ಮಂಗಳೂರು ಬಂದರಿಗೆ ಆಗಮಿಸಿದ ವರ್ಷದ ಮೊದಲ ಐಷಾರಾಮಿ ಪ್ರವಾಸಿ ಹಡಗು: ಏನಿದರ ವಿಶೇಷತೆ?
ಮಂಗಳೂರು, ಜನವರಿ 11: ಮಂಗಳೂರಿನ ಪಣಂಬೂರು ನವ ಮಂಗಳೂರು ಬಂದರಿಗೆ ಹೊಸ ವರ್ಷದ ಮೊದಲ ಐಷಾರಾಮಿ ಪ್ರಯಾಣಿಕರ ಹಡಗು ಆಗಮಿಸಿದೆ. ಎಂ.ಎಸ್. ರಿವೀರಿಯ ಎಂಬ ಹೆಸರಿನ ಐಷಾರಾಮಿ ಹಡಗು ಬುಧವಾರ ಎನ್ಎಂಪಿಎಗೆ ಆಗಮಿಸಿದೆ.
ಈ ಋತುವಿನಲ್ಲಿ ಮಂಗಳೂರಿಗೆ ಆಗಮಿಸಿದ ನಾಲ್ಕನೇ ಐಷಾರಾಮಿ ಹಡಗು ಇದಾಗಿದೆ. ಈ ಹಡಗಿನಲ್ಲಿ ಹಡಗಿನಲ್ಲಿ ಸಿಬ್ಬಂದಿ ಸೇರಿ ಒಟ್ಟು 980 ಪ್ರವಾಸಿಗರಿದ್ದರು. ದುಬೈನಿಂದ ಆಗಮಿಸಿದ ಈ ಹಡಗು ಮುಂಬೈ, ಮರ್ಮಗೋವಾ ಬಂದರು ಮೂಲಕ ಮಂಗಳೂರಿಗೆ ಆಗಮಿಸಿದೆ.

ಎಂ.ಎಸ್. ರಿವೀರಿಯ ಎಂಬ ಈ ಐಷಾರಾಮಿ ಹಡಗು 239 ಮೀಟರ್ ಉದ್ದವಿದ್ದು, 66,172 ಟನ್ ಭಾರ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಹಡಗಿನಲ್ಲಿ ಬಂದ ಪ್ರವಾಸಿಗರಿಗೆ ಮಂಗಳೂರು ಬಂದರು ಪ್ರವೇಶ ಮಾಡುತ್ತಿದ್ದಂತೆ ಕರಾವಳಿಯ ಸಾಂಪ್ರದಾಯಿಕ ಕಲೆ ಯಕ್ಷಗಾನ ಸೇರಿದಂತೆ ವಿವಿಧ ರೀತಿಯ ಸಾಂಸ್ಕೃತಿಕ ಕಲಾ ಪ್ರಕಾರಗಳ ಮೂಲಕ ಸ್ವಾಗತ ನೀಡಲಾಯಿತು.
ಪ್ರವಾಸಿಗರನ್ನು ಮಂಗಳೂರು ಸುತ್ತಮುತ್ತ ಸುತ್ತಾಡಿಸಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಇಲಾಖೆಯಿಂದ ಮೆಡಿಟೇಶನ್ ಸೆಂಟರ್, ಎನ್ಎಂಪಿಟಿ ಬಂದರಿನಲ್ಲಿ ಫ್ರೀ ವೈಫೈ, ಯಕ್ಷಗಾನ ಕಲಾವಿದರ ಜೊತೆಗೆ ಫೋಟೋ ಕ್ಲಿಕ್ಕಿಸಲು ಸೆಲ್ಫಿ ಸ್ಟಾಂಡ್ ಒದಗಿಸಲಾಗಿತ್ತು.

ಹಡಗಿನ ಪ್ರಮುಖ ಅಧಿಕಾರಿಗಳನ್ನು ಎನ್ಎಂಪಿಎ ಬಂದರಿನ ಡೆಪ್ಯುಟಿ ಚೇರ್ಮನ್ ಕೆ.ಜಿ. ನಾಥ್, ಸೆಕ್ರಟರಿ ಜಿಜೋ ಥಾಮಸ್ ಗೌರವಿಸಿದರು. ಆ ಬಳಿಕ ಪ್ರವಾಸಿಗರಿಗೆಂದೇ ಮಂಗಳೂರಿನ ಸ್ಥಳೀಯ ಕಲಾವಿದರಿಂದ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿತ್ತು.
ಅಲ್ಲದೆ ವಿದೇಶಿ ಪ್ರವಾಸಿಗರಿಗೆ ಮಂಗಳೂರಿನಲ್ಲಿ ಕಾರ್ಕಳ ಗೊಮ್ಮಟೇಶ್ವರ, ಮೂಡುಬಿದ್ರೆ ಸಾವಿರ ಕಂಬದ ಬಸದಿ, ಸೋನ್ಸ್ ಫಾರ್ಮ್, ಅಚಲ್ ಕ್ಯಾಶ್ಯು ಫ್ಯಾಕ್ಟರಿ, ಸೈಂಟ್ ಅಲೋಸಿಯಸ್ ಚರ್ಚ್, ಹಳೆ ಶೈಲಿಯ ಮನೆಗಳಿಗೆ ಪ್ರವಾಸಿಗರು ಭೇಟಿ ನೀಡಿದೆ. ಸಂಜೆ ವೇಳೆಗೆ ಹಡಗು ಕೊಚ್ಚಿ ಬಂದರಿನತ್ತ ತೆರಳಿದೆ. ನವ ಮಂಗಳೂರು ಬಂದರಿಗೆ ಹೊಸ ವರ್ಷದ ಮೊದಲ ಐಷಾರಾಮಿ ಹಡಗನ್ನು ನೋಡಲು ಸ್ಥಳೀಯರು ಕಡಲತಟಕ್ಕೆ ತಂಡೋಪಾದಿಯಲ್ಲಿ ಬಂದಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications