Get Updates
Get notified of breaking news, exclusive insights, and must-see stories!

ವಿಷ ಪ್ರಸಾದ ದುರಂತ: ಮಾನವೀಯತೆ ಮೆರೆದ ಆಳ್ವಾಸ್

ಮಂಗಳೂರು, ಡಿಸೆಂಬರ್ 19: ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷಪ್ರಸಾದ ಸೇವಿಸಿ ಸಾವನ್ನಪ್ಪಿದ್ದ ಕೃಷ್ಣನಾಯ್ಕ್ -ಮೈಲಿಬಾಯಿ ದಂಪತಿಯ ಮನೆಗೆ ಮಂಗಳವಾರ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಕುರಿಯನ್ ಮತ್ತು ತಂಡ ಭೇಟಿ ನೀಡಿ 1 ಲಕ್ಷ ರೂಪಾಯಿ ಹಣ ನೀಡಿದ್ದಾರೆ.

ಈ ಘೋರ ದುರಂತದಲ್ಲಿ ಮೃತಪಟ್ಟ ಕೃಷ್ಣನಾಯ್ಕ್ -ಮೈಲಿಬಾಯಿ ದಂಪತಿಯ ಮೂವರು ಮಕ್ಕಳಿಗೆ ಉನ್ನತ ಶಿಕ್ಷಣ ಪಡೆದು ಉದ್ಯೋಗಕ್ಕೆ ಸೇರುವ ತನಕ ಉಚಿತ ಶಿಕ್ಷಣ, ಹಾಸ್ಟೆಲ್ ವ್ಯವಸ್ಥೆ ಹಾಗೂ ಉದ್ಯೋಗ ಕಲ್ಪಿಸುವ ಜವಬ್ದಾರಿಯನ್ನು ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರು ಹೊತ್ತುಕೊಂಡಿದ್ದು, ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಈ ಮಾನವೀಯ ಕೊಡುಗೆಯನ್ನು ಮಕ್ಕಳು ಒಪ್ಪಿದ್ದಾರೆ ಎಂದು ಹೇಳಲಾಗಿದೆ.

ದುರಂತದಲ್ಲಿ ಮೃತಪಟ್ಟ ದಂಪತಿಯ ಹಿರಿಯ ಮಗಳು ರಾಣಿಬಾಯಿ ಬಿಎಸ್ಸಿ , ಎರಡನೇ ಮಗಳು ಪ್ರಿಯಾಬಾಯಿ ಬಿಎಸ್ ಸಿ ನರ್ಸಿಂಗ್‌ ಹಾಗೂ ಮಗ ರಾಜೇಶ್‌ ನಾಯ್ಕ್ ಅವರ ಪಿಯುಸಿ ವ್ಯಾಸಂಗವನ್ನು ಆಳ್ವಾಸ್ ಶಿಕ್ಷ ಣ ಪ್ರತಿಷ್ಠಾನದಲ್ಲಿ ಉಚಿತವಾಗಿ ನೀಡುವ ಬಗ್ಗೆ ಮನವರಿಕೆ ಮಾಡಿದ್ದು ಅದಕ್ಕೆ ಅವರೂ ಸಮ್ಮತಿ ಸೂಚಿಸಿದ್ದಾರೆ.

Three children agrees for Alvas Institutions Adoption

ಪದವಿ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ ಯತಿಕುಮಾರ್ ಸ್ವಾಮಿ ಗೌಡ , ಕಾಮರ್ಸ್ ಡೀನ್ ಪ್ರಶಾಂತ್ ಹಾಗೂ ಉಪನ್ಯಾಸಕ ಅಂಬರೀಶ್ ಅವರು ನಿಯೋಗ ಕೃಷ್ಣನಾಯ್ಕ್-ಮೈಲಿಬಾಯಿ ದಂಪತಿಯ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಸಾಂತ್ವನ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+