ಸಿದ್ಧಾರ್ಥ ನಾಪತ್ತೆಯಾದ ಜಾಗದಿಂದ ಒಂದೇ ಕಿ.ಮೀ ದೂರದಲ್ಲಿ ಅರಬ್ಬೀ ಸಮುದ್ರ
Recommended Video
ಮಂಗಳೂರು, ಜುಲೈ 30: ಕಾಫೀ ಡೇ ಮಾಲೀಕ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಳಿಯ ವಿ ಜಿ ಸಿದ್ಧಾರ್ಥ ನಾಪತ್ತೆಯಾಗಿರುವ ಪ್ರಕರಣದ ನಿಗೂಢತೆ ಮುಂದುವರಿದಿದೆ.
ಮಂಗಳೂರು ಹೊರವಲಯದ ಕಲ್ಲಾಪು - ಹೆಕ್ಕೂರು ವ್ಯಾಪ್ತಿಯ ನೇತ್ರಾವತಿ ನದಿ ಸೇತುವೆಯ ಸ್ಥಳದಿಂದ ಸಿದ್ಧಾರ್ಥ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಸ್ಥಳ ಶೋಧ ಕಾರ್ಯಕ್ಕೆ ಅತ್ಯಂತ ಸವಾಲಿನ ಜಾಗ ಎನ್ನುವುದು ಸ್ಥಳೀಯರ ಅಭಿಪ್ರಾಯ.
ಯಾಕೆಂದರೆ, ಇಲ್ಲಿಂದ ಒಂದು ಕಿಲೋಮೀಟರ್ ದೂರದಲ್ಲಿ ಅರಬ್ಬೀ ಸಮುದ್ರವಿದ್ದು, ನೀರಿನ ಒಳಸುಳಿವು ತುಂಬಾ ಹೆಚ್ಚಾಗಿರುತ್ತದೆ. ಜೊತೆಗೆ, ಸಮುದ್ರಕ್ಕೆ ಹತ್ತಿರದ ಪ್ರದೇಶವಾಗಿರುವುದರಿಂದ (ಅಳಿವೆಬಾಗಿಲು) , ನೀರಿನ ಹರಿವು ತೀರಾ ರಭಸದಿಂದ ಕೂಡಿರುತ್ತದೆ.

ಕೆಎ-03-ಎನ್ಸಿ-2592 ನೊಂದಣಿಯ ಇನ್ನೋವಾ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಸಿದ್ಧಾರ್ಥ ಪ್ರಯಾಣಿಸುತ್ತಿದ್ದರು. ಸುಮಾರು ಇನ್ನೂರಕ್ಕೂ ಹೆಚ್ಚು ಜನ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಈ ಹಿಂದೆ ಮಾಸ್ತಿಗುಡಿ ಸಿನಿಮಾ ಚಿತ್ರೀಕರಣದ ವೇಳೆ ಇಬ್ಬರು ಕಲಾವಿದರು ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಎಷ್ಟೇ ಶೋಧ ನಡೆಸಿದರೂ, ಇಬ್ಬರ ಶವ ಪತ್ತೆಯಾಗಿರಲಿಲ್ಲ. ಕೊನೆಗೆ, ಮಂಗಳೂರಿನ ಬೆಂಗ್ರೆ ಮುಳುಗುತಜ್ಞರ ತಂಡ ಆಗಮಿಸಿ ಶವವನ್ನು ಮೇಲೆಕ್ಕೆತ್ತಿತ್ತು.
ಬೆಂಗ್ರೆ ತಂಡ. ವೃತ್ತಿಪರ ಈಜುಗಾರರು, ಎನ್ ಡಿ ಆರ್ ಎಫ್ ಜೊತೆ ಸೇರಿ ಶೋಧಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಭಾಗದಲ್ಲಿ ಮಳೆ ಸುರಿಯುತ್ತಿರುವುದರಿಂದ ಶೋಧ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications