ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2009ರ ಮಂಗಳೂರು ಪಬ್ ದಾಳಿ ಪ್ರಕರಣ: 25 ಆರೋಪಿಗಳು ಖುಲಾಸೆ

By ಕಿರಣ್ ಸಿರ್ಸೀಕರ್
|
Google Oneindia Kannada News

ಮಂಗಳೂರು, ಮಾರ್ಚ್ 12: ಅದು ಜನವರಿ 24, 2009. ಮಂಗಳೂರಿನ ಜನ ನಿಬಿಡ ಬಲ್ಮಠ ರಸ್ತೆಯಲ್ಲಿರುವ 'ಅಮ್ನೇಸಿಯಾ - ದಿ ಲಾಂಜೆ' ಪಬ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ಮುಗಿಬಿದ್ದಿದ್ದರು.

ಪಬ್ ನಲ್ಲಿ ಮೋಜು ಮಸ್ತಿಯಲ್ಲಿದ್ದ ಯುವಕ ಯುವತಿಯರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದರು. ಈ ನೈತಿಕ ಪೊಲೀಸ್ ಗಿರಿ ಪ್ರಕರಣ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಮಂಗಳೂರಿನ ಮಾನವನ್ನು ಹರಾಜು ಹಾಕಿತ್ತು.

ಮಂಗಳೂರು ದಾಳಿಗೆ ಬಿಜೆಪಿ ಖಂಡನೆ

ರಾಜ್ಯದಲ್ಲಂತೂ ಹಲವು ತಿಂಗಳುಗಳ ಕಾಲ ಬಿಸಿ ಬಿಸಿ ಚರ್ಚೆಯನ್ನೇ ಹುಟ್ಟುಹಾಕಿದ್ದ ಈ ಪ್ರಕರಣಕ್ಕೀಗ ಕೊನೆಗೂ ಇತಿಶ್ರೀ ಹಾಡಲಾಗಿದೆ. ಪ್ರಕರಣದ ಪ್ರಮುಖ 26 ಆರೋಪಿಗಳಿಗೆ ಖುಲಾಸೆ ನೀಡಿ ನ್ಯಾಯಾಲಯ ಇಂದು ತೀರ್ಪು ನೀಡಿದೆ.

Survey: 2009 Mangaluru pub attack case: 26 accused acquitted

ಹಲವು ವರ್ಷಗಳ ಕಾಲ ನಡೆದ ಸುದೀರ್ಘ ವಾದ ಪ್ರತಿವಾದ ವಿಚಾರಣೆಗಳ ನಂತರ,
ದಕ್ಷಿಣ ಕನ್ನಡ 3ನೇ ಜಿಲ್ಲಾ ಸೆಷನ್ಸ್ ಕೋರ್ಟ್ ಈ ತೀರ್ಪು ನೀಡಿದೆ.

ಸಾಕ್ಷ್ಯಾಧಾರ ಕೊರತೆಯಿಂದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಪ್ರಸಾದ್ ಅತ್ತಾವರ, ಸುಭಾಸ್ ಪಡೀಲ್, ದಿನಕರ ಶೆಟ್ಟಿ ಸೇರಿ 25 ಮಂದಿ ಆರೋಪಿಗಳನ್ನು ನ್ಯಾಯಾಲಯ ಪ್ರಕರಣದಲ್ಲಿ ಖುಲಾಸೆಗೊಳಿಸಿದೆ

English summary
The Dakshina Kannada District Sessions Court has ruled that 26 accused in the 2009 Mangalore Pub attack case were acquitted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X