ಕರ್ನಾಟಕ ಕರಾವಳಿಯಲ್ಲಿ ಶಂಕಿತ ಉಗ್ರ; ಪೊಲೀಸರಿಂದ ರೇಖಾಚಿತ್ರ ಬಿಡುಗಡೆ
ಮಂಗಳೂರು, ಅಗಸ್ಟ್ 25: ಕರಾವಳಿಯಾದ್ಯಂತ ಮತ್ತೆ ಹೈ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡು ಮೂಲಕ ಒಳ ನುಸುಳಿರುವ 6 ಮಂದಿ ಉಗ್ರರು ಕರಾವಳಿಯ ಪ್ರಮುಖ ಸ್ಥಳಗಳನ್ನು ಗುರಿ ಮಾಡಿಕೊಂಡು, ದಾಳಿ ನಡೆಸುವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ವಲ್ಡ್ ಹೆಲ್ತ್ ಆರ್ಗನೈಝೇಷನ್ ಡೈರೆಕ್ಟರ್ ಎಂದು ತಿರುಗುತ್ತಿದ್ದ ಆ ಶಂಕಿತ ಕಾಶ್ಮೀರಿ ಯಾರು?
ಶ್ರೀಲಂಕಾದ 5 ಹಾಗೂ ಒಬ್ಬ ಪಾಕಿಸ್ತಾನಿ ಉಗ್ರ ಸೇರಿ ಒಟ್ಟು 6 ಮಂದಿ ಉಗ್ರರು ತಮಿಳುನಾಡಿನ ಮೂಲಕ ಒಳನುಸುಳಿದ್ದಾರೆ ಎಂಬ ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿ ಹಿನ್ನೆಲೆಯಲ್ಲಿ ತಮಿಳುನಾಡು ಹಾಗೂ ಕೇರಳ ಕರಾವಳಿ ತೀರದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಈ ನಡುವೆ ಪಾಕಿಸ್ತಾನದ ಉಗ್ರನೊಬ್ಬ ಕರ್ನಾಟಕದ ಕರಾವಳಿಗೆ ಬಂದಿರುವ ಶಂಕೆ ಇದೆ ಎಂಬ ಮಾಹಿತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಕಾವಲುಪಡೆಯನ್ನು ಹೈ ಅಲರ್ಟ್ ನಲ್ಲಿ ಇಡಲಾಗಿದೆ. ಕರಾವಳಿ ಕಾವಲು ಪೊಲೀಸ್ ಪೊಲೀಸರು ಮೀನುಗಾರರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಯು ಪ್ರಕಟಣೆ ಹೊರಡಿಸಿದೆ. ಪ್ರಕಟಣೆಯಲ್ಲಿ ಶಂಕಿತ ಉಗ್ರನ ಚಹರೆ ಕೂಡ ನೀಡಲಾಗಿದೆ.
ಈ ವ್ಯಕ್ತಿಯನ್ನು ಕಂಡರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ. ಅಲ್ಲದೆ ಸಮುದ್ರ ತೀರದಲ್ಲಿ ಪೊಲೀಸ್ ಭದ್ರತೆ ಕೂಡ ಹೆಚ್ಚಿಸಲಾಗಿದೆ. ಇವರು ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇರುವುದರಿಂದ ಕಡಲ ತೀರದಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ.