ದೇಶಕ್ಕಾಗಿ ಮೋದಿ : ಮಂಗಳೂರಿನಲ್ಲಿ ನಮೋ ಬ್ರಿಗೇಡ್ ಬದಲಿಗೆ ಟೀಂ ಮೋದಿ!
ಮಂಗಳೂರು, ಡಿಸೆಂಬರ್ 15 : ಲೋಕಸಭಾ ಚುನಾವಣೆ ಹತ್ತಿರ ವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದ 'ನಮೋ ಬ್ರಿಗೇಡ್' ಹೊಸರೂಪದಲ್ಲಿ ಚಾಲನೆಗೆ ಬಂದಿದೆ. ಈ ಬಾರಿ 'ನಮೋ ಬ್ರಿಗೇಡ್' ಬದಲು ಈ ಬಾರಿ 'ಟೀಂ ಮೋದಿ' ರಸ್ತೆಗೆ ಇಳಿಯಲಿದೆ.
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಯುವಕರ ಪಡೆ ಮತ್ತೆ ಸಜ್ಜಾಗುತ್ತಿದೆ. ಈ ಬಾರಿ ಮೋದಿಗಾಗಿ ತರುಣರ ತಂಡ 'ಟೀಂ ಮೋದಿ' ಹೆಸರಿನಲ್ಲಿ ರಸ್ತೆ ಗಿಳಿಯಲಿದೆ. ಕಳೆದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸೋಲಿನ ಪರಾಮರ್ಶೆ ಆರಂಭವಾಗಿದೆ. ಮುಂದಿನ ಚುನಾವಣೆಗೆ ಕಾರ್ಯತಂತ್ರವನ್ನು ಬದಲಿಸಲು ಚಿಂತನೆ ನಡೆಸಲಾಗಿದೆ. ಈ ನಡುವೆ ಯುದ್ಧ ವಿಮಾನದ ರಫೇಲ್ ಡೀಲ್ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿ ವಿಪಕ್ಷಗಳಿಗೆ ಚಾಟಿ ಏಟು ಬೀಸಿದೆ. ಇದು ಟೀಂ ಮೋದಿಯ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರನ್ನು ಸೋಲಿಸಲು ವಿರೋಧ ಪಕ್ಷಗಳು ಒಂದಾಗಿವೆ. ಆಡಳಿತ ವಿರೋಧಿ ಅಲೆಯೆಬ್ಬಿಸಲು ತೃತೀಯ ರಂಗ ಸಜ್ಜಾಗಿವೆ. ಈ ಹಿನ್ನೆಲೆಯಲ್ಲಿ ಮೋದಿ ಅವರು ಈ ದೇಶದಲ್ಲಿ ಯಾಕಾಗಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವ ಅರಿವು ಮೂಡಿಸುವ ಪ್ರಯತ್ನ ಉದ್ದೇಶದಿಂದ ಡಿಸೆಂಬರ್ 16ಕ್ಕೆ ಟೀಂ ಮೋದಿ ತಂಡವು ಸಕ್ರೀಯವಾಗಿ ಕಾರ್ಯನಿರ್ವಹಿಸಲಿದೆ. ಖ್ಯಾತ ಚಿಂತಕ ಚಕ್ರವರ್ತಿಯವರು ಈ ತಂಡದ ನೇತೃತ್ವವಹಿಸಲಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಾದ ಹಲವು ಬದಲಾವಣೆಗಳು ಜನರ ಕಣ್ಣಿಗೆ ಕಾಣದಿರುವಂತೆ ಮಾಡಲು ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ಪಕ್ಷಗಳ ಕಾರ್ಯಕರ್ತರಂತಲ್ಲದೆ, ವಿಭಿನ್ನವಾಗಿ ಮೂರನೇ ವ್ಯಕ್ತಿಯಾಗಿ ಚುನಾವಣಾ ಪ್ರಚಾರದ ಉದ್ದೇಶ ಟೀಂ ಮೋದಿ ಹೊಂದಿದ್ದು ಅದಕ್ಕಾಗಿಯೇ ರಾಜ್ಯದಾದ್ಯಂತ 300 ಕಡೆ ಟೀಂ ಮೋದಿ ಏಕಕಾಲಕ್ಕೆ ಚಟುವಟುಕೆ ಆರಂಭಿಸಲಿವೆ.
ಇದರ ಭಾಗವೆಂಬಂತೆ ಡಿಸೆಂಬರ್ 16ರಂದು ವಿವಿಧೆಡೆ ಬೈಕ್ ಜಾಥಾ, ಕಾಲ್ನಡಿಗೆ ಜಾಥಾ, ಕಾರ್ಯಾಲಯಗಳ ಉದ್ಘಾಟನೆ ಹೀಗೆ ವಿವಿಧ ಕಾರ್ಯಕ್ರಮಗಳ ಜೊತೆ ಟೀಂ ಮೋದಿ ತಂಡ ತೊಡಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಾಲ್ನಡಿಗೆ ಜಾಥಾ ಮೂಲಕ ಟೀಂ ಮೋದಿಯ ಉದ್ಘಾಟನೆಗೊಳ್ಳಲಿದ್ದು ಈಗಾಗಲೇ ಹಲವು ಯುವಕರು ಈ ಕಾರ್ಯಕ್ಕೆ ಜೊತೆಯಾಗಿ ನಿಲ್ಲುವ ಆಸಕ್ತಿಯೊಂದಿಗೆ ಜೊತೆಗೂಡಿದ್ದಾರೆ.

ಮೋದಿಜಿಯ ಹಲವು ಯೋಜನೆಗಳ ಬಗ್ಗೆ ಜನರಿಗೆ ತಲುಪಿಸುವುದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಸರಕಾರ ಸಾಧಿಸಿದ ಸಾಧನೆಗಳ ಬಗ್ಗೆ ಅರಿವು, ಜನಸಾಮಾನ್ಯರಿಗೆ ತಲುಪಿಲ್ಲದ ಯೋಜನೆಗಳ ಬಗ್ಗೆ ಅರಿವು ಪ್ರಚಾರ ಮಾಹಿತಿ ಹೀಗೆ ಹಲವು ಮೋದಿಪರ ಪ್ರಚಾರದ ದೃಷ್ಟಿಯಿಂದ ಮಾತ್ರ ಈ ಟೀಂ ಸಿದ್ದವಾಗಿದೆ.
ಮಂಗಳೂರಿನ ಹಂಪನಕಟ್ಟೆಯಿಂದ ಕೇಂದ್ರ ಮೈದಾನದವರೆಗೆ ಡಿಸೆಂಬರ್ 16ರಂದು ಸಂಜೆ ಕಾಲ್ನಡಿಗೆ ಜಾಥಾ ಮೂಲಕ ಮಂಗಳೂರಿನ ಟೀಂ ಮೋದಿ ತಂಡ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ. 'ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು' ಎಂಬ ಘೋಷವಾಕ್ಯದೊಂದಿಗೆ ಟೀಂ ಮಂಗಳೂರು ಚಟುವಟಿಕೆ ಆರಂಭಿಸಲಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications