ಶಾಲೆಗಳಿಗೆ ಇಂದಿನಿಂದ ಟಾಸ್ಕ್ಫೋರ್ಸ್ ಭೇಟಿ : ಸಿಎಂ
ಮಂಗಳೂರು, ನ.3 : ಶಾಲೆಗಳಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ, ಕಿರುಕುಳ ಪ್ರಕರಣಗಳನ್ನು ತಡೆಯಲು ಸರ್ಕಾರ ರಚಿಸಿರುವ ಟಾಸ್ಕ್ಫೋರ್ಸ್ ಸೋಮವಾರದಿಂದ ಕಾರ್ಯಾಚರಣೆ ಆರಂಭಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿಕ್ಷಣ ಸಂಸ್ಥೆಗಳು ಸರ್ಕಾರ ನೀಡಿದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದರು.
ಭಾನುವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು, ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 'ಪೊಲೀಸ್, ಮಹಿಳಾ ಮತ್ತು ಮಕ್ಕಳ ಇಲಾಖೆ, ವಾರ್ತಾ ಇಲಾಖೆ, ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ಫೋರ್ಸ್ ಸಮಿತಿಯು ನಿರಂತರವಾಗಿ ಶಾಲೆಗಳಿಗೆ ಭೇಟಿ ನೀಡಿ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳ ಜತೆ ಸಮಾಲೋಚನೆ ನಡೆಸಲಿದೆ' ಎಂದು ಹೇಳಿದರು.

ಶಿಕ್ಷಣ ಸಂಸ್ಥೆಗಳು ಸರ್ಕಾರ ನೀಡಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಬೆಂಗಳೂರಿನಲ್ಲಿ ಮೂರು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಲಿಯ ಸಿಬ್ಬಂದಿಯೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಆದ್ದರಿಂದ ಸಿಬ್ಬಂದಿ ನೇಮಕಾತಿ ಸಂದರ್ಭದಲ್ಲಿ ಶಾಲೆಗಳು ಎಚ್ಚರ ವಹಿಸಬೇಕು ಎಂದು ಸಿಎಂ ತಿಳಿಸಿದರು. [ಮಕ್ಕಳ ಸುರಕ್ಷತೆಗೆ ಸರ್ಕಾರದ ಮಾರ್ಗಸೂಚಿ]
ಲೈಂಗಿಕ ದೌರ್ಜನ್ಯ ನಡೆಸುತ್ತಿರುವವರ ಮೇಲೆ ಗೂಂಡಾ ಕಾಯ್ದೆಯನ್ನು ಹಾಕುತ್ತಿರುವುದು ಪರಿಣಾಮ ಬೀರಿದೆ. ಒಂದು ಅಪರಾಧ ಮಾಡಿದವರ ಮೇಲೂ ಗೂಂಡಾ ಕಾಯ್ದೆಯನ್ನು ಹಾಕಲಾಗುತ್ತಿದೆ. ಅತ್ಯಾಚಾರ ತಡೆ ಕುರಿತು ವರದಿ ನೀಡಲು ರಚಿಸಿರುವ ಎಂ.ಸಿ.ನಾಣಯ್ಯ ನೇತೃತ್ವದ ತಜ್ಞರ ಸಮಿತಿ ಕಾನೂನು ತಿದ್ದುಪಡಿಗಳ ಕುರಿತು ವರದಿ ನೀಡಲಿದೆ ಎಂದರು. [ಮಾರ್ಗಸೂಚಿ ಪಾಲಿಸದಿದ್ದರೆ ಶಾಲೆಗಳ ಮಾನ್ಯತೆ ರದ್ದು]
ಘಟನೆ ಸಮರ್ಥಿಸಿಕೊಳ್ಳುತ್ತಿಲ್ಲ : ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಹತ್ಯೆ, ದರೋಡೆ, ನೈತಿಕ ಪೊಲೀಸ್ ಗಿರಿ ಕುರಿತ ಪ್ರಶ್ನೆಗಳಿಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, 'ಬಿಜೆಪಿ ಸರ್ಕಾರವಿದ್ದಾಗ ಇಂತಹ ಘಟನೆ ನಡೆಯುತ್ತಿರಲಿಲ್ಲವೇ? ಅವರ ಕಾಲಕ್ಕೆ ಹೋಲಿಸಿದರೆ, ಈಗ ಕಡಿಮೆಯಾಗಿದೆ. ನಾನು ಇಂತಹ ಘಟನೆಗಳನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದರು. [ಚಿತ್ರ : ಐಸಾಕ್ ರಿರ್ಚಡ್, ಮಂಗಳೂರು]
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral












Click it and Unblock the Notifications