ಕರಾವಳಿಯಲ್ಲಿ ಮತ್ತೆ ಮೊಳಗಿದ ಕಂಬಳದ ಕಹಳೆ
ಮಂಗಳೂರು, ಅಕ್ಟೋಬರ್ 30: ಕರಾವಳಿಯಲ್ಲಿ ಮತ್ತೆ ಕೊಂಬು-ಕಹಳೆ, ಡೋಲಿನ ಸದ್ದು ಮತ್ತೆ ಮೊಳಗಲಾರಂಭಿಸಿದೆ. ನಿಷೇಧದ ಕರಿ ಛಾಯೆಯ ನಡುವೆ ಒಂದುವರೆ ವರ್ಷದ ಹಿಂದೆ ನಿಂತು ಹೋಗಿದ್ದ ಅಪ್ಪಟ ಜನಪದ ಕ್ರೀಡೆ ಕಂಬಳಕ್ಕೆ ಕರಾವಳಿಯಲ್ಲಿ ಮರು ಚಾಲನೆ ಸಿಕ್ಕಿದೆ.
ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಲ್ಲಿ ನಿನ್ನೆ ಹೊನಲು ಬೆಳಕಿನ ನೇತ್ರಾವತಿ-ಶರಾವತಿ ಜೋಡು ಕೆರೆ ಕಂಬಳ ವೈಭವದಿಂದ ನಡೆದಿದೆ.
ಬೆಳ್ತಂಗಡಿಯ ಕಡಿರುದ್ಯಾವರ ದಲ್ಲಿ ನಡೆಯುವ ನೇತ್ರಾವತಿ-ಶರಾವತಿ ಜೋಡುಕೆರೆ ಕಂಬಳ 8 ವರ್ಷದ ಹಿಂದೆ ನಡೆದು ಬಳಿಕ ಕಾರಣಾಂತರಗಳಿಂದ ನಿಂತು ಹೋಗಿತ್ತು. ಈ ಬಾರಿ ಮತ್ತೆ ಈ ಕಂಬಳ ಆರಂಭಗೊಂಡಿದ್ದು ಕಂಬಳಕ್ಕೆಂದು ವಿಶೇಷ ಕೆರೆ ನಿರ್ಮಿಸಲಾಗಿದೆ.

53 ಜೋಡಿ ಕೋಣ ಭಾಗಿ
ಭಾನುವಾರ ನಡೆದ ಹೊನಲು ಬೆಳಕಿನ ನೇತ್ರಾವತಿ-ಶರಾವತಿ ಜೋಡು ಕೆರೆ ಕಂಬಳದಲ್ಲಿ 53 ಜೋಡಿ ಕೋಣಗಳು ಭಾಗವಹಿಸಿದ್ದವು. ಹಗ್ಗ ಕಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ಅಡ್ಡ ಹಲಗೆ, ನೇಗಿಲು ಕಿರಿಯ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು.

ಒಂದೂವರೆ ವರ್ಷದ ಬಳಿಕ ಓಡಿದ ಕೋಣ
ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದ ಕಂಬಳ ಕರಾವಳಿಯ ಕೊನೆಯ ಕಂಬಳವಾಗಿತ್ತು .2015-16 ರ ಮಾರ್ಚ್ 14 ರಂದು ಈ ಕಂಬಳ ನಡೆದಿತ್ತು. ಇದೀಗ ಕಂಬಳಕ್ಕೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ನಿಷೇಧಾಜ್ಞೆ ತೆರವಾದ ಕಾರಣ ಕಡಿರುದ್ಯಾವರದಲ್ಲಿ ಭಾನುವಾರ ಕಂಬಳ ಆಯೋಜಿಸಲಾಗಿತ್ತು .

ರಂಜನ್ ಗೌಡ ಸಾರಥ್ಯದಲ್ಲಿ ಕಂಬಳ
ಬೆಳ್ತಂಗಡಿ ತಾಲೂಕಿನ ಕಂಬಳ ಸಮಿತಿಯ ಗೌರವಾಧ್ಯಕ್ಷ ರಂಜನ್ ಜಿ ಗೌಡ ಅವರ ಸಾರಥ್ಯದಲ್ಲಿ ನಡೆದ ಈ ಕಂಬಳವನ್ನು ಕಂಬಳ ತೀರ್ಪುಗಾರರಾದ ಸದೀಶ್ ಕುಮಾರ್ ಆರಿಗ ಉದ್ಘಾಟಿಸಿದರು .

ನ. 11ರಂದು ವಿಜಯೋತ್ಸವ ಕಂಬಳ
ಕಂಬಳದ ಮೇಲೆ ಹೇರಲಾಗಿದ್ದ ನಿಷೇಧಾಜ್ಞೆ ತೆರವಾದ ಬಳಿಕ ವಿಜಯೋತ್ಸವದ ಕಂಬಳ ಹಮ್ಮಿಕೊಳ್ಳಲಾಗಿದ್ದು ಇದೇ ನವೆಂಬರ್ 11 ಮತ್ತು 12 ರಂದು ಮೂಡಬಿದ್ರೆಯಲ್ಲಿ ಈ ಕಂಬಳ ನಡೆಯಲಿದೆ. ತುಳುನಾಡಿನ ಬಹುನಿರೀಕ್ಷಿತ ಈ ಮೂಡುಬಿದಿರೆಯ ಕೋಟಿ ಚೆನ್ನಯ್ಯ ವಿಜಯೋತ್ಸವ ಕಂಬಳಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಸದಾನಂದ ಗೌಡ ಸೇರಿದಂತೆ ಹಲವಾರು ಮುಖಂಡರು ಸೆಲೆಬ್ರಿಟಿಗಳು ಆಗಮಿಸುವ ನಿರೀಕ್ಷೆಯಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications