ದೇಶಕ್ಕಾಗಿ ಮೋದಿ : ಮಂಗಳೂರಿನಲ್ಲಿ ನಮೋ ಬ್ರಿಗೇಡ್ ಬದಲಿಗೆ ಟೀಂ ಮೋದಿ!
ಮಂಗಳೂರು, ಡಿಸೆಂಬರ್ 15 : ಲೋಕಸಭಾ ಚುನಾವಣೆ ಹತ್ತಿರ ವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದ 'ನಮೋ ಬ್ರಿಗೇಡ್' ಹೊಸರೂಪದಲ್ಲಿ ಚಾಲನೆಗೆ ಬಂದಿದೆ. ಈ ಬಾರಿ 'ನಮೋ ಬ್ರಿಗೇಡ್' ಬದಲು ಈ ಬಾರಿ 'ಟೀಂ ಮೋದಿ' ರಸ್ತೆಗೆ ಇಳಿಯಲಿದೆ.
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಯುವಕರ ಪಡೆ ಮತ್ತೆ ಸಜ್ಜಾಗುತ್ತಿದೆ. ಈ ಬಾರಿ ಮೋದಿಗಾಗಿ ತರುಣರ ತಂಡ 'ಟೀಂ ಮೋದಿ' ಹೆಸರಿನಲ್ಲಿ ರಸ್ತೆ ಗಿಳಿಯಲಿದೆ. ಕಳೆದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸೋಲಿನ ಪರಾಮರ್ಶೆ ಆರಂಭವಾಗಿದೆ. ಮುಂದಿನ ಚುನಾವಣೆಗೆ ಕಾರ್ಯತಂತ್ರವನ್ನು ಬದಲಿಸಲು ಚಿಂತನೆ ನಡೆಸಲಾಗಿದೆ. ಈ ನಡುವೆ ಯುದ್ಧ ವಿಮಾನದ ರಫೇಲ್ ಡೀಲ್ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿ ವಿಪಕ್ಷಗಳಿಗೆ ಚಾಟಿ ಏಟು ಬೀಸಿದೆ. ಇದು ಟೀಂ ಮೋದಿಯ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರನ್ನು ಸೋಲಿಸಲು ವಿರೋಧ ಪಕ್ಷಗಳು ಒಂದಾಗಿವೆ. ಆಡಳಿತ ವಿರೋಧಿ ಅಲೆಯೆಬ್ಬಿಸಲು ತೃತೀಯ ರಂಗ ಸಜ್ಜಾಗಿವೆ. ಈ ಹಿನ್ನೆಲೆಯಲ್ಲಿ ಮೋದಿ ಅವರು ಈ ದೇಶದಲ್ಲಿ ಯಾಕಾಗಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವ ಅರಿವು ಮೂಡಿಸುವ ಪ್ರಯತ್ನ ಉದ್ದೇಶದಿಂದ ಡಿಸೆಂಬರ್ 16ಕ್ಕೆ ಟೀಂ ಮೋದಿ ತಂಡವು ಸಕ್ರೀಯವಾಗಿ ಕಾರ್ಯನಿರ್ವಹಿಸಲಿದೆ. ಖ್ಯಾತ ಚಿಂತಕ ಚಕ್ರವರ್ತಿಯವರು ಈ ತಂಡದ ನೇತೃತ್ವವಹಿಸಲಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಾದ ಹಲವು ಬದಲಾವಣೆಗಳು ಜನರ ಕಣ್ಣಿಗೆ ಕಾಣದಿರುವಂತೆ ಮಾಡಲು ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ಪಕ್ಷಗಳ ಕಾರ್ಯಕರ್ತರಂತಲ್ಲದೆ, ವಿಭಿನ್ನವಾಗಿ ಮೂರನೇ ವ್ಯಕ್ತಿಯಾಗಿ ಚುನಾವಣಾ ಪ್ರಚಾರದ ಉದ್ದೇಶ ಟೀಂ ಮೋದಿ ಹೊಂದಿದ್ದು ಅದಕ್ಕಾಗಿಯೇ ರಾಜ್ಯದಾದ್ಯಂತ 300 ಕಡೆ ಟೀಂ ಮೋದಿ ಏಕಕಾಲಕ್ಕೆ ಚಟುವಟುಕೆ ಆರಂಭಿಸಲಿವೆ.
ಇದರ ಭಾಗವೆಂಬಂತೆ ಡಿಸೆಂಬರ್ 16ರಂದು ವಿವಿಧೆಡೆ ಬೈಕ್ ಜಾಥಾ, ಕಾಲ್ನಡಿಗೆ ಜಾಥಾ, ಕಾರ್ಯಾಲಯಗಳ ಉದ್ಘಾಟನೆ ಹೀಗೆ ವಿವಿಧ ಕಾರ್ಯಕ್ರಮಗಳ ಜೊತೆ ಟೀಂ ಮೋದಿ ತಂಡ ತೊಡಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಾಲ್ನಡಿಗೆ ಜಾಥಾ ಮೂಲಕ ಟೀಂ ಮೋದಿಯ ಉದ್ಘಾಟನೆಗೊಳ್ಳಲಿದ್ದು ಈಗಾಗಲೇ ಹಲವು ಯುವಕರು ಈ ಕಾರ್ಯಕ್ಕೆ ಜೊತೆಯಾಗಿ ನಿಲ್ಲುವ ಆಸಕ್ತಿಯೊಂದಿಗೆ ಜೊತೆಗೂಡಿದ್ದಾರೆ.

ಮೋದಿಜಿಯ ಹಲವು ಯೋಜನೆಗಳ ಬಗ್ಗೆ ಜನರಿಗೆ ತಲುಪಿಸುವುದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಸರಕಾರ ಸಾಧಿಸಿದ ಸಾಧನೆಗಳ ಬಗ್ಗೆ ಅರಿವು, ಜನಸಾಮಾನ್ಯರಿಗೆ ತಲುಪಿಲ್ಲದ ಯೋಜನೆಗಳ ಬಗ್ಗೆ ಅರಿವು ಪ್ರಚಾರ ಮಾಹಿತಿ ಹೀಗೆ ಹಲವು ಮೋದಿಪರ ಪ್ರಚಾರದ ದೃಷ್ಟಿಯಿಂದ ಮಾತ್ರ ಈ ಟೀಂ ಸಿದ್ದವಾಗಿದೆ.
ಮಂಗಳೂರಿನ ಹಂಪನಕಟ್ಟೆಯಿಂದ ಕೇಂದ್ರ ಮೈದಾನದವರೆಗೆ ಡಿಸೆಂಬರ್ 16ರಂದು ಸಂಜೆ ಕಾಲ್ನಡಿಗೆ ಜಾಥಾ ಮೂಲಕ ಮಂಗಳೂರಿನ ಟೀಂ ಮೋದಿ ತಂಡ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ. 'ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು' ಎಂಬ ಘೋಷವಾಕ್ಯದೊಂದಿಗೆ ಟೀಂ ಮಂಗಳೂರು ಚಟುವಟಿಕೆ ಆರಂಭಿಸಲಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications