ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಡಿಕ್ಕಿ: ಮಂಗಳೂರು ಮೂಲದ ಮೂವರು ಯುವಕರ ಸಾವು
ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಡಿಕ್ಕಿ ಹೊಡೆದು ಮಂಗಳೂರು ಮೂಲದ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಗಳೂರು, ಫೆಬ್ರವರಿ 4: ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಡಿಕ್ಕಿ ಹೊಡೆದು ಮಂಗಳೂರು ಮೂಲದ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶುಕ್ರವಾರ ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಅಪಘಾತ ನಡೆದಿದೆ ಎನ್ನಲಾಗಿದೆ. ಮಂಗಳೂರು ಮೂಲದ ಅಕೀಲ್, ನಾಸಿರ್, ರಿಝ್ವಾನ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಹಳೆಯಂಗಡಿ ಕದಿಕೆ ಕೇಂದ್ರ ಜುಮಾ ಮಸೀದಿ ಬಳಿಯ ನಿವಾಸಿ ರಿಝ್ವಾನ್ ಅವರು ಕಳೆದ 4 ತಿಂಗಳ ಹಿಂದಷ್ಟೇ ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಇವರು ಬದ್ರುದ್ದೀನ್ ಮತ್ತು ಅಲೀಮಾ ದಂಪತಿಯ ನಾಲ್ಕು ಮಂದಿ ಮಕ್ಕಳ ಪೈಕಿ ಮೂವರು ಪುತ್ರಿಯರು ಹಾಗೂ ಏಕೈಕ ಪುತ್ರನಾಗಿದ್ದಾರೆ.

ಮೃತ ಮೂವರು ಯುವಕರು ಮನೆಯ ಜವಾಬ್ದಾರಿ ನಿಭಾಯಿಸಲು ಸೌದಿ ಅರೇಬಿಯಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಬಾಂಗ್ಲಾದೇಶದ ವ್ಯಕ್ತಿಯೊಂದಿಗೆ ಅಕೀಲ್, ನಾಸಿರ್, ರಿಝ್ವಾನ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಖುರೈಸ್ ರಸ್ತೆಯ ಬಳಿ ಬಂದಾಗ ಏಕಾಏಕಿ ಒಂಟೆ ಎದುರಾಗಿದ್ದು, ಕಾರು ಒಂಟೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಂಗಳೂರಿನ ಮೂವರು ಸೇರಿದಂತೆ ಬಾಂಗ್ಲಾದೇಶದ ಯುವಕ ನಾಸಿರ್ ಎನ್ನುವಾತ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಅಪಘಾತದ ಬಳಿಕ ನಾಲ್ವರ ಮೃತದೇಹವನ್ನು ಸೌದಿ ಅರೇಬಿಯಾದ ಹಸ್ಸಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಸದ್ಯ ಮೃತರ ಕುಟುಂಬಗಳನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದ್ದು, ಮೃತದೇಹಗಳನ್ನು ಮಂಗಳೂರಿಗೆ ತರಲು ಸಕಲ ಪ್ರಯತ್ನಗಳನ್ನು ಕೂಡ ಮಾಡಲಾಗುತ್ತಿದೆ.
ಮೃತ ಅಕೀಲ್ ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಝ್ವಾನ್ ಹಳೆಯಂಗಡಿ ಕದಿಕೆ ನಿವಾಸಿಯಾಗಿದ್ದಾರೆ. ಮತ್ತೊರ್ವನ ಮಾಹಿತಿ ಲಭ್ಯವಾಗಬೇಕಿದೆ. ಮೃತರ ಮನೆಗಳಿಗೆ ಈಗಾಗಲೇ ಸಾವಿನ ಸುದ್ದಿ ತಲುಪಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications