ಈ ಚುನಾವಣೆಯೇ ರಮಾನಾಥ ರೈ ಕೊನೆಯ ಬಯಲಾಟ ಎಂದ ಹರಿಕೃಷ್ಣ ಬಂಟ್ವಾಳ
ಮಂಗಳೂರು, ಜನವರಿ 17 : ಈ ಬಾರಿಯ ಚುನಾವಣೆ ಸಚಿವ ರಮಾನಾಥ ರೈ ಅವರ ಕೊನೆಯ ಬಯಲಾಟ. ರಮಾನಾಥ ರೈ ಮಹಿಷಾಸುರನಾದರೆ, ಜನರು ದೇವಿಯ ರೂಪದಲ್ಲಿ ಅವರನ್ನು ಮುಗಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಬಿಲ್ಲವ ಸಮುದಾಯದವರಿಗೆ ಟಿಕೆಟ್ ನೀಡಲಿ ಎಂದು ಸಚಿವ ರಮಾನಾಥ ರೈ ಅವರ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಬಿಲ್ಲವರ ಬಗ್ಗೆ ಮಾತನಾಡುವ ನೈತಿಕತೆ ರಮಾನಾಥ ರೈಗಿಲ್ಲ ಎಂದು ಕಿಡಿ ಕಾರಿದರು.
ರಮಾನಾಥ ರೈ ಅವರಿಗೆ ತಾಕತ್ತಿದ್ದರೆ ಬಂಟ್ವಾಳದಲ್ಲಿ ಬಿಲ್ಲವರಿಗೆ ಸೀಟು ಕೊಡಿಸಲಿ ಎಂದು ಸವಾಲು ಹಾಕಿದರು. ಮುಸ್ಲಿಮರ ಕೃಪೆಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಈ ವರೆಗೆ ಗೆದ್ದಿದ್ದೇನೆ ಎಂದಿದ್ದ ರಮಾನಾಥ ರೈ ಈ ಬಾರಿ ಮುಸ್ಲಿಂ ಸಮುದಾಯದ ಒಬ್ಬರಿಗೆ ಬಂಟ್ವಾಳ ದಿಂದ ಸ್ಪರ್ಧಿಸಲು ಸೀಟು ಬಿಟ್ಟು ಕೊಡಲಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅವರಿಗೆ ಕಣ್ಣೀರು ಹಾಕಿಸಿದ್ದು ಸಚಿವ ರಮಾನಾಥ ರೈ ಎಂದು ಆರೋಪಿಸಿದ ಅವರು, ಈ ವರೆಗೆ ಲೋಕಸಭಾ ಚುನಾವಣೆಯಲ್ಲಿ ಪೂಜಾರಿಯನ್ನು ಸೋಲಿಸಿದ್ದು ಕೂಡ ರಮಾನಾಥ ರೈ ಎಂದು ಅವರು ಆರೋಪ ಮಾಡಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications