ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆ ಕಡಿತ ಇಲ್ಲ: ಯು ಟಿ ಖಾದರ್
ದಕ್ಷಿಣ ಕನ್ನಡ, ಸಪ್ಟೆಂಬರ್ 27: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮಕ್ಕಳಿಗೆ ಸಂತಸದ ಸುದ್ದಿಯೊಂದು ಹರಿದು ಬಂದಿದೆ. ಪ್ರಸಕ್ತ ಸಾಲಿನ ದಸರಾ ರಜೆಯಲ್ಲಿ ಯಾವುದೇ ಕಡಿತವಿರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿ ಶಾಲಾ ಮಕ್ಕಳ ದಸರಾ ರಜೆಯಲ್ಲಿ ಕಡಿತ ಇಲ್ಲ. ಅಧಿಕಾರಿಗಳ ಜೊತೆ ಚರ್ಚಿಸಿದ್ದು ರಜೆ ಕಡಿತ ಮಾಡದಂತೆ ಸೂಚಿಸಿದ್ದೇನೆ .ಪ್ರತೀ ವರ್ಷದಂತೆ ಈ ಬಾರಿಯೂ ಪೂರ್ತಿ ರಜೆ ಇರಲಿದೆ.ಅಕ್ಟೋಬರ್ 7ರಿಂದ 21ರ ವರೆಗೆ ನಿಗದಿಯಾಗದಂತೆ ದಸರಾ ರಜೆ ಇರಲಿದೆ ಎಂದು ಅವರು ತಿಳಿಸಿದರು.
ಶಾಲೆಗಳ ದಸರಾ ರಜೆ ಕಡಿತ : 14 ದಿನ ಮಾತ್ರ ರಜೆ!
ಭಾರೀ ಮಳೆಯ ಹಿನ್ನೆಲೆಯಲ್ಲಿ ಹಲವಾರು ದಿನ ಶಾಲೆಗೆ ರಜೆ ಘೋಷಸಿದ್ದ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ರಜೆ ಕಡಿತಕ್ಕೆ ಜಿಲ್ಲಾಡಾಳಿತ ಮುಂದಾಗಿತ್ತು. ಅದರೆ ಅಧಿಕಾರಿಗಳ ಜೊತೆ ಚರ್ಚಿಸಿದ್ದು ರಜೆ ಕಡಿತ ಮಾಡದಂತೆ ಸೂಚಿಸಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.
ಮೂಲರಪಟ್ಣ ಸೇತುವೆ ಕುಸಿತ ಪ್ರದೇಶವನ್ನು ದುರಸ್ತಿ ಮಾಡುವ ಬದಲು ಆ ಜಾಗದಲ್ಲಿ ಹೊಸದಾದ ಸೇತುವೆಯನ್ನೇ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ ಅವರು ಈ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಬಾರಿ ಮೈಸೂರು ದಸರೆ ಕಾಮಗಾರಿಗೆ ಬೇಕು ಬರೋಬ್ಬರಿ 27 ಕೋಟಿ!
ಗುರುಪುರದಲ್ಲಿ ಸೇತುವೆಯನ್ನು ಹೊಸದಾಗಿ ನಿರ್ಮಿಸಲು ಎನ್ ಎಚ್ಎ ಐ ನಿಂದ 35 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾರಂಭಿಸಲಾಗುತ್ತಿದೆ. ಗುರುಪುರದ ನೂತನ ಸೇತುವೆ ನಿರ್ಮಾಣವಾಗುವವರೆಗೂ ಹಳೆಯ ಸೇತುವೆ ಮೇಲೆ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶವಿದೆ ಎಂದು ಅವರು ಹೇಳಿದರು.