ಮಂಗಳೂರು: ಲಕ್ಷದೀಪೋತ್ಸವದಲ್ಲಿ ಸೈಕಲ್ ಮೂಲಕ ಸ್ವಚ್ಛಭಾರತ ಅಭಿಯಾನ

ಮಂಗಳೂರು, ನವೆಂಬರ್ 16: ಇಡೀ ದೇಶ ಇದೀಗ ಸ್ವಚ್ಛತೆಯ ಆಂದೋಲನದ ಗುಂಗಿನಲ್ಲಿದೆ. ಸ್ವಚ್ಛತೆಯ ಅಗತ್ಯತೆಯನ್ನು ಮನಗಾಣಿಸುವ ಪ್ರಯತ್ನ ಸೆಲಬ್ರಿಟಿಗಳು, ಸರ್ಕಾರಿ ಜಾಹೀರಾತುಗಳ ಮೂಲಕ ನಿರಂತರವಾಗಿದೆ. ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಗಮನ ಸೆಳೆದ ಶ್ರೀಸಾಮಾನ್ಯರೊಬ್ಬರ ಸೈಕಲ್ ಯಾನ ಸ್ವಚ್ಛತೆಯ ಪ್ರಜ್ಞೆ ಅಳವಡಿಸಿಕೊಳ್ಳುವ ಮಹತ್ವದ ಸಂದೇಶ ಸಾರಿತು.

ದೇಶದ ಸರ್ಕಾರಿ ವಲಯವು ಸ್ವಚ್ಛತೆಯ ಪರ ಅಭಿಯಾನ ಆರಂಭಿಸುವ ಎಷ್ಟೋ ವರ್ಷಗಳ ಹಿಂದೆಯೇ ಈ ಸೈಕಲ್‌ಯಾನ ಶುರುವಾಗಿದೆ. ಒಟ್ಟು 16 ವರ್ಷಗಳ ಸುದೀರ್ಘಾವಧಿಯ ದೇಶ ಪರ್ಯಟನೆಯ ಮೌಲಿಕ ಸಂದೇಶಗಳ ಉದ್ದೇಶ ಈ ಯಾನದ ಜೊತೆಗಿರುವುದನ್ನು ಸೈಕಲ್ ಸ್ಪಷ್ಟಪಡಿಸುತ್ತಿದೆ. ಲಕ್ಷದೀಪೋತ್ಸವದ ಆರಂಭದ ದಿನದಂದು ಚಿಕ್ಕಮಗಳೂರಿನ ಕಡೆಗೆ ಹೊರಟ ಸಂದರ್ಭದಲ್ಲಿ ಈ ಸೈಕಲ್ ಹಲವರನ್ನು ಸೆಳೆಯಿತು.

Swachh bharat rally by a single man on cycle in Dharmastala Lakshadeepotsava

ಅರಸೀಕೆರೆ ತಾಲೂಕಿನ ಅಮರಗಿರಿಯ ಮಾಲೇಕಲ್ ತಿರುಪತಿ ಗ್ರಾಮದ ಎಪ್ಪತ್ತೆರಡು ವಯಸ್ಸಿನ ಉಮಾಪತಿ ಮೊದಲಿಯಾರ್ ಈ ಸೈಕಲ್ ಜೊತೆಗೆ ಗುರುತಿಸಿಕೊಂಡ ಶ್ರೀಸಾಮಾನ್ಯ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 50ನೇ ವರ್ಷದ ಸಂದರ್ಭದಲ್ಲಿ ಇಲ್ಲಿಗೆ ಆಗಮಿಸಿದವರು. ತಮ್ಮ ಸೈಕಲ್ ಯಾನದ ಮೂಲಕ ಆಕರ್ಷಿಸಿದವರು. ಇಲ್ಲಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸಂಚರಿಸಿ ಮೂರು ತಿಂಗಳ ಅವಧಿಯಲ್ಲಿ ದೇಶಾದ್ಯಂತ ಸೈಕಲ್ ಮೂಲಕವೇ ಪರ್ಯಟನೆ ನಡೆಸಿ ಸ್ವಚ್ಛತೆಯ ಪ್ರಜ್ಞೆ ಬಿತ್ತುವ ಉದಾತ್ತ ಉದ್ದೇಶದೊಂದಿಗಿರುವವರು.

ಸೈಕಲ್‌ನ ಹ್ಯಾಂಡಲ್ ಮೇಲೆ ಗಾಂಧೀಜಿಯವರ ಭಾವಚಿತ್ರದೊಂದಿಗಿನ 'ಸ್ವಚ್ಛ ಕರ್ನಾಟಕ ಸ್ವಚ್ಛ ಭಾರತ್ ಆಂದೋಲನ' ಎಂಬ ಉಲ್ಲೇಖದೊಂದಿಗಿನ ವಿವರಗಳು ಉಮಾಪತಿ ಅವರ ಸೈಕಲ್ ಯಾನದ ಸ್ವಚ್ಛತೆಯ ಪರವಾದ ಮಾಹಿತಿಯನ್ನು ದಾಟಿಸುತ್ತವೆ. 2003ಲ್ಲಿ ಈ ಸೈಕಲ್ ಯಾನ ಶುರುವಾಗಿರುವ ಇತಿಹಾಸವನ್ನು ಕಟ್ಟಿಕೊಡುತ್ತವೆ. ಸತತ 14 ವರ್ಷಗಳಿಂದಲೂ ಈ ಯಾನದ ಮೂಲಕ ದೇಶದಲ್ಲೆಲ್ಲಾ ಸ್ವಚ್ಛತೆಯ ಮಹತ್ವವನ್ನು ಸಾರುತ್ತಿರುವ ವಿಶೇಷತೆಗೆ ಕನ್ನಡಿ ಹಿಡಿಯುತ್ತವೆ. ಅಷ್ಟೇ ಅಲ್ಲ, ಇನ್ನೂ ಎರಡು ವರ್ಷ ಈ ಯಾನ ಮುಂದುವರೆದು 2019ರ ಹೊತ್ತಿಗೆ ಪೂರ್ಣಗೊಳ್ಳಲಿರುವುದನ್ನು ದೃಢಪಡಿಸುತ್ತವೆ.

Swachh bharat rally by a single man on cycle in Dharmastala Lakshadeepotsava

ಪ್ರತಿ ವರ್ಷ ಒಂಭತ್ತು ತಿಂಗಳುಗಳ ಕಾಲ ಎಲೆಕ್ಟ್ರಿಷಿಯನ್ ವೃತ್ತಿ ನಿರ್ವಹಿಸುವ ಉಮಾಪತಿ ಉಳಿದ ಮೂರು ತಿಂಗಳ ಅವಧಿಯಲ್ಲಿ ಉದಾತ್ತ ಉದ್ದೇಶದ ಈ ಸೈಕಲ್ ಯಾನ ಆರಂಭಿಸುತ್ತಾರೆ. 2003ರಲ್ಲಿ ಈ ಯಾನ ಆರಂಭಿಸಿದ ಇವರು ಸೈಕಲ್ ಮೂಲಕವೇ ದೆಹಲಿಯವರೆಗೆ ಪಯಣಿಸುತ್ತಾರೆ. ಪರಿಸರ ಸಂರಕ್ಷಣೆಯ ಸಂದೇಶವೂ ಈ ಸ್ವಚ್ಛತೆಯ ಪ್ರಜ್ಞೆ ಮೂಡಿಸುವ ಹಾದಿಯಲ್ಲಿ ರವಾನೆಯಾಗುತ್ತದೆ. ಇಲ್ಲಿಯವರೆಗೆ 30860 ಕಿ.ಮೀ ಪರ್ಯಾಟನೆ ನಡೆಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದಾರೆ. ಇನ್ನೂ 2019 ವರೆಗೆ ಈ ಪರ್ಯಾಟನೆ ನಡೆಸಲಿದ್ದಾರೆ.

ಸ್ವಚ್ಛತೆಯಲ್ಲಿ ಧರ್ಮಸ್ಥಳ ಅಗ್ರಗಣ್ಯವೆನ್ನಿಸಿದೆ. ದಕ್ಷಿಣ ಕನ್ನಡದಲ್ಲಿ ಸ್ವಚ್ಚತೆಯನ್ನು ಕಂಡಾಗ ತುಂಬಾ ಖುಷಿಯಾಯಿತು. ಅದರಲ್ಲೂ ಉಡುಪಿ ಬಹಳ ನನಗೆ ಇಷ್ಟವಾಯಿತು. ಸ್ವಚ್ಛತೆಗೆ ಆದ್ಯತೆ ನೀಡಿರುವ ಧರ್ಮಸ್ಥಳ ಮಾದರಿ ಎನ್ನಿಸಿದೆ ಎಂದು ಅವರು ಅಭಿಪ್ರಾಯಪಡುತ್ತಾರೆ. ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮೆಚ್ಚುಗೆಗೆ ಪಾತ್ರವಾಗಿದ್ದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+