ಬೆಂಗ್ರೆ ಬೀಚ್ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲು ನಿರ್ಲಕ್ಷ್ಯ, ಎಎಸ್ಐ ಅಮಾನತು
ಮಂಗಳೂರು, ನವೆಂಬರ್. 30: ಮಂಗಳೂರಿನ ಬೆಂಗ್ರೆ ಬೀಚ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸದೇ ಕರ್ತವ್ಯ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ.
ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ನವೆಂಬರ್ 26 ರಂದು 376(ಡಿ), 323, 354, 506 ಐಪಿಸಿಯಂತೆ ದಾಖಲಾದ ಪ್ರಕರಣದಲ್ಲಿ ಸಂತ್ರಸ್ಥೆ ಯುವತಿ ನವೆಂಬರ್. 18 ರಂದು ತೋಟ ಬೆಂಗ್ರೆ ಪರಿಸರದಲ್ಲಿ ಯುವಕರಿಂದ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ನವೆಂಬರ್ 20 ರಂದು ದೂರು ನೀಡಲು ಹೋಗಿದ್ದರು.
ಆದರೆ ಅಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಘುರಾಮ ಹೆಗ್ಡೆಯವರು ಘಟನೆಯ ಕುರಿತು ತಕ್ಷಣಕ್ಕೆ ದೂರನ್ನು ದಾಖಲಿಸಲು ಮಾಡಲು ನಿರಾಕರಿಸಿ, ಘಟನೆ ಎಲ್ಲಿ ಸಂಭವಿಸಿದೆಯೋ ಅದೇ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಸೂಚಿಸಿದ್ದಾರೆ.

ಸಾಮೂಹಿಕ ಅತ್ಯಾಚಾರದಂತಹ ಘೋರ ಘಟನೆಯ ಪ್ರಕರಣ ದಾಖಲಿಸದೇ ಸಂತ್ರಸ್ಥೆಯನ್ನು ಹಿಂದೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಘುರಾಮ ಹೆಗ್ಡೆ ಅವರನ್ನು ಕರ್ತವ್ಯ ನಿರ್ಲಕ್ಷ ಆರೋಪದಡಿ ಸೇವೆಯಿಂದ ಅಮಾನತುಗೊಳಿಸಿ, ವಿಚಾರಣೆಗೆ ಒಳಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ರವಿಕಾಂತೇ ಗೌಡ ಆದೇಶಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications