ನನ್ನನ್ನು ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ಮಾಡುವುದು ಸರಿಯಲ್ಲ: ಆಳ್ವ
ಮಂಗಳೂರು, ಜುಲೈ 29 : ಜವಾಬ್ದಾರಿಯುತ ಸ್ಥಾನದಲ್ಲಿರುವ ನನ್ನನ್ನು ಹಾಗೂ ಕಳೆದ ಎರಡೂವರೆ ದಶಕಗಳಿಂದ ಪಾರದರ್ಶಕವಾಗಿ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಸಂಸ್ಥೆಯನ್ನು ಟಾರ್ಗೆಟ್ ಮಾಡುವುದರ ಮೂಲಕ ನಮಗೆ ಮಾನಸಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪ್ರತಿಕ್ರಿಯಿಸಿದ್ದಾರೆ.
ಕಾವ್ಯಾ ಸಾವಿನ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಯಾವುದೇ ಅಪರಾಧ ನಡೆದರೆ ಅದು ಪೊಲೀಸ್ ತನಿಖೆಯಾಗಬೇಕು. ಆದರೆ ಸಮಾಜದಲ್ಲಿ ಗೊಂದಲ ಸೃಷ್ಟಿಸಬಾರದು ಎಂದಿದ್ದಾರೆ.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಬ್ಯಾಡ್ಮಿಂಟನ್ ಕ್ರೀಡಾಪುಟು ವಿದ್ಯಾರ್ಥಿನಿ ಕಾವ್ಯಾಳ ಸಂಶಯಾಸ್ಪದ ಸಾವಿನ ಕುರಿತು ಆಡಳಿತ ವ್ಯವಸ್ಥೆಯು ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದ್ದು, ಕಾವ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ, ಮಾಧ್ಯಮ ಅಥವಾ ವೈಯಕ್ತಿಕವಾಗಿ ಯಾರೇ ತನಿಖೆ ಮುಂದಾದರೂ ಯಾವುದೇ ತನಿಖೆಗೆ ಸಂಸ್ಥೆ ಸಿದ್ಧವಿದೆ. ನಮ್ಮ ಸಂಸ್ಥೆಯಲ್ಲಿ ಕೊಲೆ ಪ್ರಕರಣ ಎಂದಿಗೂ ನಡೆದಿಲ್ಲ ಎಂದರು.
ಸಂಸ್ಥೆಯಲ್ಲಿ ಕಲಿಯುತ್ತಿರುವ 26 ಸಾವಿರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ನಮ್ಮನ್ನೇ ನಂಬಿದ್ದಾರೆ. ಮಾಧ್ಯಮ ಅಥವಾ ವೈಯಕ್ತಿಕವಾಗಿ ಯಾರೇ ತನಿಖೆ ಮುಂದಾದರೂ ಯಾವುದೇ ತನಿಖೆಗೆ ಸಂಸ್ಥೆ ಸಿದ್ಧವಿದೆ. ಕಾವ್ಯಾ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾದ ರೀತಿಯಲ್ಲಿ ಆಗಿ, ಶೀಘ್ರವೇ ಸತ್ಯಾಂಶ ಹೊರಬರಲಿ ಎಂದು ಮೋಹನ್ ಆಳ್ವ ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications