ಶ್ರೀ ಕ್ಷೇತ್ರ ಕಟೀಲಿನಲ್ಲಿ ಲಲಿತ ಪಂಚಮಿ ಸಂಭ್ರಮ: 25 ಸಾವಿರ ಮಹಿಳಾ ಭಕ್ತರಿಗೆ ದುರ್ಗೆಯ ಶೇಷವಸ್ತ್ರ ವಿತರಣೆ
ಮಂಗಳೂರು, ಅಕ್ಟೋಬರ್. 14: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದಸರಾ ಸಂಭ್ರಮ ಮುಗಿಲು ಮುಟ್ಟಿದೆ. ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ವಿಶೇಷ ಲಲಿತಾ ಪಂಚಮಿ ಮಹೋತ್ಸವ ಶನಿವಾರ (ಅ.13) ನಡೆಯಿತು.
ಪ್ರತೀ ವರ್ಷದಂತೆ ಈ ವರ್ಷವೂ ರಾತ್ರಿ ಅನ್ನ ಪ್ರಸಾದ ಸ್ವೀಕರಿಸಿದ ಮಹಿಳಾ ಭಕ್ತರಿಗೆ ದುರ್ಗೆಯ ಶೇಷವಸ್ತ್ರ ವಿತರಿಸಲಾಯಿತು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ರಾತ್ರಿ ಅನ್ನ ಪ್ರಸಾದ ಸ್ವೀಕರಿಸುವ ಮಹಿಳಾ ಭಕ್ತರಿಗೆ ಶೇಷ ವಸ್ತ್ರ ನೀಡುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ.
ಈ ಬಾರಿಯೂ ದೇವಳಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸುಮಾರು 25 ಸಾವಿರ ಮಹಿಳಾ ಭಕ್ತರಿಗೆ ಶೇಷವಸ್ತ್ರವನ್ನು ವಿತರಿಸಲಾಯಿತು. ಸಂಜೆ 5 ಗಂಟೆಯಿಂದಲೇ ಭಕ್ತರ ಸರದಿ ಪ್ರಾರಂಭವಾಗಿದ್ದು, ಭೋಜನ ಶಾಲೆಗೆ ಸರದಿಯಲ್ಲಿ ಹೋಗಲು ದೇವಸ್ಥಾನದ ಬಸ್ ನಿಲ್ದಾಣ ಕುದ್ರು ಮೂಲಕ ವ್ಯವಸ್ಥೆ ಮಾಡಲಾಗಿತ್ತು.
ತಡ ರಾತ್ರಿವರೆಗೂ ಭಕ್ತರು ದೇವಳಕ್ಕೆ ಭೇಟಿ ನೀಡಿ ನಂತರ ಅನ್ನ ಪ್ರಸಾದ ಸ್ವೀಕರಿಸುತ್ತಿದ್ದರು. ಮುಂದೆ ಓದಿ...

ಸೂಕ್ತ ವ್ಯವಸ್ಥೆ
ದೇವಸ್ಥಾನದಲ್ಲಿ ದೇವರ ದರ್ಶನ ಹಾಗೂ ಅನ್ನ ಪ್ರಸಾದ ವಿತರಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಟೀಲು ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದ ಮತ್ತಿತರ 300 ಕ್ಕೂ ಅಧಿಕ ಸ್ವಯಂ ಸೇವಕರು ಈ ಸಂದರ್ಭದಲ್ಲಿ ಪಾಲ್ಗೊಂಡರು.

ದೇವಿಯ ಶೇಷವಸ್ತ್ರ ವಿತರಣೆ
ನಿನ್ನೆ ಶನಿವಾರ (ಅ.13) ಒಂದೇ ದಿನ ಸುಮಾರು 35 ಸಾವಿರಕ್ಕೂ ಹೆಚ್ಚು ಮಂದಿ ಅನ್ನ ಪ್ರಸಾದ ಸ್ವೀಕರಿಸಿದರು. ನಂತರ ಮುಕ್ತೇಸರರು ಹಾಗು ಅರ್ಚಕರು ಮಹಿಳಾ ಭಕ್ತರಿಗೆ ದೇವಿಯ ಶೇಷವಸ್ತ್ರ ವಿತರಣೆ ಮಾಡಿದರು.

ಸೀರೆ ಅರ್ಪಣೆ
ದುರ್ಗೆಗೆ ಭಕ್ತರಿಂದ ವರ್ಷವಿಡೀ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಸೀರೆಯನ್ನು ಅರ್ಪಿಸುತ್ತಾರೆ. ಈ ಸೀರೆಯನ್ನು ರಂಗ ಪೂಜೆ, ಚಂಡಿಕಾ ಹೋಮ ಸೇವೆ ನೀಡುವ ಭಕ್ತರಿಗೆ ಮತ್ತು ದೇವಳಕ್ಕೆ ಭೇಟಿ ನೀಡುವ ಗಣ್ಯರಿಗೆ ಪ್ರಸಾದ ರೂಪವಾಗಿ ನೀಡುತ್ತಿದ್ದು, ಉಳಿದ ಸೀರೆಯನ್ನು ರವಕೆ ಕಣವಾಗಿ ಪರಿವರ್ತಿಸಿ, ನವರಾತ್ರಿಯ ಲಲಿತ ಪಂಚಮಿ ದಿನ ರಾತ್ರಿ ಅನ್ನ ಪ್ರಸಾದ ಸ್ವೀಕರಿಸುವ ಮಹಿಳಾ ಭಕ್ತರಿಗೆ ನೀಡಲಾಗುತ್ತದೆ.

ಐಶ್ವರ್ಯ ವೃದ್ಧಿ
ಈ ಸೀರೆಯನ್ನು ಭಕ್ತರು ತಮ್ಮ ಮನೆಯ ಕಪಾಟಿನಲ್ಲಿ ಇಡುತ್ತಾರೆ. ಇದರಿಂದ ತಮ್ಮ ಇಷ್ಟಾರ್ಥ ಸಿದ್ದಿಯಾಗುತ್ತದೆ, ಐಶ್ವರ್ಯ ವೃದ್ಧಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications