ವಿಷ ಪ್ರಸಾದ ದುರಂತ: ಮಾನವೀಯತೆ ಮೆರೆದ ಆಳ್ವಾಸ್
ಮಂಗಳೂರು, ಡಿಸೆಂಬರ್ 19: ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷಪ್ರಸಾದ ಸೇವಿಸಿ ಸಾವನ್ನಪ್ಪಿದ್ದ ಕೃಷ್ಣನಾಯ್ಕ್ -ಮೈಲಿಬಾಯಿ ದಂಪತಿಯ ಮನೆಗೆ ಮಂಗಳವಾರ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಕುರಿಯನ್ ಮತ್ತು ತಂಡ ಭೇಟಿ ನೀಡಿ 1 ಲಕ್ಷ ರೂಪಾಯಿ ಹಣ ನೀಡಿದ್ದಾರೆ.
ಈ ಘೋರ ದುರಂತದಲ್ಲಿ ಮೃತಪಟ್ಟ ಕೃಷ್ಣನಾಯ್ಕ್ -ಮೈಲಿಬಾಯಿ ದಂಪತಿಯ ಮೂವರು ಮಕ್ಕಳಿಗೆ ಉನ್ನತ ಶಿಕ್ಷಣ ಪಡೆದು ಉದ್ಯೋಗಕ್ಕೆ ಸೇರುವ ತನಕ ಉಚಿತ ಶಿಕ್ಷಣ, ಹಾಸ್ಟೆಲ್ ವ್ಯವಸ್ಥೆ ಹಾಗೂ ಉದ್ಯೋಗ ಕಲ್ಪಿಸುವ ಜವಬ್ದಾರಿಯನ್ನು ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರು ಹೊತ್ತುಕೊಂಡಿದ್ದು, ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಈ ಮಾನವೀಯ ಕೊಡುಗೆಯನ್ನು ಮಕ್ಕಳು ಒಪ್ಪಿದ್ದಾರೆ ಎಂದು ಹೇಳಲಾಗಿದೆ.
ದುರಂತದಲ್ಲಿ ಮೃತಪಟ್ಟ ದಂಪತಿಯ ಹಿರಿಯ ಮಗಳು ರಾಣಿಬಾಯಿ ಬಿಎಸ್ಸಿ , ಎರಡನೇ ಮಗಳು ಪ್ರಿಯಾಬಾಯಿ ಬಿಎಸ್ ಸಿ ನರ್ಸಿಂಗ್ ಹಾಗೂ ಮಗ ರಾಜೇಶ್ ನಾಯ್ಕ್ ಅವರ ಪಿಯುಸಿ ವ್ಯಾಸಂಗವನ್ನು ಆಳ್ವಾಸ್ ಶಿಕ್ಷ ಣ ಪ್ರತಿಷ್ಠಾನದಲ್ಲಿ ಉಚಿತವಾಗಿ ನೀಡುವ ಬಗ್ಗೆ ಮನವರಿಕೆ ಮಾಡಿದ್ದು ಅದಕ್ಕೆ ಅವರೂ ಸಮ್ಮತಿ ಸೂಚಿಸಿದ್ದಾರೆ.

ಪದವಿ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ ಯತಿಕುಮಾರ್ ಸ್ವಾಮಿ ಗೌಡ , ಕಾಮರ್ಸ್ ಡೀನ್ ಪ್ರಶಾಂತ್ ಹಾಗೂ ಉಪನ್ಯಾಸಕ ಅಂಬರೀಶ್ ಅವರು ನಿಯೋಗ ಕೃಷ್ಣನಾಯ್ಕ್-ಮೈಲಿಬಾಯಿ ದಂಪತಿಯ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಸಾಂತ್ವನ ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications