ರಾತ್ರಿ ಕರ್ಫ್ಯೂ ವೇಳೆ ಮಂಗಳೂರಿನಲ್ಲಿ ಸಿಕ್ಕಿಬಿದ್ದ ದರೋಡೆಕೋರರು
ಮಂಗಳೂರು, ಏಪ್ರಿಲ್ 12: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಕೆಲವು ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ವೇಳೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇನ್ನೋವಾ ಕಾರನ್ನು ನಿಲ್ಲಿಸಿದ ಪೊಲೀಸರು, ಕುಖ್ಯಾತ ದರೋಡೆಕೋರ ತಂಡವನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಏಪ್ರಿಲ್ 12ರ ಮುಂಜಾನೆ 2.30ರ ವೇಳೆಗೆ ಮಂಗಳೂರು ನಗರ ಹೊರವಲಯದ ಉಲಾಯಿಬೆಟ್ಟು ಪ್ರದೇಶದ ಪರಾರಿ ಎಂಬಲ್ಲಿ ಎಂಟು ಮಂದಿ ಡಕಾಯಿತರನ್ನು ಒಳಗೊಂಡ ಇನ್ನೋವಾ ಕಾರು ತಿರುಗಾಡುತ್ತಿದ್ದ ವೇಳೆ, ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಪಾತಕಿಗಳನ್ನು ಹೆಡೆಮುರಿ ಕಟ್ಟಿ ಬಂಧಿಸಿದ್ದಾರೆ.
ವಿದೇಶದಲ್ಲಿರುವ ಇಬ್ಬರು ರೌಡಿಗಳು ಸೇರಿ ಮಂಗಳೂರಿನಲ್ಲಿ ಒಂದು ಗ್ಯಾಂಗ್ ಅನ್ನು ರಚನೆ ಮಾಡಿದ್ದು, ಈ ಗ್ಯಾಂಗ್ ಹೆದ್ದಾರಿ ದರೋಡೆ, ಮನೆ ದರೋಡೆ, ಕೊಲೆ, ಸುಲಿಗೆಗಳನ್ನು ಮಾಡುತ್ತಿತ್ತು ಎನ್ನಲಾಗಿದೆ. ವಿದೇಶದಲ್ಲಿರುವ ರೌಡಿ ಬಾತೀಶ್ ಮತ್ತು ತೌಸಿರ್ ಎಂಬಾತರು ಈ ಕ್ರಿಮಿನಲ್ ಗ್ಯಾಂಗ್ ಅನ್ನು ಸಾಕುತ್ತಿದ್ದು, ದರೋಡೆ ಟಾರ್ಗೆಟ್ ಗಳನ್ನು ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ಈ ಆರೋಪಿಗಳು TB ಗ್ಯಾಂಗ್ ಎಂಬ ವಾಟ್ಸಪ್ ಗುಂಪನ್ನು ರಚಿಸಿದ್ದು, ದರೋಡೆಯ ಪ್ಲಾನ್ ಗಳನ್ನು ಹಂಚುತ್ತಿದ್ದರು. ಹಣಕಾಸಿನ ಸೆಟ್ಲ್ಮೆಂಟ್ ವಿಚಾರವನ್ನೂ ಈ ಗ್ಯಾಂಗ್ ನೋಡುತ್ತಿತ್ತು. ಇದೇ ರೀತಿ ಬೆಂಗಳೂರಿಗೆ ಹಣದ ಸೆಟ್ಲ್ಮೆಂಟ್ ಮಾಡಲು ತೆರಳಿದ್ದ ಈ ಗ್ಯಾಂಗ್ ಮರಳಿ ಮಂಗಳೂರಿಗೆ ಬಂದಾಗ ಪೋಲಿಸರ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರಿನಲ್ಲಿದ್ದ ಝೀಯದ್ ಎಂಬಾತನಿಂದ ಹಣದ ವಸೂಲಿಗೆ ತೆರಳಿದ್ದ ಗ್ಯಾಂಗ್, ಝೀಯದ್ ಸಿಗದೆ ಬರೀ ಕೈಲಿ ಮಂಗಳೂರಿಗೆ ವಾಪಾಸಾಗುತ್ತಿದ್ದರು. ಹೋದ ಕೆಲಸ ಆಗದ ಹಿನ್ನಲೆ ಹೆದ್ದಾರಿ ದರೋಡೆ ಮಾಡುವ ಪ್ಲಾನ್ ಮಾಡಿದ್ದರು.

ವಾಹನಗಳ ಸಂಚಾರ ವಿರಳವಿರುವ ಸಂದರ್ಭದಲ್ಲಿ ಗೂಡ್ಸ್ ಲಾರಿಗಳನ್ನು ದರೋಡೆ ಮಾಡಿ ಹಣ ಲಪಟಾಯಿಸುವ ಉದ್ದೇಶ ಹೊಂದಿದ್ದರು. ಆದರೆ ಪೋಲಿಸರ ಕಾರ್ಯಕ್ಷಮತೆಯಿಂದ ರೌಡಿಗಳ ಪ್ಲಾನ್ ಉಲ್ಟಾ ಆಗಿದೆ. ಬಂಧನವಾದ ಎಂಟೂ ಮಂದಿಯೂ ವಿವಿಧ ಠಾಣೆಗಳಲ್ಲಿ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ.
ಬಂಧಿತರನ್ನು ತೌಸಿರ್, ಮೊಹಮ್ಮದ್ ಅರಾಫತ್, ತಸ್ಲಿಂ, ನಾಸೀರ್ ಹುಸೈನ್, ಮೊಹಮ್ಮದ್ ರಫೀಕ್, ಮೊಹಮ್ಮದ್ ಸಫ್ವಾನ್, ಮೊಹಮ್ಮದ್ ಜೈನುದ್ದೀನ್, ಉನೈಝ್ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 2 ತಲವಾರು, 2 ಚೂರಿ, 1 ಡ್ರಾಗನ್ ಚೂರಿ, 8 ಮೊಬೈಲ್ ಫೋನ್, ಮಂಕಿ ಕ್ಯಾಪ್, ಮೆಣಸಿನ ಹುಡಿಯ ಪ್ಯಾಕೆಟ್, ಇನ್ನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications