ಕರ್ನಾಟಕದಲ್ಲಿ ಆತಂಕಕಾರಿ ಬೆಳವಣಿಗೆ: ರಾಜ್ಯದಲ್ಲಿದ್ದಾರೆ 49 ಸಾವಿರ ಅಪ್ರಾಪ್ತ ಗರ್ಭಿಣಿಯರು
ಮಂಗಳೂರು, ಜನವರಿ 16: ರಾಜ್ಯದಲ್ಲಿ ಸುಮಾರು 49 ಸಾವಿರದಷ್ಟು ಮಂದಿ ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಕಳವಳ ವ್ಯಕ್ತಪಡಿಸಿದ್ದಾರೆ.
ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಈ ಸಂಖ್ಯೆ ಆತಂಕಕಾರಿಯಾಗಿದ್ದು, ಈ ಸಂಖ್ಯೆ ಅತ್ಯಂತ ಆತಂಕಾರಿಯಾಗಿದ್ದು, ಮತ್ತೆ ಡಿಎಚ್ಒ ಹಾಗೂ ಆಶಾ - ಅಂಗನವಾಡಿ ಕಾರ್ಯಕರ್ತೆಯರ ಮಟ್ಟದಲ್ಲಿ ರೀ ಸರ್ವೇ ಮಾಡಲಾಗುತ್ತದೆ. ಪರಿಶೀಲನೆ ಮಾಡುವ ಸಂದರ್ಭ ಅಪ್ರಾಪ್ತ ಗರ್ಭಿಣಿಯರಲ್ಲಿಯೇ ಕೂಲಂಕಷವಾಗಿ ಮಾಹಿತಿ ಪಡೆದು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ, ಮಂಡ್ಯ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ಲಭ್ಯವಾಗಿದೆ. ಹದಿನೆಂಟು ತುಂಬುವ ಮೊದಲೇ ವಿವಾಹ, ಅತ್ಯಾಚಾರ, ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ಹೀಗೆ ಹಲವಾರು ರೀತಿಯಲ್ಲಿ ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿರುವ ಪ್ರಕರಣಗಳು ಬಯಲಾಗುತ್ತಿದೆ. ಇಂತಹ ಪ್ರಕರಣಗಳು ಬಹಳ ಸೂಕ್ಷ್ಮವಾಗಿದ್ದು, ಸಂತ್ರಸ್ತ ಬಾಲಕಿಯರಿಗೆ ಹೆಚ್ಚಿನ ಮಟ್ಟದ ಸಾಂತ್ವನದ ಅಗತ್ಯವಿದೆ.
ಕೆಲವೊಂದು ಪ್ರಕರಣಗಳಲ್ಲಿ ಸಂತ್ರಸ್ತೆಯರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಗಳೂ ಬೆಳಕಿಗೆ ಬಂದಿದೆ. ಇಂತಹ ಪ್ರಕರಣಗಳನ್ನು ಮುಚ್ಚಿಟ್ಟ ವಿಚಾರದಲ್ಲಿ ಈಗಾಲೇ 6 - 7 ವೈದ್ಯರ ಮೇಲೆಯೇ ಪ್ರಕರಣ ದಾಖಲಾಗಿದೆ. ಅಲ್ಲದೆ ಒಂದೆರಡು ನರ್ಸಿಂಗ್ ಹೋಮ್ಗಳನ್ನೇ ಮುಚ್ಚಲಾಗಿದೆ ಎಂದರು.

ಆದ್ದರಿಂದ ಮಕ್ಕಳಿಗೆ 18ವರ್ಷದವರೆಗೆ ಕಡ್ಡಾಯವಾಗಿ ಶಿಕ್ಷಣ ಪಡೆಯುವಂತೆ ಮಾಡಬೇಕು. ಅದಕ್ಕಾಗಿ ಡಿಡಿಪಿಐ ಹಾಗೂ ಬಿಇಒ ಅವರುಗಳು ಮಕ್ಕಳು 18ವರ್ಷಗಳವರೆಗೆ ಶಾಲೆ - ಕಾಲೇಜು ತೊರೆಯದಂತೆ ಗಮನಹರಿಸಬೇಕು. ಪರಿಣಾಮ 90 ಪ್ರತಿಶತ ಬಾಲ್ಯ ಕಾರ್ಮಿಕ, ಬಾಲ್ಯ ವಿವಾಹವನ್ನು ತಪ್ಪಿಸಿದಂತಾಗುತ್ತದೆ ಎಂದು ನಾಗಣ್ಣ ಗೌಡ ಹೇಳಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications