ಧರ್ಮಸ್ಥಳದಲ್ಲಿ ಸಾವಿರಾರು ಭಕ್ತರಿಂದ ಶಿವ ನಾಮ ಸ್ಮರಣೆ, ಜಾಗರಣೆ
ಮಂಗಳೂರು, ಮಾರ್ಚ್ 05: ದಕ್ಷಿಣ ಭಾರತದ ಹೆಸರಾಂತ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಶಿವರಾತ್ರಿಯ ಜಾಗರಣೆ ಸಂಭ್ರಮದಿಂದ ಜರುಗಿದೆ.ನಾಡಿನ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮುಂಜಾನೆಯವರೆಗೂ ಶಿವರಾತ್ರಿಯ ಜಾಗರಣೆ ನಡೆಸಿದರು.
ಮೈಸೂರಿನಲ್ಲಿ ಶಿವನಾಮ ಸ್ಮರಣೆ :ತ್ರಿನೇಶ್ವರ ಸ್ವಾಮಿಗೆ ಚಿನ್ನದ ಕೊಳಗ ಧಾರಣೆ
ದೇವಳದ ಮುಂಭಾಗ ಸಾವಿರಾರು ಭಕ್ತರು ಜಾಗರಣೆ ಮಾಡಿದ್ದು, ಭಜನೆಯ ಮೂಲಕ ಶಿವನ ಸ್ತುತಿ ಮಾಡಿದ್ದಾರೆ. ದೇವಾಲಯದಲ್ಲಿ ತಡರಾತ್ರಿ ಎರಡು ಗಂಟೆಯ ವೇಳೆಗೆ ಪೂಜಾ ವಿಧಿವಿಧಾನಗಳು ಮುಗಿದ ಬಳಿಕ ಮಂಜುನಾಥ ಬೆಳ್ಳಿರಥದಲ್ಲಿ ರಥಾರೂಢನಾಗಿ ದರ್ಶನ ನೀಡಿದ.
ಜಗದೊಡೆಯ ಶಿವಗೆ ನಮನ, ಮಹಾಶಿವರಾತ್ರಿಯ ಮಹತ್ವವೇನು?
ಶಿವರಾತ್ರಿಯ ಜಾಗರಣೆಗೆಂದೇ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ರಥಾರೂಢನಾಗಿ ಬಂದ ಮಂಜುನಾಥನನ್ನು ಕಣ್ತುಂಬಿಕೊಂಡರು. ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದ ಬಳಿಕ ಧರ್ಮಸ್ಥಳದ ಮಹಾದ್ವಾರದ ತನಕ ಮಂಜುನಾಥನ ಬೆಳ್ಳಿ ರಥೋತ್ಸವ ನಡೆದಿದೆ.
ಮಹಾಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ತಡರಾತ್ರಿಯವರೆಗೂ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇಂದು ಬೆಳಗ್ಗೆ ಒಂಭತ್ತು ಗಂಟೆಯ ನಂತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.