ಮಂಗಳೂರಲ್ಲಿ ಪ್ರತಿವರ್ಷ ಸರ್ಫಿಂಗ್ ಸ್ಪರ್ಧೆ ಆಯೋಜನೆ
ಮಂಗಳೂರು, ಮೇ 31 : ಮಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆದ ಮೊಟ್ಟಮೊದಲ 'ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ' ಯಶಸ್ವಿಯಾಗಿದೆ. ಮುಂದಿನ ವರ್ಷದಿಂದ ನಗರದಲ್ಲಿ ಪ್ರತಿ ವರ್ಷ ಸರ್ಫಿಂಗ್ ಸ್ಪರ್ಧೆ ಆಯೋಜಿಸಲು ನಿರ್ಧರಿಸಲಾಗದೆ.
ಮೇ 27ರಿಂದ ಮೂರು ದಿನಗಳ ಕಾಲ ಸಸಿಹಿತ್ಲು ಬೀಚ್ನಲ್ಲಿ ನಡೆದ ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಬೀಚ್ ಅನ್ನು ಅಭಿವೃದ್ಧಿಪಡಿಸಿ ಪ್ರತಿ ವರ್ಷ ಸರ್ಫಿಂಗ್ ಸ್ಪರ್ಧೆ ನಡೆಸಲು ಚಿಂತನೆ ನಡೆಸಲಾಗಿದೆ. 2017ರ ಮಾರ್ಚ್ 27ರಿಂದ ಮೂರು ದಿನ ಸ್ಪರ್ಧೆ ನಡೆಸಲು ತೀರ್ಮಾನಿಸಲಾಗಿದೆ. [ಕರಾವಳಿಯ ಬೀಜ್ ಗಳ ಅಭಿವೃದ್ಧಿಗೆ 92 ಕೋಟಿ ಯೋಜನೆ]

ಕ್ರೀಡಾ ಇಲಾಖೆಯಿಂದ ಅನುದಾನ : 'ಸಸಿಹಿತ್ಲು ಬೀಚ್ನಲ್ಲಿ ಸಾಹಸ ಕ್ರೀಡಾಚಟುವಟಿಕೆ ಅಭಿವೃದ್ಧಿಗೆ ಪ್ರವಾಸೋದ್ಯಮ ಮತ್ತು ಕ್ರೀಡಾ ಇಲಾಖೆಯಿಂದ 1 ಕೋಟಿ ರೂ. ಅನುದಾನ ನೀಡಲಾಗುತ್ತದೆ' ಎಂದು ಯುವಜನಸೇವೆ, ಕ್ರೀಡೆ ಹಾಗೂ ಮೀನುಗಾರಿಕಾ ಸಚಿವ ಅಭಯ ಚಂದ್ರ ಜೈನ್ ಭರವಸೆ ನೀಡಿದ್ದಾರೆ. [ವಾರಾಂತ್ಯಕ್ಕೆ ಕರ್ನಾಟಕ ಹಬ್ಬವೇ ಅತ್ಯುತ್ತಮ ಆಯ್ಕೆ..ಯಾಕಂದ್ರೆ?]
'ಬೀಚ್ನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ, ಸಸಿಹಿತ್ಲು ಪ್ರದೇಶದ ಮುಖ್ಯ ರಸ್ತೆ ಬದಿಯಲ್ಲಿ ಹೈ ಮಾಸ್ಟ್ ದೀಪಗಳ ಅಳವಡಿಕೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ' ಎಂದು ಅಭಯಚಂದ್ರ ಜೈನ್ ಹೇಳಿದ್ದಾರೆ.
ಸ್ಪರ್ಧೆಯ ದಿನಾಂಕ ಘೋಷಣೆ : '2017ರ ಮಾರ್ಚ್ 27, 28 ಮತ್ತು 29ರಂದು ಸಹಿಹಿತ್ಲು ಬೀಚ್ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಉತ್ಸವ ನಡೆಸಲಾಗುತ್ತದೆ. ಸಸಿಹಿತ್ಲು ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವ ಬೀಚ್. ಅದನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಲು ಸ್ಥಳೀಯರ ಸಹಕಾರ ಅಗತ್ಯ' ಎಂದು ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications