Breaking; ವಿಡಿಯೋ, ಮಂಗಳೂರು ಸಮುದ್ರದಲ್ಲಿ ಮುಳುಗಿದ ಬೋಟ್
ಮಂಗಳೂರು, ಆಗಸ್ಟ್ 07; ತುಫಾನ್ಗೆ ಸಿಲುಕಿ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೋಟ್ನಲ್ಲಿದ್ದ 10 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.
ಮಂಗಳೂರಿನ ಕೃಷ್ಣ ಕುಮಾರ್ ಎಂಬುವವರ ಬೋಟ್ ಮಂಗಳೂರಿನ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿ ಅರಬ್ಬೀ ಸಮುದ್ರದಲ್ಲಿ ಮುಳುಗಿದೆ.

ಬೋಟ್ನಲ್ಲಿದ್ದ 10 ಮಂದಿ ಮೀನುಗಾರರನ್ನು ಮೀನುಗಾರಿಕೆಗೆ ತೆರಳಿದ್ದ ಇತರ ಮೀನುಗಾರಿಕಾ ಬೋಟ್ಗಳಲ್ಲಿದ್ದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ಬೋಟ್ ಮುಳುಗುತ್ತಿರುವ ವಿಡಿಯೋ
ಶ್ರೀರಾಮ್ ಹೆಸರಿನ ಬೋಟ್ ಅರಬ್ಬೀ ಸಮುದ್ರದಲ್ಲಿ ಮುಳುಗಡೆಯಾಗಿದೆ. ಮಂಗಳೂರಿನಿಂದ 30 ನಾಟಿಕಲ್ ಮೈಲ್ ದೂರದಲ್ಲಿ ಈ ಘಟನೆ ನಡೆದಿದೆ. ಬೋಟ್ ಮುಳುಗುತ್ತಿದ್ದಂತೆ ಹಲವರು ಸಮುದ್ರಕ್ಕೆ ಹಾರಿದ್ದಾರೆ. ಈಜಾಡುತ್ತಿದ್ದ ಅವರನ್ನು ಬೇರೆ ಬೋಟ್ನಲ್ಲಿದ್ದವರು ರಕ್ಷಣೆ ಮಾಡಿದ್ದಾರೆ.
ಮೀನುಗಾರಿಗೆ ಸಂದರ್ಭದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿತ್ತು. ಅಲ್ಲದೇ ಜೋರಾದ ಗಾಳಿ ಬೀಸುತ್ತಿದ್ದ ಕಾರಣ ಬೋಟ್ ಮುಳುಗಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ.
ಮುಂಗಾರು ಅವಧಿ ಆರಂಭವಾದ ತಕ್ಷಣ ಆಳ ಸಮುದ್ರದ ಮೀನುಗಾರಿಗೆ ಮೇಲೆ ನಿಷೇಧ ಹೇರಲಾಗಿತ್ತು. ಆಗಸ್ಟ್ನಲ್ಲಿ ಈ ನಿಷೇಧ ತೆರವುಗೊಂಡಿದ್ದು, ಈಗ ಮೀನುಗಾರಿಕೆ ಆರಂಭವಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications