'ಮುಂದಿನ ತಿಂಗಳ ಒಳಗೆ ಸುರತ್ಕಲ್ ನಲ್ಲಿ ಆರ್ ಟಿಓ ಕಚೇರಿ ಆರಂಭ'
ಮಂಗಳೂರು, ಫೆಬ್ರವರಿ. 17 : ಒಂದು ತಿಂಗಳ ಒಳಗೆ ಸುರತ್ಕಲ್ ನಲ್ಲಿ ಆರ್ ಟಿಓ ಕಚೇರಿ ಆರಂಭವಾಗಲಿದೆ ಎಂದು ಮಂಗಳೂರು ಉತ್ತರ ವಿಧಾನ ಕ್ಷೇತ್ರದ ಶಾಸಕ ಮೋಯ್ದೀನ್ ಬಾವ ತಿಳಿಸಿದ್ದಾರೆ.
ಕಳೆದ ವರ್ಷ ಬಜೆಟ್ ನಲ್ಲಿ ರಾಜ್ಯದಲ್ಲಿ ಹೊಸ ಆರ್ ಟಿಓ ಕಚೇರಿ ನಿರ್ಮಿಸಲು ಪ್ರಸ್ತಾಪಿಸಲಾಗಿತ್ತು. ಅದರಂತೆ ಆರ್ ಟಿಓ ಕಚೇರಿ ಸಿಬ್ಬಂದಿ ಕೊರತೆಯಿಂದ ಆರಂಭವಾಗಿರಲಿಲ್ಲ.
ಆ ಪ್ರಕಾರ ಮುಂದಿನ ಒಂದು ತಿಂಗಳಲ್ಲಿ ಪೂರ್ಣ ಪ್ರಮಾಣದ ಸಾರಿಗೆ ಅಧಿಕಾರಿ ಕಚೇರಿ ಆರಂಭವಾಗಲಿದ್ದು ನೀಲ್ ಗಿರೀಸ್ ಬಳಿ ಕಚೇರಿಗೆ ಸ್ಥಳ ಗುರುತಿಸಲಾಗಿದೆ ಎಂದು ಹೇಳಿದರು.

ಜಂಟಿ ಆಯುಕ್ತರು ಸೇರಿದಂತೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಒಂದೆರಡು ದಿನಗಳಲ್ಲಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಿದ್ದಾರೆ. ಅನುಮೋದನೆ ಪಡೆದ ಬಳಿಕ ಸಿಬ್ಬಂದಿ ನೇಮಕ ನಡೆಯಲಿದೆ ಎಂದರು.
ಸುರತ್ಕಲ್ ಆರ್ ಟಿಓಗೆ ಕೆಎ 62 ಎಂದು ವಾಹನ ನೋಂದಣಿ ಸಂಖ್ಯೆ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ. ಹೊಸ ಕಚೇರಿ ಆಗುತ್ತಿರುವುದರಿಂದಾಗಿ ಮಂಗಳೂರು ಆರ್ ಟಿಓ ಕಚೇರಿ ಒತ್ತಡ ಕಡಿಮೆ ಆಗಲಿದೆ.
ಇದೀಗ ಸುರತ್ಕಲ್, ಮುಲ್ಕಿ, ಮೂಡಬಿದಿರೆಯಲ್ಲಿ ನಡೆಯುತ್ತಿದ್ದ ವಾಹನ ನೋಂದಣಿ, ಲೈಸೆನ್ಸ್ ನೀಡಿಕೆ ಕೆಲಸ ಇನ್ನು ಮುಂದೆ ಆರ್ ಟಿಓ ಕಚೇರಿಯಲ್ಲೇ ನಡೆಯಲಿದೆ ಎಂದರು.
ಮುಂಬರುವ ದಿನಗಳಲ್ಲಿ ಬಂಟ್ವಾಳದಲ್ಲಿ ಸಹಾಯಕ ಸಾರಿಗೆ ಅಧಿಕಾರಿ ಕಚೇರಿ ತೆರೆಯುವ ಪ್ರಸ್ತಾಪವಿದೆ ಎಂದು ಶಿವಮೊಗ್ಗ ಜಂಟಿ ಸಾರಿಗೆ ಆಯುಕ್ತ ಶಿವರಾಜ್ ಪಾಟೀಲ್ ಹೇಳಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications