ಬಜಿಲಕೇರಿಯಲ್ಲಿ 'ತಲ್ವಾರ್' ಕಾಳಗ: ಮೂವರಿಗೆ ಗಾಯ
ಮಂಗಳೂರು, ಜುಲೈ 14: ದುಷ್ಕರ್ಮಿಗಳ ತಂಡವೊಂದು ಏಕಾಏಕಿ ಮೂವರು ಯುವಕರ ಮೇಲೆ ತಲ್ವಾರ್ ದಾಳಿ ಮಾಡಿದ ಘಟನೆ ಮಂಗಳೂರಿನ ಬಜಿಲಕೇರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ತಲ್ವಾರ್ ದಾಳಿ ವೇಳೆ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಕಾರಣಕ್ಕೆ ತಲ್ವಾರ್ ದಾಳಿ ನಡೆಸಿದ್ದಾರೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಯುವಕರ ತಂಡದ ನಡುವೆ ವಾಗ್ವಾದ ನಡೆದಿದ್ದು, ಆಗ ತಲ್ವಾರ್ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದ ಮೇಲೂ ದುಷ್ಕರ್ಮಿಗಳು ಮನೆಯ ಮೇಲೆ ಪೊಲೀಸರ ಎದುರಲ್ಲೇ ಹಾನಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನಲ್ಲಿ ಏನಾಗ್ತಿದೆ?, ಹಿಂಜಾವೇ ಕಾರ್ಯಕರ್ತನ ಹತ್ಯೆಗೆ ಯತ್ನ
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕೆಲ ಪೊಲೀಸರನ್ನು ಬಜಿಲಕೇರಿ ಭಾಗದಲ್ಲಿ ನಿಯೋಜನೆ ಮಾಡಿದ್ದಾರೆ.
Comments
English summary
A team of youths attacked on three men by Talwar at bajilakeri in mangaluru yesterday night
Story first published: Tuesday, July 14, 2020, 9:47 [IST]