ರಮಾನಾಥ್ ರೈ ಅವರಿಗೆ ಟಿಪ್ಪು ರೋಲ್ ಮಾಡೆಲ್: ಹರಿಕೃಷ್ಣ ಬಂಟ್ವಾಳ ವಾಗ್ದಾಳಿ
ಮಂಗಳೂರು, ನವೆಂಬರ್ 15 : ಮಂಜಿ ಸಚಿವ ರಮಾನಾಥ್ ರೈ ಅವರಿಗೆ ಟಿಪ್ಪು ಈಗ ರೋಲ್ ಮಾಡೆಲ್ ಆಗಿದ್ದಾನೆ. ರಮಾನಾಥ ರೈ ಅವರು ಜಿಹಾದಿ ಸಂಸ್ಕೃತಿಯಲ್ಲಿದ್ದಾರೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಮಾದ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ನಳಿನ್ ಕುಮಾರ್ ಕಟೀಲ್ ಇದ್ದು ಸತ್ತ ಹಾಗೆ, ಶವಸಂಸ್ಕಾರ ಮಾತ್ರ ಬಾಕಿ ಎಂದು ರಮಾನಾಥ್ ರೈ ಇತ್ತೀಚೆಗೆ ಹೇಳಿಕೆ ನೀಡಿದ್ದರು. ರೈ ಜಿಹಾದಿ ಸಂಸ್ಕೃತಿಯಲ್ಲಿದ್ದಾರೆ ಎಂಬುದಕ್ಕೆ ಅವರ ಹೇಳಿಕೆ ಗಳೇ ಅನುಮಾನ ಮೂಡಿಸಿತ್ತಿವೆ ಎಂದು ಅವರು ಕಿಡಿಕಾರಿದರು.
ರಮಾನಾಥ್ ರೈ ಅವರಿಗೆ ಟಿಪ್ಪು ರೋಲ್ ಮಾಡಲ್ ಆಗಿರುವ ಹಿನ್ನೆಲೆಯಲ್ಲಿ ಅವರ ಬಾಯಲ್ಲಿ ಅಂತಹ ಹೇಳಿಕೆಗಳು ಬರ್ತಿದೆ ಎಂದು ಅವರು ವ್ಯಂಗ್ಯವಾಡಿದರು. ಶವ ಸಂಸ್ಕಾರ ನೋಡುವ ಮನೋ ಸ್ಥಿತಿ ಆತಂಕಕಾರಿ. ರೈ ಅವರು ಹಿಂದೂ ಮತ್ತು ಮುಸ್ಲಿಂ ಯುವಕರ ಸಾಕಷ್ಟು ಶವ ಸಂಸ್ಕಾರ ನೋಡಿದ್ದಾರೆ. ಮತ್ತೆ ಶವ ಸಂಸ್ಕಾರ ನೋಡುವ ಆಸೆ ಇವರಿಗೆ ಯಾಕೆ ಗೊತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಸ್ತುತ ಪರಿಸ್ಥಿಯಲ್ಲಿ ರಮಾನಾಥ ರೈ ಕಾಂಗ್ರೆಸ್ ನಲ್ಲಿ ಸಕ್ಕರೆ ಇಲ್ಲದ ಚಾ ದಂತಾಗಿದ್ದಾರೆ. ಕಾಂಗ್ರೆಸ್ ಸಚಿವರು, ಶಾಸಕರು ಸಾವಿನಲ್ಲಿ ಸಂಭ್ರಮಿಸುವ ಕಾಲಘಟ್ಟದಲ್ಲಿದ್ದಾರೆ. ಅಧಿಕಾರ ಇಲ್ಲದಿದ್ದರೂ ರೈ ಅವರು ಸರಕಾರಿ ಅಧಿಕಾರಿಗಳನ್ನು ಹಿಡಿದು ಧಿಮಾಕು ತೋರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ರೈ ಅವರ ಜಿಹಾದಿ ಮನೋಸ್ಥಿತಿ ನೋಡಿ ಅವರನ್ನು ಜನತೆ ಮನೆಗೆ ಕಳಿಸಿದ್ದಾರೆ. ಇದು ರಮಾನಾಥ ರೈ ಅವರ ರಾಜಕೀಯದ ಕೊನೆಯ ಕಾಲಘಟ್ಟ. ರಮಾನಾಥ ರೈ ದೊಡ್ಡ ದಡ್ಡ ಎಂದು ಅವರು ಕುಟುಕಿದರು. ವಿಜಯಾ ಬ್ಯಾಂಕ್ ವಿಲೀನಕ್ಕೆ ಸಹಿ ಹಾಕಿದ್ದು ಮನಮೋಹನ್ ಸಿಂಗ್. ನಿಮಗೆ ತಾಕತ್ತಿದ್ರೆ ಮನಮೋಹನ್ ಸಿಂಗ್ ರನ್ನು ಕೇಳಿನೋಡಿ ಎಂದು ಅವರು ರಮಾನಾಥ್ ರೈ ಅಸವರಿಗೆ ಸವಾಲು ಹಾಕಿದರು. ಇನ್ನುಮುಂದೆ ಸಂಸದ ನಳಿನ್ ವಿರುದ್ಧ ಮಾತಾಡಿದರೆ ನೀವು ಹೋದಲ್ಲಿ ಬಂದಲ್ಲಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications