ಬ್ಯಾಂಕ್ ದರೋಡೆ ಮಾಡಿದ್ದ ಮೂವರು ಅರೆಸ್ಟ್, ಅಸಲಿಗೆ ಯಾರಿವರು?
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಮಂಗಳೂರಿನ ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ಮೂವರು ಆರೋಪಿಗಳು ಕೊನೆಗೂ ಅರೆಸ್ಟ್ ಆಗಿದ್ದಾರೆ. ಆರೋಪಿಗಳ ಬೆನ್ನುಹತ್ತಿರುವ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದರೋಡೆ ನಡೆದ ನಂತರ ಅವರು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ, ಎಸ್ಕೇಪ್ ಆಗಿದ್ದರು.
ಆದರೆ, ಆರೋಪಿಗಳ ಜಾಡು ಹಿಡಿದು ಹೋಗಿದ್ದ ಪೊಲೀಸರಿಗೆ ಕೊನೆಗೂ ತಮಿಳುನಾಡಿನಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಮಧುರೈ ಬಳಿ ಆರೋಪಿಗಳನ್ನು ಪೊಲೀಸರು ಲಾಕ್ ಮಾಡಿದ್ದಾರೆ. ಬ್ಯಾಂಕ್ ದರೋಡೆ ಬಳಿಕ ಅವರು ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳ ಬಳಿ 2 ಗೋಣಿಚೀಲ, ತಲ್ವಾರ್, 2 ಪಿಸ್ತೂಲ್ ಜಪ್ತಿ ಪತ್ತೆಯಾಗಿದ್ದು ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಬ್ಯಾಂಕ್ನ ದರೋಡೆಯ ಹಿಂದೆ ಮುಂಬೈ ಮೂಲದ ಗ್ಯಾಂಗ್ನ ಕೈವಾಡವಿದ್ದು, ತಮಿಳುನಾಡು ಮೂಲದ ಮುರುಗನ್, ಪ್ರಕಾಶ್ , ಮಣಿವಣ್ಣನ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಫಿಯೆಟ್ ಕಾರು, ಹಣ, ಚಿನ್ನ ತುಂಬಿಕೊಂಡು ಹೋಗಿದ್ದ ಎರಡು ಗೋಣಿ ಚೀಲಗ ಕೂಡ ಪತ್ತೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಏನಿದು ಪ್ರಕರಣ?: ಮಂಗಳೂರಿನ ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕಿಗೆ ನುಗ್ಗಿದ್ದ ದರೋಡೆಕೋರರು ಸಿನಿಮೀಯ ಶೈಲಿಯಲ್ಲಿ ಅಲ್ಲಿಂದ ಕೋಟಿಗಟ್ಟಲೆ ಹಣ ದರೋಡೆ ಮಾಡಿ ಪರಾರಿಯಾಗಿದ್ದರು. ಇದು ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಕಾರಿನಲ್ಲಿ ಬಂದಿದ್ದ ಆರೋಪಿಗಳು ದಿಢೀರನೆ ಬ್ಯಾಂಕ್ ಒಳಗೆ ನುಗ್ಗಿ ದರೋಡೆ ಮಾಡಿ ರಾಜಾರೋಷವಾಗಿ ಎಸ್ಕೇಪ್ ಆಗಿದ್ದರು.
ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿ ಶೀಘ್ರ ಆರೋಪಿಗಳ ಪತ್ತೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ದರೋಡೆ ಮಾಡಿ ಆರೋಪಿಗಳು ಇಷ್ಟು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟೆಲ್ಲಾ ಟೋಲ್ಗಳನ್ನ ದಾಟಿ ಹೋಗಿದ್ದಾರೆ. ತಕ್ಷಣ ಟೋಲ್ಗಳನ್ನ ಏಕೆ ಬಿಗಿ ಮಾಡಲಿಲ್ಲ? ಎಲ್ಲ ಟೋಲ್ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಬೇಕು ಎಂದು ಖಡಕ್ ಆಗಿ ಸೂಚಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಬಳಿಯ ಕೆ.ಸಿ.ರೋಡ್ನ ಸಹಕಾರಿ ಬ್ಯಾಂಕ್ನಲ್ಲಿ ಜನವರಿ 17ರಂದು ಕೋಟೆಕಾರು ಬ್ಯಾಂಕ್ನಲ್ಲಿ ದರೋಡೆ ನಡೆದಿತ್ತು. ಆರೋಪಿಗಳು ಮಹಾರಾಷ್ಟ್ರದ ಕಾರು ಬಳಸಿ ದರೋಡೆ ಮಾಡಿದ್ದು, ಹಣ ದೋಚಿಕೊಂಡು ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿಯಾಗಿದ್ದರು. ಸದ್ಯದ ಮಾಹಿತಿ ಪ್ರಕಾರ ಬಂಧಿತರೆಲ್ಲರೂ ತಮಿಳುನಾಡಿನ ಮೂಲದವರು ಎಂದೂ ತಿಳಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications