'ಸೀಲ್ ಮಾಡಿದ ಕವರ್ನಲ್ಲಿ ಏನಿದೆ ಹೇಳಿ'- ಜ್ಯೋತಿಷಿಗಳಿಗೆ ವಿಚಾರವಾದಿ ನರೇಂದ್ರ ನಾಯಕ್ ಸವಾಲು
ಮಂಗಳೂರು, ಮೇ 30: ನಗರದ ಹೊರವಲಯದಲ್ಲಿರುವ ಮಳಲಿಯಲ್ಲಿ ನಡೆದ ತಾಂಬೂಲ ಪ್ರಶ್ನೆ ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ.. ಮಳಲಿ ತಾಂಬೂಲ ಪ್ರಶ್ನೆಗೆ ರಾಜಕೀಯ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸಿದರೆ, ಇತ್ತ ತಾಂಬೂಲ ಪ್ರಶ್ನೆ ಅಂದರೇನು ಅಂತಾ ತಿಳಿಯದ ಜನರು ತಾಂಬೂಲ ಪ್ರಶ್ನೆಯ ಬಗ್ಗೆ ಉತ್ಸುಕರಾಗಿದ್ದಾರೆ. ಇನ್ನೂ ಹಲವು ಮಂದಿ ಈ ತಾಂಬೂಲ ಪ್ರಶ್ನೆ ಎಂಬುವುದು ಸುಳ್ಳು ಅಂತಾ ವಾದಿಸುತ್ತಿದ್ದಾರೆ.
ಮಂಗಳೂರಿನ ವಿಚಾರವಾದಿ ಫ್ರೊ. ನರೇಂದ್ರ ನಾಯಕ್ ಕೂಡಾ ಜ್ಯೋತಿಷ್ಯಕ್ಕೆ ಸವಾಲೊಡ್ಡಿದ್ದಾರೆ. ತಾವು ಸೀಲ್ ಮಾಡಿರುವ ಕವರ್ ನಲ್ಲಿ ಏನಿದೆ ಎಂದು ಹೇಳಿದ 50 ಮಂದಿಗೆ ತಲಾ 1ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

ಜೋತಿಷ್ಯಕ್ಕೆ ಸವಾಲ ಹಾಕಿದ ವಿಚಾರವಾದಿ
ಮಳಲಿಯಲ್ಲಿನ ಮಂದಿರ - ಮಸೀದಿ ವಿವಾದದ ತಾಂಬೂಲ ಪ್ರಶ್ನೆಯು ಹೊಸ ಹೊಸ ಆಯಾಮವನ್ನು ಹುಟ್ಟುಹಾಕುತ್ತಿದೆ. ಇದೀಗ ಮಂಗಳೂರಿನ ಖ್ಯಾತ ವಿಚಾರವಾದಿ ನರೇಂದ್ರ ನಾಯಕ್ ಅವರು ತಾಂಬೂಲ ಪ್ರಶ್ನೆಯ ಹಿನ್ನೆಲೆಯಲ್ಲಿ ಜೋತಿಷ್ಯಕ್ಕೆ ಸವಾಲೆಸೆದಿದ್ದಾರೆ. ಅವರು ಶುಕ್ರವಾರ ಬೆಳಗ್ಗೆ 11.33 ಗಂಟೆಗೆ ಏಳು ಲಕೋಟೆಗಳನ್ನು ಸೀಲ್ ಮಾಡಿ ಇಟ್ಟಿದ್ದಾರೆ. ಅದರಲ್ಲಿ ಕರೆನ್ಸಿ, ಕಾಗದಗಳನ್ನು ಇಟ್ಟಿದ್ದಾರೆ. ಸವಾಲು ಸ್ವೀಕರಿಸುವವರು ಏಳು ಲಕೋಟೆಗಳಲ್ಲಿ ಆರು ಕವರ್ ಗಳನ್ನು ಆಯ್ಕೆ ಮಾಡಿ ಅದರಲ್ಲಿ ಐದಕ್ಕೆ ನಿಖರವಾದ ಉತ್ತರ ಹೇಳಿದ 50 ಮಂದಿಗೆ ತಲಾ ಒಂದು ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದಾರೆ.

ಆ ಕವರ್ ನೊಳಗಡೆ ಕರೆನ್ಸಿ ಇದೆಯೆಂದಾದರೆ ಅದು ಯಾವ ದೇಶದ್ದು, ಸೀರಿಯಲ್ ನಂಬರ್, ಎಷ್ಟು ರೂ. ನೋಟು ಹೀಗೆ ಖಚಿತವಾಗಿ ಹೇಳಬೇಕು. ಅದೇ ರೀತಿ ಕಾಗದವಾದಲ್ಲಿ ಅದು ಖಾಲಿ ಕಾಗದವೇ ಅಥವಾ ಏನು ಬರೆದಿದೆ ಎಂದು ಹೇಳಬೇಕು. ಈ ಸವಾಲಿಗೆ ಉತ್ತರ ನೀಡಲು ಮೇ 30ರ ಮಧ್ಯರಾತ್ರಿಯವರೆಗೆ ಅವಕಾಶವಿದೆ. ಆ ಬಳಿಕ ಬರುವ ಉತ್ತರವನ್ನು ಮಾನ್ಯತೆ ಆಗೋದಿಲ್ಲ. ಸವಾಲೆಸೆದ ಲಕೋಟೆಯನ್ನು ಜೂನ್ ಒಂದರಂದು ಬೆಳಗ್ಗೆ 10.30ಕ್ಕೆ ಲೇಡಿಹಿಲ್ ನಲ್ಲಿರುವ ಪ್ರೆಸ್ ಕ್ಲಬ್ ನಲ್ಲಿ ಎಲ್ಲರ ಸಮ್ಮುಖದಲ್ಲಿ ತೆರೆಯಲಾಗುತ್ತದೆ. ಸವಾಲು ಸ್ವೀಕರಿಸುವವರು ಉತ್ತರವನ್ನು ನರೇಂದ್ರ ನಾಯಕ್ ಅವರ ವಾಟ್ಸ್ಆ್ಯಪ್ 9448216343 ಹಾಗೂ ಇಮೈಲ್ [email protected] ಗೆ ಕಳುಹಿಸಬಹುದು.

ಒಟ್ಟಿನಲ್ಲಿ ಮಳಲಿ ದರ್ಗಾ ವಿವಾದದ ವಿಚಾರವಾಗಿ ಹಿಂದೂ ಸಂಘಟನೆಗಳು ಮತ್ತು ಎಸ್ ಡಿಪಿಐ ಮತ್ತು ಬಿಜೆಪಿ ನಡುವೆ ವಾಗ್ವಾದ ತಾರಕಕ್ಕೇರುತ್ತಿದೆ. ಇನ್ನೊಂದೆಡೆ ಜೋತಿಷ್ಯ ಹಾಗೂ ವೈಚಾರಿಕತೆಯ ನಡುವಿನ ಸವಾಲು ಜವಾಬಿನಲ್ಲಿ ಯಾವುದು ಗೆಲುವು ಸಾಧಿಸುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
(ಒನ್ಇಂಡಿಯಾ ಸುದ್ದಿ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications