ಗಾಂಜಾ ಸಾಗಿಸಿ, ಸಿಕ್ಕಿಬಿದ್ದ ಮಂಗಳೂರಿನ ಖದೀಮರು
ಒಡಿಶಾದಿಂದ ಮಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಇಂದು ಮಂಗಳೂರಿನಲ್ಲಿ ಬಂಧಿಸಲಾಗಿದ್ದು, ಇವರಿಂದ ನಾಲ್ಕು ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು, ಮೇ 25: ಒಡಿಶಾದಿಂದ ಮಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಕೇಂದ್ರ ಉಪ ವಿಭಾಗದ ಎಸಿಪಿ ಉದಯ ನಾಯಕ್ ನೇತೃತ್ವದ ಪೊಲೀಸ್ ತಂಡ ಇಂದು ಬಂಧಿಸಿದೆ. ಆರೋಪಿಗಳಿಂದ ಮೊಬೈಲ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ.
ಒಡಿಶಾದ ಶಾಂತನು ಕುಮಾರ್ ಶಾಹು (20) ಹಾಗೂ ಪಣಂಬೂರು ಮೀನಕಳಿಯದ ವಿಕ್ರಮ್ ಯಾನೆ ವಿಕ್ರಮ್ ಯಾನೆ ಜಯರಾಮ್ (27) ಬಂಧಿತ ಆರೋಪಿಗಳು.[ಮಂಗಳೂರು ಆಕ್ಸಿಸ್ ಬ್ಯಾಂಕ್ ಹಣ ದರೋಡೆ: ಮತ್ತಿಬ್ಬರ ಬಂಧನ]

ಆರೋಪಿಗಳನ್ನು ಬುಧವಾರ ನಗರದ ಮಂಗಳಾ ಕ್ರೀಡಾಂಗಣದ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಸಂದರ್ಭ ಸೆರೆ ಹಿಡಿಯಲಾಗಿದ್ದು, ಬಂಧಿತರಿಂದ 2.5 ಲಕ್ಷ ರೂ. ಮೌಲ್ಯದ 5 ಕೆಜಿ ಗಾಂಜಾ, 12 ಸಾವಿರ ಮೌಲ್ಯದ ಎರಡು ಮೊಬೈಲ್, ಗಾಂಜಾ ತೂಕ ಮಾಡುವ ಮಾಪಕ, ರೂ.500 ನಗದು ಹಣ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ರಿಕ್ಷಾ (KA 19 AB 4458) ಸೇರಿದಂತೆ ಸುಮಾರು 4,37,500 ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಉದಯ ನಾಯಕ್ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬರ್ಕೆ ಠಾಣೆಯ ಇನ್ಸ್ಪೆಕ್ಟರ್ ರಾಜೇಶ್ ಎ.ಕೆ. ಹಾಗೂ ಬರ್ಕೆ ಠಾಣೆಯ ಅಪರಾಧ ವಿಭಾಗದ ಪಿ.ಎಸ್.ಐ ನರೇಂದ್ರ ಮತ್ತು ಎ.ಎಸ್.ಐ ಪ್ರಕಾಶ್, ಸಿಬ್ಬಂದಿಗಳಾದ ಗಣೇಶ್, ರಾಜೇಶ್ ಅತ್ತಾವರ, ಕಿಸೋರ್ ಕೋಟ್ಯಾನ್, ಕಿಶೋರ್ ಪೂಜಾರಿ, ನಾಗರಾಜ, ಮಹೇಶ್ ಪಾಟೀಲ್ ಮುಂತಾದವರು ಪಾಲ್ಗೊಂಡಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications