ವಿವಾದದ ಸುಳಿಯಲ್ಲಿ ಟೀಮ್ ಮೋದಿಯ ಯಕ್ಷಗಾನ ಬಯಲಾಟ
ಮಂಗಳೂರು, ಡಿಸೆಂಬರ್ 27 : ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಮಂಗಳೂರಿನ ಟೀಂ ಮೋದಿ ಹರಕೆಯ ಪದ್ದತಿಯ ಮೂಲಕ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯನ್ನು ಆರಾಧಿಸಲು ಮುಂದಾಗಿದ್ದಾರೆ.
ಟೀಂ ಮೋದಿ ಸದಸ್ಯರು, ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಕಡೆಯಿಂದ 'ಸಂಪೂರ್ಣ ದೇವಿ ಮಹಾತ್ಮೆ' ಯಕ್ಷಗಾನ ಬಯಲಾಟ ನಡೆಸಲು ಮುಂದಾಗಿದ್ದಾರೆ. ಇದೇ ಬರುವ ಡಿಸೆಂಬರ್ 29 ಮಣ್ಣಗುಡ್ಡೆ ಗುರ್ಜಿ ಸಮೀಪದ ಮೈದಾನದಲ್ಲಿಈ ಹರಕೆಯ ಬಯಲಾಟ ನಡೆಯಲಿದೆ.
ಆದರೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಮೇಳದಿಂದ 'ಶ್ರೀದೇವಿ ಮಹಾತ್ಮೆ' ಯಕ್ಷಗಾನವನ್ನು ಆಯೋಜಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಕಟೀಲು ಮೇಳದ ಹರಕೆಯ ಯಕ್ಷಗಾನ ಆಟ ಆಡಿಸಬೇಕಾದರೆ ವರ್ಷಗಟ್ಟಲೆ ಕಾಯುವ ಪರಿಸ್ಥಿತಿ ಇದೆ.

ಆದರೆ ಇತ್ತೀಚೆಗಷ್ಟೆ ಸ್ಥಾಪನೆಯಾದ ಟೀಂ ಮೋದಿಗೆ ಡಿಸೆಂಬರ್ .29ರಂದು ಯಕ್ಷಗಾನ ಆಡಿಸಲು ಅವಕಾಶ ಲಭಿಸಿದ್ದಾದರೂ ಹೇಗೆ? ಇದರ ಹಿಂದೆ ಭ್ರಷ್ಟಾಚಾರದ ವಾಸನೆ ಬರುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆರೋಪ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷ ಗಾನ ಮಂಡಳಿಯಲ್ಲಿ ಯಾರದೋ ಹೆಸರಿನ ಯಕ್ಷ ಗಾನವನ್ನು ಇನ್ಯಾರಿಗೋ ನೀಡಲಾಗುತ್ತಿದೆ ಮತ್ತು ಸರದಿ ಪ್ರಕಾರ ಭಕ್ತರಿಗೆ ಯಕ್ಷಗಾನ ಮಂಜೂರು ಮಾಡಲಾಗುತ್ತಿಲ್ಲ ಎಂದು ಆರೋಪಿಸಲಾಗಿದೆ.
ಆದರೆ ಇದಕ್ಕೆ ಟೀಮ್ ಮೋದಿ ಮುಖಂಡ ನರೇಶ್ ಶೆಣೈ ಸಮಜಾಯಿಶಿ ನೀಡಿದ್ದಾರೆ. ಕಟೀಲು ಮೇಳದಲ್ಲಿ ತತ್ಕಾಲ್ ಕೋಟಾದಲ್ಲಿ ಯಕ್ಷಗಾನಕ್ಕೆ ಬುಕ್ಕಿಂಗ್ ಮಾಡಿದ್ದು,ಅವಕಾಶಕ್ಕಾಗಿ ಕಾಯುತ್ತಿದ್ದೆವು. ಯಾರಿಗೋ ಸೂತಕ ಬಂದ ಕಾರಣ ಕೆಲ ದಿನ ಹಿಂದೆ ಕಟೀಲಿನಿಂದ ಕರೆ ಮಾಡಿ ಡಿಸೆಂಬರ್29ರಂದು 'ಯಕ್ಷಗಾನಕ್ಕೆ ಅವಕಾಶವಿದೆ, ನೀವು ರೆಡಿ ಇದ್ದೀರಾ?' ಎಂದು ಕೇಳಿದ್ದರು. ಅದಕ್ಕೆ ನಾವು ಒಪ್ಪಿಗೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಮಹಾರುದ್ರಯಾಗ ನಡೆಸಲಾಗಿತ್ತು. ಮೋದಿಯವರ ನಕ್ಷತ್ರ, ಹೆಸರಿನಲ್ಲಿ ಸಂಕಲ್ಪ ಮಾಡಿ ಪೂರ್ಣಾಹುತಿ ನೀಡಲಾಗಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications