ಪುತ್ತೂರು: ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟ ಕಾರು ಅಪಘಾತ
ಮಂಗಳೂರು, ಜುಲೈ 31 : ಪುತ್ತೂರು ತಾಲೂಕಿನ ವಿಟ್ಲಾ ಸಮೀಪ ದೆಹಲಿ ನೋಂದಾಣಿ ಕಾರೊಂದು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಕಳೆದ ತಡರಾತ್ರಿ ವಿಟ್ಲ ವೀರಕಂಬ -ಮಜ್ಜೋಣಿ -ಕೋಡಪದವು ಒಳ ರಸ್ತೆಯಲ್ಲಿ ಈ ಅಫಘಾತ ಸಂಭವಿಸಿದೆ. ಕಾರು ಅಪಘಾತಕ್ಕೀಡಾಗುತ್ತಿದ್ದಂತೆಯೇ ಕಾರಿನಲ್ಲಿದ್ದವರು ಕಾರನ್ನು ಬಿಟ್ಟು ಪರಾರಿಯಾಗಿದ್ದು, ಇದೀಗ ಈ ಘಟನೆ ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ
ಕಾರು ದೆಹಲಿಯಲ್ಲಿ ನೋಂದಾಣಿಯಾಗಿದ್ದು, ಜಸ್ ಜೀತ್ ಸಿಂಗ್ ಎಂಬವರಿಗೆ ಸೇರಿದ್ದಾಗಿದೆ. ಆದರೆ, ದೆಹಲಿ ಮೂಲದ ಕಾರು ವಿಟ್ಲದಲ್ಲಿ ಸಂಚರಿಸುತ್ತಿದ್ದುದು ಯಾಕೆ ? ಕಾರಿನಲ್ಲಿದ್ದವರು ಯಾರು ? ಎಂಬ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಕೇರಳ ರಾಜ್ಯದ ಗಡಿಭಾಗವಾದ ವಿಟ್ಲ ಪರಿಸರದಲ್ಲಿ ಸಮಾಜ ಘಾತಕ ಚಟುವಟಿಕೆಗಳನ್ನು ನಡೆಸಲು ಯೋಜನೆ ರೂಪಿಸಲಾಗಿತ್ತೇ ಎಂಬ ಸಂಶಯವನ್ನು ಹುಟ್ಟು ಹಾಕಿದೆ.
ಈ ನಿಟ್ಟಿನಲ್ಲಿ ಸ್ಥಳೀಯ ಪೋಲಿಸರು, ಗುಪ್ತಚಾರ ಇಲಾಖೆ ತನಿಖೆ ಆರಂಭಿಸಿದ್ದಾರೆ. ಕಾರಿನ ಅಸಲಿ ವಾರಸುದಾರನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.