ಆ.29ರಂದು ಮಂಗಳೂರಿಗೆ ಟಿಬೆಟಿಯನ್ ಆಧ್ಯಾತ್ಮ ಗುರು ದಲೈಲಾಮ
ಮಂಗಳೂರು, ಆಗಸ್ಟ್ 27: ಟಿಬೆಟಿಯನ್ ಆಧ್ಯಾತ್ಮ ಗುರು ದಲೈಲಾಮ ಆಗಸ್ಟ್ 29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ದಲೈಲಾಮ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಸಲಾಗಿದ್ದು, ಭದ್ರತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
ಆಗಸ್ಟ್ 31ಕ್ಕೆ ದಕ್ಷಿಣ ಕನ್ನಡದ ನೆರೆಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ
ಆಗಸ್ಟ್ 29 ರಂದು ಮಧ್ಯಾಹ್ನ 12.20ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 31 ರಂದು ಬೆಳಿಗ್ಗೆ 7 ಗಂಟೆಗೆ ವಿಮಾನದ ಮೂಲಕ ಅವರು ಬೆಂಗಳೂರಿಗೆ ತೆರಳಲಿದ್ದಾರೆ.
ದಲೈಲಾಮ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ದೇಶದೊಳಗೆ ಒಳ ನುಸುಳಿರುವ ಉಗ್ರರು ವಿಧ್ವಂಸಕ ಕೃತ್ಯ ಎಸಗುವ ಆತಂಕವಿರುವ ಹಾಗೂ ದಲೈಲಾಮ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲಾ ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.