ಮಂಗಳೂರು-ಬೆಂಗಳೂರು ಕುಡ್ಲ ಎಕ್ಸ್ಪ್ರೆಸ್ ರೈಲಿಗೆ ಚಾಲನೆ
ಮಂಗಳೂರು, ಏಪ್ರಿಲ್ 09 : ಬಹುನಿರೀಕ್ಷಿತ ಮಂಗಳೂರು-ಬೆಂಗಳೂರು ಹಗಲು 'ಕುಡ್ಲ ಎಕ್ಸ್ಪ್ರೆಸ್' ರೈಲು ಓಡಾಟಕ್ಕೆ ಭಾನುವಾರ (ಏಪ್ರಿಲ್ 9) ಕೇಂದ್ರ ರೈಲ್ವೆ ಸಚಿವ ಸುರೇಶ ಪ್ರಭು ಅವರು ಗೋವಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಅಂಕಿ-ಅಂಶ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಜೆ.ಆರ್.ಲೋಬೊ, ವಿಪಕ್ಷ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮೇಯರ್ ಕವಿತಾ ಸನಿಲ್ ಮತ್ತಿತರರು ಉಪಸ್ಥಿತರಿದ್ದರು.
ಉದ್ಘಾಟನೆಯ ಬಳಿಕ ಬೆಳಗ್ಗೆ 11 ಗಂಟೆಗೆ ಪ್ರಥಮ ರೈಲು ಮಂಗಳೂರು ಜಂಕ್ಷನ್ನಿಂದ ಸಂಚಾರ ಆರಂಭಿಸಿತು.

ವಾರಕ್ಕೆ ಮೂರು ದಿನ ಓಡಾಟ
ಮಂಗಳೂರು ಜಂಕ್ಷನ್ನಿಂದ ಬೆಂಗಳೂರಿನ ಯಶವಂತಪುರ ನಡುವೆ ಈ ನೂತನ ರೈಲು ಸಂಚರಿಸಲಿದೆ. ರೈಲುಗಾಡಿ ಸಂಖ್ಯೆ 16576 ಮತ್ತು 16575 ವಾರಕ್ಕೆ ಮೂರು ದಿನ ಓಡಾಟ ನಡೆಸಲಿದೆ.

ರೈಲು ಸಂಖ್ಯೆ. 16576 ಸಂಚಾರ
ರೈಲು ನಂ. 16576 ಮಂಗಳೂರು ಜಂಕ್ಷನ್ನಿಂದ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಪೂರ್ವಾಹ್ನ 11:30ಕ್ಕೆ ಹೊರಟು ರಾತ್ರಿ 8:30ಕ್ಕೆ ಯಶವಂತಪುರ ತಲುಪಲಿದೆ.

ರೈಲು ಸಂಖ್ಯೆ 16575 ಸಂಚಾರ
ರೈಲು ನಂ. 16575 ಯಶವಂತಪುರದಿಂದ ಪ್ರತೀ ಭಾನುವಾರ, ಮಂಗಳವಾರ ಹಾಗೂ ಗುರುವಾರ ಸಂಚರಿಸಲಿದೆ. ಯಶವಂತಪುರದಿಂದ ಬೆಳಗ್ಗೆ 7:50ಕ್ಕೆ ಹೊರಟು ಸಂಜೆ 5:30ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಪಣಂಬೂರು-ಜೋಕಟ್ಟೆ3.5 ಕಿ.ಮೀ. ಜೋಡಿ ಹಳಿ
ಇನ್ನು ಇದೇ ಸಂದರ್ಭದಲ್ಲಿ ಮಂಗಳೂರು ಜಂಕ್ಷನ್, ಮಂಗಳೂರು ಸೆಂಟ್ರಲ್ ಹಾಗೂ ಚೆರ್ವತ್ತೂರು ರೈಲು ನಿಲ್ದಾಣಗಳ ನಡುವಿನ 82 ಕಿ.ಮೀ. ರೈಲ್ವೆ ವಿದ್ಯುದ್ದೀಕರಣ ಮತ್ತು ಪಣಂಬೂರು-ಜೋಕಟ್ಟೆ ನಡುವಿನ 3.5 ಕಿ.ಮೀ. ಜೋಡಿ ಹಳಿಯನ್ನು ರೈಲ್ವೆ ಸಚಿವ ಸುರೇಶ್ ಪ್ರಭು ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಿದರು.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications