ಸುರತ್ಕಲ್: 'ತುಳುವ ನಡಕೆ'ಯಲ್ಲಿ ಬಂಟರ ಸಂಘ ಪ್ರಥಮ
ಸುರತ್ಕಲ್, ನ.4 : ಬಂಟರ ಯಾನೆ ನಾಡವರ ಸಂಘ ಪಡುಬಿದ್ರೆ ಅವರ ಆಶ್ರಯದಲ್ಲಿ ಪಡುಬಿದ್ರೆ ಬಂಟರ ಭವನದಲ್ಲಿ ನಡೆದ ರಾಷ್ಟ್ರಮಟ್ಟದ 'ತುಳುವ ನಡಕೆ' ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘ ಪ್ರಥಮ ಬಹುಮಾನ ಪಡೆದುಕೊಂಡಿದೆ.
ತುಳುವ ನಡಕೆಯಲ್ಲಿ ತುಳುನಾಡಿನ ಆಚಾರ ವಿಚಾರ, ಸಂಸ್ಕೃತಿ ಮತ್ತು ಭಾವೈಕ್ಯ ಪ್ರದರ್ಶಿಸುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಸುರತ್ಕಲ್ ಸಂಘ ಪಾತ್ರವಾಯಿತು.
ತುಳುವ ನಡಕೆಯಲ್ಲಿ ಪರಶುರಾಮ ಸೃಷ್ಟಿ , ನಾಗಾರಾಧನೆ, ಜನಜೀವನ, ಕೃಷಿ ಚಟುವಟಿಕೆ. ತುಳುನಾಡ ಸಂಸ್ಕೃತಿ, ಸೀಮಂತ ಆಚರಣೆ, ಯಕ್ಷಗಾನ, ದೈವಾರಾಧನೆ, ತುಳು ನಾಡಿನ ವೀರ ಪುರುಷರು, ಉತ್ತರಕ್ರಿಯೆ ಮೊದಲಾದ ವಿಚಾರಗಳನ್ನು ಅಳವಡಿಸಲಾಗಿತ್ತು. ತೆನೆ ಕಟ್ಟುವುದು, ಬಲೀಂದ್ರ ಪೂಜೆ, ತುಡರ್, ಗೋಪೂಜೆ, ಕೊಜಂಬು ಮುಂತಾದ ಆಚರಣೆಗಳ ಪದ್ಧತಿ ಪ್ರಚುರಪಡಿಸಲಾಯಿತು.[ಮಂಗಳೂರುː ಬೆಳಕಿನ ಹಬ್ಬಕ್ಕೆ ಆಕಾಶಬುಟ್ಟಿ ರಂಗು]
ನವೀನ್ ಶೆಟ್ಟಿ ಅಳಕೆಯವರ ಸಾಹಿತ್ಯ, ಮತ್ತು ನಿರ್ದೇಶನದಲ್ಲಿ ಮೂಡಿ ಬಂದ 'ತುಳುವ ನಡಕೆ'ಯಲ್ಲಿ ಸುಮಾರು 102 ಮಂದಿ ಕಲಾವಿದರು ಬಣ್ಣ ಹಚ್ಚಿದ್ದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್ ಆರ್.ಶೆಟ್ಟಿ, ಉಪಾಧ್ಯಕ್ಷ ಸುಧಾಕರ ಪೂಂಜ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಲೀಲಾಧರ ಶೆಟ್ಟಿ ನೇತೃತ್ವ ವಹಿಸಿದ್ದರು.
ಸಂಗೀತ ನಿರ್ದೇಶಕ ಗುರುಕಿರಣ್, ನಟ ಪ್ರಜ್ವಲ್ ದೇವರಾಜ್, ಸುರೇಶ್ ಶೆಟ್ಟಿ ಬಳ್ಳಾರಿ, ಡಾ.ಆಶಾ ಜ್ಯೋತಿ ರೈ, ಎರ್ಮಾಳ್ ಚಂದ್ರಹಾಸ ಶೆಟ್ಟಿ ಪುಣೆ, ವಿಜಯಕುಮಾರ್ ಕೊಡಿಯಾಲ್ ಬೈಲ್, ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಉದ್ಯಮಿ ಪ್ರಕಾಶ್ ಶೆಟ್ಟಿ, ಅಶೋಕ್ ಆಳ್ವ, ನಾರಾಯಣ ಶೆಟ್ಟಿ ನಂದಳಿಕೆ, ದಿನೇಶ್ ಅತ್ತಾವರ್, ಡಾ.ವೈ.ಎನ್.ಶೆಟ್ಟಿ ನವೀನ್ ಶೆಟ್ಟಿ ಎಡ್ಮೆಮಾರ್ ಉಪಸ್ಥಿತರಿದ್ದರು, ಗುರುಪುರ ಬಂಟರ ಸಂಘ ದ್ವಿತೀಯ, ಉಳ್ಳಾಲ ಬಂಟರ ಸಂಘ ತೃತೀಯ ಪ್ರಶಸ್ತಿ ಪಡೆಯಿತು.

ರೈತರ ಜೀವನ ರಂಗದ ಮೇಲೆ
'ತುಳುವ ನಡಕೆ' ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದವರು ರೈತರ ಜೀವನವನ್ನು ತೆರೆ ಮೇಲೆ ತಂದರು.

ಸೀಮಂತದ ನೈಜ ಚಿತ್ರಣ
ಗ್ರಾಮೀಣ ಸಂಪ್ರದಾಯ ಸಾರುವ ಸೀಮಂತ ಪ್ರದರ್ಶನವಾದ ಬಗೆ.

ವಿಜೇತರಿಗೆ ಪ್ರಶಸ್ತಿ
ಸ್ಪರ್ಧೆಯಲ್ಲಿ ವಿಜೇತರಾದ ಸುರತ್ಕಲ್ ಸಂಘದ ಸದಸ್ಯರೊಂದಿಗೆ ಗಣ್ಯರು.

ಗ್ರಾಮೀಣ ಪರಂಪರೆ
ಗ್ರಾಮೀಣ ಹಬ್ಬಗಳನ್ನು ಸಾರುವ ಪ್ರದರ್ಶನ ಗಮನ ಸೆಳೆಯಿತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications