ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ಬಗ್ಗೆ ತನಿಖೆಗೆ ಆಗ್ರಹ
ಮಂಗಳೂರು, ಮೇ 07:ಇತ್ತೀಚೆಗೆ ನಿಧನರಾದ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರ ಸಾವಿನ ಕುರಿತು ಮತ್ತೆ ಸಂಶಯ ವ್ಯಕ್ತವಾಗಿದೆ.ದಕ್ಷ ಅಧಿಕಾರಿಯೆಂದೇ ಗುರುತಿಸಿಕೊಂಡಿದ್ದ ಮಧುಕರ್ ಶೆಟ್ಟಿ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆಯಾಗಬೇಕೆಂಬ ಆಗ್ರಹ ಕೇಳಿಬಂದಿದೆ.
ಮಧುಕರ್ ಶೆಟ್ಟಿ ಅವರ ಸಾವಿನ ವಿಚಾರದಲ್ಲಿ ರಾಜ್ಯ ಸರಕಾರ ದೇವಿ ಶೆಟ್ಟಿ ನೇತೃತ್ವದಲ್ಲಿ ನಾಲ್ವರ ತಜ್ಞರ ತಂಡ ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿ ಲೋಪ ಆಗಿದ್ದಲ್ಲಿ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಪಿ ಚೆಂಗಪ್ಪ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಚೆಂಗಪ್ಪ, ಮಧುಕರ್ ಶೆಟ್ಟಿ ಅವರಿಗೆ ಆರಂಭದಲ್ಲಿ ಎಚ್1 ಎನ್ 1 ರೋಗವೆಂದು ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕ ನೆಗೆಟಿವ್ ಬಂದ ಕಾರಣ ಚಿಕಿತ್ಸೆ ಬದಲಿಸಲಾಗಿತ್ತು. ಕೊನೆಗೆ ಶ್ವಾಸಕೋಶದ ಇನ್ಫೆಕ್ಷನ್ ಎಂದು ಹೈದರಾಬಾದ್ ಕಾಂಟಿನೆಂಟಲ್ ಆಸ್ಪತ್ರೆಯ ವೈದ್ಯರು ಹೇಳಿದ್ದರು. ಕೊನೆಗೆ ಸಾವು ಯಾಕಾಯ್ತು ಎನ್ನುವುದನ್ನು ವೈದ್ಯರು ಖಚಿತಪಡಿಸಿಲ್ಲ ಎಂದು ಹೇಳಿದರು.

ಈ ಬಗ್ಗೆ ತನಿಖೆ ನಡೆಸಿ, ತಜ್ಞರ ಸಮಿತಿ ಖಚಿತ ಅಭಿಪ್ರಾಯ ನೀಡಬೇಕೆಂದು ಒತ್ತಾಯಿಸಿದ ಅವರು ಮಧುಕರ್ ಶೆಟ್ಟಿ ಹೈದರಾಬಾದಿನ ಪೊಲೀಸ್ ಅಕಾಡೆಮಿಯಲ್ಲಿ ಡೆಪ್ಯುಟಿ ಡೈರೆಕ್ಟರ್ ಆಗಿದ್ದರು. ಆಗ ಜ್ವರದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಮಧುಕರ್ ಶೆಟ್ಟಿ 2018ರ ಡಿಸೆಂಬರ್ 28ರಂದು ಸಾವನ್ನಪ್ಪಿದ್ದರು. ಲೋಕಾಯುಕ್ತ ಎಸ್ಪಿ ಆಗಿದ್ದಾಗ ಜನಾರ್ದನ ರೆಡ್ಡಿಯ ಗಣಿ ಹಗರಣದ ಬಗ್ಗೆ ತನಿಖೆ ನಡೆಸಿ, ನಿಷ್ಪಕ್ಷಪಾತ ವರದಿ ನೀಡಿದ್ದು ಸಿಬಿಐ ಅಧಿಕಾರಿಗಳು ರೆಡ್ಡಿಯನ್ನು ಬಂಧಿಸುವಂತಾಗಿತ್ತು. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಮಧುಕರ್ ಸಾವಿನ ಬಗ್ಗೆ ಈ ಹಿಂದೆ ಕುಟುಂಬಸ್ಥರು ಮತ್ತು ಅಭಿಮಾನಿಗಳು ಸಂಶಯ ವ್ಯಕ್ತಪಡಿಸಿದ್ದರು ಎಂದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications