ಮಂಗಳೂರಿನಲ್ಲಿ ಶೈಕ್ಷಣಿಕ ಒತ್ತಡಕ್ಕೆ ಬೇಸತ್ತು ಬಾಲಕ ಆತ್ಮಹತ್ಯೆ ಯತ್ನ
ಮಂಗಳೂರು, ಅಕ್ಟೋಬರ್ 8: ಶೈಕ್ಷಣಿಕ ಒತ್ತಡಗಳಿಂದ ಬೇಸತ್ತು ಶಾಲಾ ಬಾಲಕನೋರ್ವ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಹೊರವಲಯದ ಆಡುಮರೋಳಿ ಎಂಬಲ್ಲಿ ಈ ಘಟನೆ ನಡೆದಿದೆ. ಇಲ್ಲಿಯ ನಾಲ್ಕು ಅಂತಸ್ತಿನ ಕಟ್ಟಡದಿಂದ ಬಾಲಕ ಕೆಳಗೆ ಜಿಗಿದಿದ್ದಾನೆ .
ಆತ್ಮಹತ್ಯೆ ಗೆ ಯತ್ನಿಸಿದ ಬಾಲಕ ನಗರದ ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿಯಾಗಿದ್ದು, 10ನೇ ತರಗತಿಯಲ್ಲಿ ಕಲಿಯುತ್ತಿದ್ದ . ಆತ್ಮಹತ್ಯೆಗೆ ಮೊದಲು ಸೂಸೈಡ್ ನೋಟ್ ಬರೆದಿರುವ ಬಾಲಕ ಶಿಕ್ಷಣದ ಒತ್ತಡಗಳಿಂದ ಬೇಸತ್ತಿರುವುದು ಸ್ಪಷ್ಟವಾಗಿದೆ. ಸೂಸೈಡ್ ನೋಟ್ ನಲ್ಲಿ "ನೋ ಮೋರ್ ಸ್ಟಡಿ " ಎಂದು ಬರೆದಿರುವುದಾಗಿ ತಿಳಿದು ಬಂದಿದೆ .

ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ . ಘಟನೆ ಕುರಿತು ಕಂಕನಾಡಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications