ಸುರತ್ಕಲ್ ಎನ್ಐಟಿಕೆ ಟೋಲ್ತೆರವು ಆಗಬೇಕು: ಇಲ್ಲದಿದ್ದರೆ ಅ. 18ರಂದು ಧ್ವಂಸದ ಎಚ್ಚರಿಕೆ
ಮಂಗಳೂರು, ಸೆಪ್ಟೆಂಬರ್, 13: ಮಂಗಳೂರು ನಗರ ಹೊರವಲಯದ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ಗಡುವಿನೊಳಗೆ ತೆರವು ಆಗಬೇಕು. ಒಂದು ವೇಳೆ ತೆರವು ಆಗದಿದ್ದರೆ ಅಕ್ಟೋಬರ್ 18ರಂದು ನಾಗರಿಕರೇ ಟೋಲ್ ಒಡೆಯುತ್ತಾರೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಎಚ್ಚರಿಕೆಯನ್ನು ನೀಡಿದೆ.
ಮಂಗಳೂರು ನಗರದ ಸುರತ್ಕಲ್ ಎನ್ಐಟಿಕೆಯ ಅಕ್ರಮ ಟೋಲ್ಗೇಟ್ ತೆರವು ದಿನಾಂಕವನ್ನು ಘೋಷಿಸಲು ಒತ್ತಾಯಿಸುವಂತೆ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯು ಧರಣಿ ನಡೆಸಿದೆ. ಸುರತ್ಕಲ್ ಎನ್ಐಟಿಕೆ ಟೋಲ್ ತೆರವು ಮಾಡುವ ಅಂತಿಮ ದಿನಾಂಕವನ್ನು ಪ್ರಕಟಣೆ ಮಾಡಿ ಎಂಬುದು ಈ ಧರಣಿಯ ಬೇಡಿಕೆ ಆಗಿದೆ. ದೀಪಾವಳಿ ಹಾಗೂ ದಸರಾ ಹಬ್ಬವನ್ನು ಗಮನಿಸಿ ಅಕ್ಟೋಬರ್ 18ರ ಒಳಗೆ ಈ ಟೋಲ್ ಗೇಟ್ ಮುಚ್ಚದಿದ್ದರೆ, ಟೋಲ್ಗೇಟ್ ವಿರೋಧಿ ಸಮಿತಿ, ಸಮನ ಮನಸ್ಕ ನಾಗರಿಕರು ಸೇರಿ ಮುತ್ತಿಗೆ ಹಾಕಿ ಜನರೇ ತೆರವು ಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಹಾಗೂ ಜನರೇ ಸ್ವಯಂ ಪ್ರೇರಿತರಾಗಿ ಟೋಲ್ ಒಡೆದು ಜೈಲ್ ಭರೋ ಆಗೋವುದಾಗಿ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಸಂಜೆ 5 ಗಂಟೆಯವರೆಗೆ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಲಿಂಗೇಗೌಡ ಭೇಟಿ ನೀಡಿದ್ದರು. ಈ ವೇಳೆ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯ ಮನವಿಯನ್ನು ಸ್ವೀಕರಿಸಿದ್ದಾರೆ. ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಲಿಂಗೇಗೌಡ ಮಾತನಾಡಿ, ಟೋಲ್ ಗೇಟ್ನ ತೆರವಿನ ಬಗ್ಗೆ ಪೇಪರ್ ವರ್ಕ್ ನಡೆಯುತ್ತಿದೆ. 20 ದಿನಗಳಿಂದ ಗರಿಷ್ಠ ಒಂದು ತಿಂಗಳೊಳಗೆ ಸುರತ್ಕಲ್ ಟೋಲ್ ತೆರವು ಆಗಲಿದೆ ಎಂದು ಭರವಸೆ ನೀಡಿದ್ದರು. ಆದರೆ ತೆರವು ಮಾಡುವ ನಿರ್ದಿಷ್ಟ ದಿನಾಂಕವನ್ನು ಘೋಷಣೆ ಮಾಡಿಲ್ಲ ಎಂದರು.

ನಂತರ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ ಮಾತನಾಡಿ, ಟೋಲ್ಗೇಟ್ ತೆರವಿನ ನಿರ್ದಿಷ್ಟ ದಿನಾಂಕವನ್ನು ಪ್ರಕಟಿಸಲು ಹೆದ್ದಾರಿ ಪ್ರಾಧಿಕಾರ ಸಿದ್ಧವಿಲ್ಲ. ಆದರೆ ತಿಂಗಳೊಳಗೆ ಟೋಲ್ ಗೇಟ್ ಅನ್ನು ತೆರವುಗೊಳಿಸುತ್ತಾರೆ ಎನ್ನುವ ಭರವಸೆ ನೀಡುತ್ತಿದ್ದೀರಿ. ಆದರೆ ನಾವೂ ಯಾವ ಭರವಸೆಯನ್ನು ನಂಬುವುದಿಲ್ಲ. ಆದ್ದರಿಂದ ಗಡುವಿನೊಳಗೆ ಟೋಲ್ ತೆರವು ಆಗದಿದ್ದಲ್ಲಿ ಅಕ್ಟೋಬರ್ 18 ರಂದು ನೂರಾರು ಸಂಘಟನೆಗಳ ಸಾವಿರಾರು ಜನರು ಅಕ್ರಮ ಟೋಲ್ ಗೇಟ್ ತೆರವು ಮಾಡಿಸಿಯೇ ತೀರುತ್ತಾರೆ ಎಂದು ಎಚ್ಚರಿಕೆ ನೀಡಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications