ಈ ಬಾರಿ ಧರ್ಮಸ್ಥಳದ ಶಿವರಾತ್ರಿ ಪಾದಯಾತ್ರೆ ಪ್ಲಾಸ್ಟಿಕ್ ಮುಕ್ತ: ಭಕ್ತರಿಗೆ ಸಚಿವರ ಮನವಿ
ಮಂಗಳೂರು, ಫೆಬ್ರವರಿ 05: ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಸಮುದಾಯ ಆರೋಗ್ಯಕ್ಕೆ ಮಾರಕವಾಗಿದೆ. ಭೂಗ್ರಹ ರಕ್ಷಣೆಗೆ ಎಲ್ಲ ಪ್ರಜ್ಞಾವಂತ ನಾಗರಿಕರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಸಂಕಲ್ಪ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.
ಸೋಮವಾರ ಧರ್ಮಸ್ಥಳದಲ್ಲಿ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಫಲಕ ಅನಾವರಣ ಮಾಡಿ ಮಾತನಾಡಿದ ಅವರು, ಮರುಬಳಕೆ ಪ್ರವೃತ್ತಿ ಜನರಲ್ಲಿ ಕಡಿಮೆ ಆಗಿದ್ದು, ತ್ಯಾಜ್ಯ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತ್ಯಾಜ್ಯ ವಿಲೇವಾರಿ ಸ್ಥಳೀಯ ಸಂಸ್ಥೆಗಳಿಗೆ ಸವಾಲಾಗಿದೆ ಎಂದರು.

ಪ್ಲಾಸ್ಟಿಕ್ ತ್ಯಾಜ್ಯ ದೊಡ್ಡ ಸವಾಲಾಗಿದ್ದು, ಜನರಲ್ಲಿ ಜಾಗೃತಿ ಮೂಡದ ಹೊರತು ಇದಕ್ಕೆ ಪರಿಹಾರ ದೊರಕುವುದು ದುರ್ಲಭ. ಅರಣ್ಯ ನಾಶ, ಪ್ರಕೃತಿಯ ಮೇಲಿನ ದಬ್ಬಾಳಿಕೆಯಿಂದ ಇಂದು ಜಾಗತಿಕ ತಾಪಮಾನ ಏರಿಕೆ ಆಗುತ್ತಿದೆ, ಹವಾಮಾನ ವೈಪರೀತ್ಯದಿಂದ ಜಾಗತಿಕ ಸಮಸ್ಯೆಗಳು ತಲೆದೋರುತ್ತಿವೆ, ಅಭಿವೃದ್ಧಿಯೂ ಆಗಬೇಕು, ಪ್ರಕೃತಿಯೂ ಉಳಿಯಬೇಕು ಹೀಗಾಗಿ ಸುಸ್ಥಿರ ಅಭಿವೃದ್ಧಿ ಇಂದಿನ ಅತ್ಯಗತ್ಯವಾಗಿದೆ ಎಂದು ಹೇಳಿದ್ದಾರೆ.
ಆಹಾರದಲ್ಲಿ ಮಾಲಿನ್ಯ ಇದೆ, ಗಾಳಿಯಲ್ಲಿ ಮಾಲಿನ್ಯ ಇದೆ, ನೀರಿನಲ್ಲಿ ಮಾಲಿನ್ಯ ಇದೆ. ಇದರಿಂದ ಅನೇಕ ರೋಗ ರುಜಿನಗಳು ಜನರನ್ನು ಕಾಡುತ್ತಿದ್ದು, ಸಮುದಾಯ ಆರೋಗ್ಯ ರಕ್ಷಣೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿಯ ಸಂದರ್ಭದಲ್ಲಿ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಬರುತ್ತಾರೆ. ಅರಣ್ಯ ಮಾರ್ಗದಲ್ಲಿ ಬರುವಾಗ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ತಟ್ಟೆ, ಲೋಟ, ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದನ್ನು ವನ್ಯಜೀವಿಗಳು ತಿಂದು ಸಾವಿಗೀಡಾಗುತ್ತವೆ. ಹೀಗಾಗಿ ಈ ಬಾರಿ ಪಾದಯಾತ್ರೆಯಲ್ಲಿ ಬರುವ ಭಕ್ತರು ಅರಣ್ಯ ಪ್ರವೇಶಿಸುವ ಮುನ್ನ ತಪಾಸಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, 'ಧರ್ಮಸ್ಥಳ ಸ್ವಚ್ಛ ನಗರಿಯಾಗಿದ್ದು, ಇಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಶ್ರಮಿಸುತ್ತಿದ್ದೇವೆ. ಆದರೆ ಜನರಲ್ಲಿ ಸ್ವಯಂ ಪರಿಸರ ಜಾಗೃತಿ ಮೂಡಿದರೆ ಮಾತ್ರ ಇದನ್ನು ನಿಗ್ರಹಿಸಲು ಸಾಧ್ಯ .ಆಧುನಿಕ ಯಂತ್ರಗಳ ನೆರವಿನಿಂದ ತ್ಯಾಜ್ಯವನ್ನು ಸಂಸ್ಕರಿಸಿ ಪುನರ್ ಬಳಕೆ ಮಾಡಲು ಆ ಮೂಲಕ ಸುಸ್ಥಿರ ಅಭಿವೃದ್ಧಿಗೆ ಕ್ಷೇತ್ರ ಒತ್ತು ನೀಡಿದೆ' ಎಂದು ತಿಳಿಸಿದರು. ಜನರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವಂತೆ ಕರೆ ನೀಡಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications