂಘದ ಅಧ್ಯಕ್ಷ ನರೇಂದ್ರ ನಾಯಕ್ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications