ಉಲ್ಲಾಳದಲ್ಲಿ ಬಸ್ ಅಪಘಾತ, ತಪ್ಪಿದ ಭಾರೀ ಅನಾಹುತ
ಮಂಗಳೂರು, ಜುಲೈ 22 : ಆ್ಯಕ್ಸಿಲ್ ತುಂಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಮನೆಯ ಕಾಪೌಂಡ್ಗೆ ಡಿಕ್ಕಿ ಹೊಡೆದಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ.
ಬುಧವಾರ ಬೆಳಗ್ಗೆ ಕುಂಪಲದ ಚಿತ್ರಾಂಜಲಿನಗರ ಸಮೀಪದ ವಿಜಯನಗರ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ 44 ನಂಬರ್ನ ಗಣೇಶ ಬಸ್ ಮಂಗಳೂರಿನಿಂದ ಬಗಂಬಿಲ ಕಡೆಗೆ ತೆರಳುತ್ತಿತ್ತು. [ಬಸ್ ಟಿಕೆಟ್ ನಲ್ಲಿಯೇ ಪ್ರೇಮ ಪತ್ರ ಬರೆದ ಕಂಡಕ್ಟರ್!]

ವಿಜಯನಗರ ಪ್ರದೇಶದಲ್ಲಿ ಬಸ್ಸಿನ ಆ್ಯಕ್ಸಿಲ್ ತುಂಡಾಗಿದ್ದು, ಅದು ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಎತ್ತರದ ಪ್ರದೇಶವಾದ್ದರಿಂದ ಹಿಮ್ಮುಖವಾಗಿ ಚಲಿಸಿದ ಬಸ್ ರಸ್ತೆ ಪಕ್ಕದಲ್ಲಿದ್ದ ನಾರಾಯಣ ಎಂಬವರ ಮನೆ ಕಾಪೌಂಡಿಗೆ ಡಿಕ್ಕಿ ಹೊಡೆದಿದೆ. [ಮಂಗಳೂರು-ಮುಂಬೈ ಐರಾವತ ಬಸ್ ಸೇವೆ ಸ್ಥಗಿತ]

ಬೆಳಗಿನ ಸಮಯವಾಗಿದ್ದರಿಂದಾಗಿ ಬಸ್ಸಿನಲ್ಲಿ ಪ್ರಯಾಣಿಕರು ತುಂಬಿದ್ದರು. ಆದರೆ, ಮೂವರು ಮಹಿಳೆಯರು ಮಾತ್ರ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಬಸ್ ಅಪಘಾತವಾದ ಪ್ರದೇಶದಲ್ಲಿ ಸೇತುವೆ ಇತ್ತು, ಮತ್ತೊಂದು ಕಡೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಇತ್ತು.

ಆದರೆ, ಬಸ್ ಕಾಪೌಂಡಿಗೆ ಗುದ್ದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಈ ಪ್ರದೇಶದಲ್ಲಿ ನಡೆದ ಮೂರನೇ ಅಪಘಾತವಿದಾಗಿದೆ. ಇದೇ ಜಾಗದಲ್ಲಿ ಹಿಂದೆ ಲಾರಿ, ಬಸ್ ಅಪಘಾತವಾಗಿತ್ತು.












Click it and Unblock the Notifications