ಮಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ
ಮಂಗಳೂರು, ಆಗಸ್ಟ್ 14: ಮರಾಠ ದೊರೆ ಛತ್ರಪತಿ ಶಿವಾಜಿ ಮಹಾರಾಜ್ ಅವರ ಭವ್ಯ ಪ್ರತಿಮೆ ಮಂಗಳೂರಿನಲ್ಲಿ ಅನಾವರಣಗೊಳಿಸಲಾಗಿದೆ.
ಮಂಗಳೂರಿನ ಬೆಂಗ್ರೆ ಕಡಲ ತೀರದ ಸುಂದರ ಪರಿಸರದಲ್ಲಿ ಈ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.
ಪ್ರತಿಮೆಯನ್ನು ಮಹಾರಾಷ್ಟ್ರದ ಗೃಹ, ಗ್ರಾಮೀಣ, ಹಣಕಾಸು ಮತ್ತು ಯೋಜನೆ ಸಚಿವ ದೀಪಕ್ ವಸಂತ್ ರಾವ್ ಕೆಸರ್ ಕರ್ ಅನಾವರಣಗೊಳಿಸಿದರು .

ಹಿಂದೂ ಸಂಘಟನೆಗಳಿಂದ ಪ್ರತಿಷ್ಠಾಪನೆ
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಬೆಂಗ್ರೆ ಘಟಕ ಈ ಕಾರ್ಯಕ್ರಮವನ್ನು ಆಯೋಜಿಸಿದ್ದವು.

ಶಿವಾಜಿ ಮಹಾರಾಜರ ಗುಣಗಾನ
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ದೀಪಕ್ ವಸಂತ್ ರಾವ್ ಕೆಸರ್ ಕರ್ "ದೆಹಲಿಯಲ್ಲಿ ಔರಂಗಜೇಬ್ ಹಾಗೂ ಬಿಜಾಪುರದ ಸುಲ್ತಾನರನ್ನು ಕೆಳಗಿಳಿಸಲು ಶಿವಾಜಿ ಮಹಾರಾಜರು ಬರಬೇಕಾಯಿತು," ಎಂದರು.

ದಕ್ಷಿಣಕ್ಕೆ ಶಿವಾಜಿ ಪಾದಾರ್ಪಣೆ
"ಹಿಂದೂ ಸಾಮ್ರಾಜ್ಯದ ಪುನರ್ ಸ್ಥಾಪನೆ ಮಾಡಿದ ಛತ್ರಪತಿ ಶಿವಾಜಿ ಮಹಾರಾಜರ ಪಾದಾರ್ಪಣೆ ದಕ್ಷಿಣಕ್ಕೆ ಆಗಿರುವುದು ಸಂತಸ ತಂದಿದೆ," ಎಂದು ದೀಪಕ್ ವಸಂತ್ ರಾವ್ ಕೆಸರ್ ಕರ್ ಹೇಳಿದರು.

ಡಾ ಕಲ್ಲಡ್ಕ ಪ್ರಭಾಕರ ಭಟ್ ರಿಗೆ ವಂದನೆ
"ಮಹಾರಾಷ್ಟ್ರದಲ್ಲಿ ಬಾಳಾಸಾಹೇಬ್ ಠಾಕ್ರೆ ಅವರನ್ನು ಹೇಗೆ ಮೊದಲಿಗೆ ನೆನಪಿಸುತ್ತವೆಯೋ ಹಾಗೆ ಕರ್ನಾಟಕದಲ್ಲಿ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನಾನು ವಂದಿಸುತ್ತೇನೆ," ಎಂದು ವಸಂತ್ ರಾವ್ ಹೇಳಿದರು.

ಡಾ. ಕಲ್ಲಡ್ಕ ಪ್ರಭಾಕರ ಭಟ್ ಉಪಸ್ಥಿತಿ
ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ , ಭಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಶರಣ್ ಪಂಪ್ ವೆಲ್ , ವಿಶ್ವ ಹಿಂದೂ ಪರಿಷತ್ ನ ದಕ್ಷಿಣ ಪ್ರಾಂತ್ಯ ಕಾರ್ಯಾಧ್ಯಕ್ಷ ಎಂ. ಬಿ ಪುರಾಣಿಕ್ ಮತ್ತಿತರರು ಉಪಸ್ಥಿತರಿದ್ದರು .
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications