ವಿವಾದದ ಸುಳಿಯಲ್ಲಿ ಟೀಮ್ ಮೋದಿಯ ಯಕ್ಷಗಾನ ಬಯಲಾಟ
ಮಂಗಳೂರು, ಡಿಸೆಂಬರ್ 27 : ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಮಂಗಳೂರಿನ ಟೀಂ ಮೋದಿ ಹರಕೆಯ ಪದ್ದತಿಯ ಮೂಲಕ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯನ್ನು ಆರಾಧಿಸಲು ಮುಂದಾಗಿದ್ದಾರೆ.
ಟೀಂ ಮೋದಿ ಸದಸ್ಯರು, ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಕಡೆಯಿಂದ 'ಸಂಪೂರ್ಣ ದೇವಿ ಮಹಾತ್ಮೆ' ಯಕ್ಷಗಾನ ಬಯಲಾಟ ನಡೆಸಲು ಮುಂದಾಗಿದ್ದಾರೆ. ಇದೇ ಬರುವ ಡಿಸೆಂಬರ್ 29 ಮಣ್ಣಗುಡ್ಡೆ ಗುರ್ಜಿ ಸಮೀಪದ ಮೈದಾನದಲ್ಲಿಈ ಹರಕೆಯ ಬಯಲಾಟ ನಡೆಯಲಿದೆ.
ಆದರೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಮೇಳದಿಂದ 'ಶ್ರೀದೇವಿ ಮಹಾತ್ಮೆ' ಯಕ್ಷಗಾನವನ್ನು ಆಯೋಜಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಕಟೀಲು ಮೇಳದ ಹರಕೆಯ ಯಕ್ಷಗಾನ ಆಟ ಆಡಿಸಬೇಕಾದರೆ ವರ್ಷಗಟ್ಟಲೆ ಕಾಯುವ ಪರಿಸ್ಥಿತಿ ಇದೆ.

ಆದರೆ ಇತ್ತೀಚೆಗಷ್ಟೆ ಸ್ಥಾಪನೆಯಾದ ಟೀಂ ಮೋದಿಗೆ ಡಿಸೆಂಬರ್ .29ರಂದು ಯಕ್ಷಗಾನ ಆಡಿಸಲು ಅವಕಾಶ ಲಭಿಸಿದ್ದಾದರೂ ಹೇಗೆ? ಇದರ ಹಿಂದೆ ಭ್ರಷ್ಟಾಚಾರದ ವಾಸನೆ ಬರುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆರೋಪ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷ ಗಾನ ಮಂಡಳಿಯಲ್ಲಿ ಯಾರದೋ ಹೆಸರಿನ ಯಕ್ಷ ಗಾನವನ್ನು ಇನ್ಯಾರಿಗೋ ನೀಡಲಾಗುತ್ತಿದೆ ಮತ್ತು ಸರದಿ ಪ್ರಕಾರ ಭಕ್ತರಿಗೆ ಯಕ್ಷಗಾನ ಮಂಜೂರು ಮಾಡಲಾಗುತ್ತಿಲ್ಲ ಎಂದು ಆರೋಪಿಸಲಾಗಿದೆ.
ಆದರೆ ಇದಕ್ಕೆ ಟೀಮ್ ಮೋದಿ ಮುಖಂಡ ನರೇಶ್ ಶೆಣೈ ಸಮಜಾಯಿಶಿ ನೀಡಿದ್ದಾರೆ. ಕಟೀಲು ಮೇಳದಲ್ಲಿ ತತ್ಕಾಲ್ ಕೋಟಾದಲ್ಲಿ ಯಕ್ಷಗಾನಕ್ಕೆ ಬುಕ್ಕಿಂಗ್ ಮಾಡಿದ್ದು,ಅವಕಾಶಕ್ಕಾಗಿ ಕಾಯುತ್ತಿದ್ದೆವು. ಯಾರಿಗೋ ಸೂತಕ ಬಂದ ಕಾರಣ ಕೆಲ ದಿನ ಹಿಂದೆ ಕಟೀಲಿನಿಂದ ಕರೆ ಮಾಡಿ ಡಿಸೆಂಬರ್29ರಂದು 'ಯಕ್ಷಗಾನಕ್ಕೆ ಅವಕಾಶವಿದೆ, ನೀವು ರೆಡಿ ಇದ್ದೀರಾ?' ಎಂದು ಕೇಳಿದ್ದರು. ಅದಕ್ಕೆ ನಾವು ಒಪ್ಪಿಗೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಮಹಾರುದ್ರಯಾಗ ನಡೆಸಲಾಗಿತ್ತು. ಮೋದಿಯವರ ನಕ್ಷತ್ರ, ಹೆಸರಿನಲ್ಲಿ ಸಂಕಲ್ಪ ಮಾಡಿ ಪೂರ್ಣಾಹುತಿ ನೀಡಲಾಗಿತ್ತು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications