ಅ.28ರಂದು ಎಡನೀರು ಮಠದ ನೂತನ ಶ್ರೀಗಳ ಪೀಠಾರೋಹಣ ಕಾರ್ಯಕ್ರಮ
ಕಾಸರಗೋಡು, ಅಕ್ಟೋಬರ್ 28: ಕಾಸರಗೋಡಿನ ಎಡನೀರು ಮಠದ ನೂತನ ಮಠಾಧೀಶರಾಗಿ ನಿಯುಕ್ತಿಗೊಂಡಿರುವ ಶ್ರೀ ಸಚ್ಚಿದಾನಂದ ಭಾರತಿಗಳ ಪೀಠಾರೋಹಣ ವಿಧಿ ವಿಧಾನಗಳು ಅ.28ರ ಬುಧವಾರದಂದು ನಡೆಯಲಿದೆ.
ಬೆಳಿಗ್ಗೆ ಗಣಪತಿ ಹವನ, ಚಂಡಿಕಾ ಹೋಮ, ಪಟ್ಟದ ದೇವರಿಗೆ ಪೂಜೆ, ಅಭಿಷೇಕ ಪೂಜೆ, ಬೆಳಿಗ್ಗೆ 10 ರ ಬಳಿಕ ಪೀಠಾರೋಹಣ, ಮಧ್ಯಾಹ್ನ ಮಧ್ಯಾಹ್ನ ಮಹಾಪೂಜೆ ನಡೆಯಲಿದೆ.
ಸಮಾರಂಭದಲ್ಲಿ ನಾಡಿನ ಉದ್ದಗಲದ ವಿವಿಧ ಮಠಾಧೀಶರು, ಧಾರ್ಮಿಕ, ಸಾಂಸ್ಕೃತಿಕ , ಸಾಮಾಜಿಕ ಮುಂದಾಳುಗಳು ಪಾಲ್ಗೊಳ್ಳಲಿದ್ದು, ಸರ್ಕಾರದ ಕೋವಿಡ್ ನಿಯಮಗಳ ಪ್ರಕಾರ ಕಾರ್ಯಕ್ರಮ ನಡೆಯಲಿದೆ.

ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಗಳ ಪೀಠಾರೋಹಣ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಲಿದ್ದಾರೆ.
ಕಾಸರಗೋಡಿನ ಎಡನೀರು ಮಠದ ನೂತನ ಮಠಾಧೀಶರಾಗಿ ನಿಯುಕ್ತಿಗೊಂಡಿರುವ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಸೋಮವಾರ ಕಾಂಚಿ ಪೀಠದಲ್ಲಿ ದೀಕ್ಷೆ ಸ್ವೀಕರಿಸಿ ಮಂಗಳವಾರ ಎಡನೀರು ಪುರ ಪ್ರವೇಶ ಮಾಡಿದರು.

ಸೋಮವಾರ ಕಾಂಚಿ ಜಗದ್ಗುರು ಪೀಠದಲ್ಲಿ ನಡೆದ ಸಮಾರಂಭದಲ್ಲಿ ಭಾರತಿ ವಿಜಯೇಂದ್ರ ಸರಸ್ವತಿ ಶ್ರೀಗಳು ದೀಕ್ಷೆ ನೀಡಿದರು. ಬಳಿಕ ಸಂಜೆ ಬೆಂಗಳೂರಲ್ಲಿರುವ ಶಾಖಾ ಮಠದಲ್ಲಿ ತಂಗಿದ್ದರು. ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಮಂಗಳವಾರ ಮಧ್ಯಾಹ್ನ 12ರ ವೇಳೆಗೆ ಶ್ರೀಗಳು ಎಡನೀರಿಗೆ ಆಗಮಿಸಿದರು.
ಈ ಸಂದರ್ಭದಲ್ಲಿ ಶ್ರೀಗಳಿಗೆ ಭವ್ಯ ಸ್ವಾಗತ ನೀಡಲಾಯಿತು. ಪುರ ಪ್ರವೇಶದ ಬಳಿಕ ಪಟ್ಟದ ದೇವರ ಪೂಜೆ, ಬಳಿಕ ಎಡನೀರು ವಿಷ್ಣುಮಂಗಲ ದೇವಸ್ಥಾನ ಭೇಟಿ, ನವಗ್ರಹ ಶಾಂತಿ ಹವನದ ಪೂರ್ಣಾಹುತಿಯಲ್ಲಿ ಭಾಗವಹಿಸಿ ಮರಳಿ ಮಠಕ್ಕೆ ಹಿಂತಿರುಗಿದರು.

ಈ ಸಂದರ್ಭದಲ್ಲಿ ತಂತ್ರಿವರ್ಯರು, ವೈದಿಕರು, ಸಂಸದ ರಾಜಮೋಹನ ಉಣ್ಣಿತ್ತಾನ್, ಉದುಮ ಶಾಸಕ ಕೆ.ಕುಂಞ ರಾಮನ್, ಮುರಳೀ ತಂತ್ರಿ, ರವೀಶ ತಂತ್ರಿ ಕುಂಟಾರು, ಶ್ರೀಶದೇವ ಪೂಜಿತ್ತಾಯ, ಪೀಠಾರೋಹಣ ಸಮಿತಿ ಕಾರ್ಯಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ಮೊದಲಾದವರು ಉಪಸ್ಥಿತರಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications